ಬ್ರೇಕಿಂಗ್ ನ್ಯೂಸ್
02-01-21 07:37 pm Udupi Correspondent ಕರಾವಳಿ
ಉಡುಪಿ, ಜ.2: ತಾಯಿ ಬೈದ ಕಾರಣಕ್ಕೆ ಸಿಟ್ಟಿಗೆದ್ದ ಬಾಲಕ ಫ್ಲ್ಯಾಟ್ನ ಬಾತ್ ರೂಮ್ನಲ್ಲಿ ಚಿಲಕ ಹಾಕಿ ಒಳಗೆ ಅವಿತುಕೊಂಡು ಮನೆಯವರು, ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿಯನ್ನೇ ಬೇಸ್ತು ಬೀಳಿಸಿದ್ದಾನೆ.
ಮಣಿಪಾಲ ಪ್ರೆಸ್ ಸಮೀಪ ಇರುವ ಏಳು ಮಹಡಿಯ ವಸತಿ ಸಮುಚ್ಛಯದ ನಾಲ್ಕನೇ ಮಹಡಿಯಲ್ಲಿ ಘಟನೆ ನಡೆದಿದೆ. ಉಡುಪಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ ಕುಮಾರ್ ನೇತೃತ್ವದಲ್ಲಿ ಒಟ್ಟು ಆರು ಮಂದಿ ಸಿಬ್ಬಂದಿ ಒಂದು ಗಂಟೆ ಕಾಲ ನಡೆಸಿದ ಕಾರ್ಯಾಚರಣೆಯಲ್ಲಿ ಬಾಲಕನನ್ನು ರಕ್ಷಣೆ ಮಾಡಿದ್ದಾರೆ.

ಮೊಬೈಲ್ ನೋಡುವ ವಿಚಾರದಲ್ಲಿ ತನ್ನ ಮಗನಿಗೆ ತಾಯಿ ಜ.1ರಂದು ರಾತ್ರಿ ಬೈದಿದ್ದರೆನ್ನಲಾಗಿದೆ. ಇದರಿಂದ ಸಿಟ್ಟಿಗೆದ್ದ 17ರ ಹರೆಯದ ಬಾಲಕ ಫ್ಲಾಟ್ನ ಬಾತ್ ರೂಮ್ಗೆ ಹೋಗಿ ಚಿಲಕ ಹಾಕಿಕೊಂಡಿದ್ದಾನೆ. ಎಷ್ಟು ಬಾಗಿಲು ಬಡಿದರೂ ತೆಗೆಯದ ಬಾಲಕ ಗಂಟೆಗಳ ಕಾಲ ಯಾವುದೇ ಮಾತಿಲ್ಲದೆ ಕುಳಿತುಕೊಂಡಿದ್ದ ಎನ್ನಲಾಗಿದೆ.
ಇದರಿಂದ ಭಯಭೀತರಾದ ಮನೆಯವರು ಕೂಡಲೇ ಉಡುಪಿ ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಸಿಬ್ಬಂದಿಗಳು, ಬಾಲಕನ ರಕ್ಷಣೆಗೆ ಕಾರ್ಯತಂತ್ರ ರೂಪಿಸಿದರು. ಬಾತ್ರೂಮ್ ಬಾಗಿಲು ಮುರಿದರೆ, ಬಾಲಕ ಬಾತ್ರೂಮ್ ಕಿಟಕಿಯಿಂದ ಹೊರಹಾರಬಹುದೆಂಬ ಅಪಾಯದ ಬಗ್ಗೆ ಮುನ್ನೆಚ್ಚರಿಕೆ ವಹಿಸಿದ್ದರು.
ಅದಕ್ಕಾಗಿ ಕಟ್ಟಡದ ಏಳನೇ ಮಹಡಿಯಿಂದ ಹಗ್ಗದ ಮೂಲಕ ಓರ್ವ ಸಿಬ್ಬಂದಿ ನಾಲ್ಕನೇ ಮಹಡಿಯ ಬಾತ್ರೂಮ್ನ ಕಿಟಕಿ ಬಳಿಗೆ ಇಳಿದು ಬಾಲಕ ಹೊರ ಹಾರದಂತೆ ತಡೆಯೊಡ್ಡಿದ್ದರು. ಅದೇ ವೇಳೆ ಒಳಗಿನಿಂದ ಬಾತ್ರೂಮ್ ಬಾಗಿಲನ್ನು ಮುರಿದ ಸಿಬ್ಬಂದಿ, ಬಾಲಕನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ.
A 12-year-old teen in udupi, who locked himself inside the bathroom for hours together as he was disturbed with the fact that his mother took away his mobile phone on which he was playing games, was rescued from the fourth floor of the apartment building.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am