ಬ್ರೇಕಿಂಗ್ ನ್ಯೂಸ್
17-03-26 10:54 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ಭೂ ವ್ಯವಹಾರದಲ್ಲಿನ ವೈಷಮ್ಯದಿಂದ ವ್ಯಕ್ತಿಯೊಬ್ಬರು ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ತನ್ನ ಇನ್ನೋವಾ ಕಾರಿನಲ್ಲಿ ಡಿಕ್ಕಿಪಡಿಸಿ ಕೊಲೆಗೆ ಯತ್ನಿಸಿದ ಘಟನೆ ನಗರದ ಆರ್ಯ ಸಮಾಜ ರಸ್ತೆಯಲ್ಲಿ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಫಳ್ನೀರ್ ನಿವಾಸಿ ಮಹಮ್ಮದ್ ಶರೀಫ್ (26) ಎಂಬಾತ ಬಂಧಿತ. ಮಲ್ಲಿಕಟ್ಟೆ ನಿವಾಸಿ ಮೋಹನದಾಸ್ ಶೆಟ್ಟಿ (56) ಅವರಿಗೆ ಇನ್ನೋವಾ ಕಾರಿನಲ್ಲಿ ಡಿಕ್ಕಿಪಡಿಸಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಹಮ್ಮದ್ ಶರೀಫ್ ಮತ್ತು ಆತನ ತಂದೆ ಮಹಮ್ಮದ್ ಇಕ್ಬಾಲ್ ಎಂಬವರ ಜೊತೆಗೆ ಮೋಹನದಾಸ್ ಶೆಟ್ಟಿಗೆ ಭೂ ವ್ಯವಹಾರವಿದ್ದು, ಸುರತ್ಕಲ್ ನ ಕಾನ ಮತ್ತು ವಾವಂಜೂರಿನಲ್ಲಿ ಸುಮಾರು ಎರಡು ಕೋಟಿ ಮೌಲ್ಯದ ಜಾಗವನ್ನು ಖರೀದಿಸಲು ಹೂಡಿಕೆ ಮಾಡಿದ್ದರು. ವ್ಯವಹಾರದಲ್ಲಿ ಮೋಹನದಾಸ್ ಶೆಟ್ಟಿ ಮೋಸ ಮಾಡಿದ ಸಿಟ್ಟಿನಿಂದ ಇಂದು ಬೆಳಗ್ಗೆ 11 ಗಂಟೆಗೆ ನಗರದ ಆರ್ಯ ಸಮಾಜ ರಸ್ತೆಯ ಬದಿಯಲ್ಲಿ ಮಾತುಕತೆ ನಡೆಸಿದ್ದರು. ಈ ವೇಳೆ, ಮೋಹನದಾಸ ಶೆಟ್ಟಿಯವರ ಮೊಬೈಲ್ ಕಸಿದಿದ್ದು ನಂತರ ತನ್ನ ದ್ವಿಚಕ್ರ ವಾಹನವನ್ನು ಚಲಾಯಿಸಿಕೊಂಡು ಹೋಗುತ್ತಿರುವಾಗ ಆರೋಪಿ ವ್ಯಕ್ತಿ ಸಿಟ್ಟಿನಿಂದ ತನ್ನ ಇನೋವಾ ಕ್ರಿಸ್ಟಾ ಕಾರನ್ನು ಅತಿ ವೇಗವಾಗ ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಗುದ್ದಿ ಕೊಲೆಗೆ ಪ್ರಯತ್ನಿಸಿದ್ದಾನೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದಲ್ಲಿ ತನಿಖೆ ಕೈಗೊಂಡ ಪೊಲೀಸರು ಕೃತ್ಯವೆಸಗಿದ ಆರೋಪಿ ಮಹಮ್ಮದ್ ಶರೀಫ್ ಎಂಬಾತನನ್ನು ಪತ್ತೆಮಾಡಿ ದಸ್ತಗಿರಿ ಮಾಡಿದ್ದಾರೆ. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm