ಬ್ರೇಕಿಂಗ್ ನ್ಯೂಸ್
17-03-26 01:40 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳು ಜೈಲು ಅಧೀಕ್ಷಕರು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದ್ದು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೈದಿಗಳಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಆಫ್ರಿದ್ ಮತ್ತು ಶೇಹರಾಜ್ ಅಲಿಯಾಸ್ ಶಾರೂಕ್ ಎಂಬವರು ಜೈಲಿನಲ್ಲಿ ದಾಂಧಲೆ ನಡೆಸಿದ್ದಾರೆ.
ಮಾರ್ಚ್ 13ರ ರಾತ್ರಿ ಸುಮಾರು 8 ಗಂಟೆಗೆ ಜೈಲು ಅಧೀಕ್ಷಕ ಶರಣಬಸಪ್ಪ ಅವರು ಕರ್ತವ್ಯದಲ್ಲಿದ್ದಾಗ, ವಿಚಾರಣಾಧೀನ ಕೈದಿ ಮೊಹಮ್ಮದ್ ಇಕ್ಬಾಲ್ ಅಧೀಕ್ಷಕರ ಕಚೇರಿಗೆ ನುಗ್ಗಿ ರಂಪಾಟ ಮಾಡಿದ್ದಾನೆ. ಹೊಸದಾಗಿ ಬರುವ ಕೈದಿಗಳನ್ನು ತನ್ನ ಸೂಚನೆಯಂತೆ ತನ್ನ ಕೊಠಡಿಗೇ ಸೇರಿಸಬೇಕು ಎಂದು ಪಟ್ಟು ಹಿಡಿದು ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ.
ಜೈಲು ಅಧೀಕ್ಷಕರಿಗೆ “ನೀನೇ ನನ್ನ ಟಾರ್ಗೆಟ್” ಎಂದು ಕೊಲೆ ಬೆದರಿಕೆ ಹಾಕಿದ್ದು, ಹಲ್ಲೆಗೆ ಮುಂದಾಗಿದ್ದಾನೆ. ಇದೇ ವೇಳೆ, ಈತನಿಗೆ ಸಾಥ್ ನೀಡಿದ ಮತ್ತೊಬ್ಬ ಕೈದಿ ಮೊಹಮ್ಮದ್ ಆಫ್ರೀದ್ ಪ್ಲಾಸ್ಟಿಕ್ ಕುರ್ಚಿಯಿಂದ ಸಿಬ್ಬಂದಿಗಳ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಇಬ್ಬರು ಕೈದಿಗಳು ಸೇರಿ ಜೈಲಿನಲ್ಲಿದ್ದ R.O. ವಾಟರ್ ಫಿಲ್ಟರ್ ಮೆಷಿನ್ ಮತ್ತು ಪೈಪ್ಗಳನ್ನು ಧ್ವಂಸಗೊಳಿಸಿದ್ದಾರೆ. ಇದರ ಅಂದಾಜು ಮೌಲ್ಯ ₹12,000 ಎಂದು ಹೇಳಲಾಗಿದೆ.
ಇದೇ ಸಮಯದಲ್ಲಿ ಶೇಹರಾಜ್ ಅಲಿಯಾಸ್ ಶಾರೂಕ್ ಎಂಬ ಕೈದಿ ಕೊಠಡಿಯ ಒಳಗಿನಿಂದಲೇ ಹಾಸಿಗೆ-ಹೊದಿಕೆಗಳಿಗೆ ಬೆಂಕಿ ಹಚ್ಚಿ, ಕ್ಯಾರಂ ಬೋರ್ಡ್ಗಳನ್ನು ಮುರಿದು ಹಲ್ಲೆ ಮಾಡಲು ಪ್ರಚೋದಿಸಿದ್ದಾನೆ. ಅಧೀಕ್ಷಕ ಶರಣಬಸಪ್ಪ ಅವರು ನೀಡಿದ ದೂರಿನ ಮೇರೆಗೆ ಮೂವರು ಕೈದಿಗಳ ವಿರುದ್ಧ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಜೀವ ಬೆದರಿಕೆ ಮತ್ತು ಸರ್ಕಾರಿ ಸ್ವತ್ತು ನಾಶಪಡಿಸಿದ ಆರೋಪದಡಿ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm