ಬ್ರೇಕಿಂಗ್ ನ್ಯೂಸ್
02-01-21 08:11 pm Mangaluru Correspondent ಕರಾವಳಿ
ಮಂಗಳೂರು, ಜ.2: ಬಿಜೆಪಿ ಪಕ್ಷದ ಬಗ್ಗೆ ಟೀಕಿಸಿ ಬರೆದಿದ್ದ ಮಹಿಳೆಯೊಬ್ಬರನ್ನು ಅವಾಚ್ಯವಾಗಿ ನಿಂದಿಸಿ, ಗ್ಯಾಂಗ್ ರೇಪ್ ಮಾಡಬೇಕು ಎಂದು ಫೇಸ್ಬುಕ್ ನಲ್ಲಿ ಕರೆ ಕೊಟ್ಟ ವಿಚಾರದ ಬಗ್ಗೆ ಮಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಮ್ಯುನಿಸ್ಟ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತೆ ಆಗಿರುವ ಮಂಗಳೂರಿನ ಮಹಿಳೆಯೊಬ್ಬರು, ಫೇಸ್ಬುಕ್ ನಲ್ಲಿ ಬಿಜೆಪಿ ಪಕ್ಷದ ಕುರಿತ ಪರ- ವಿರೋಧ ಚರ್ಚೆಯಲ್ಲಿ ತನ್ನ ಅಭಿಪ್ರಾಯ ಹಾಕಿದ್ದರು. ಎಸ್ ಡಿಪಿಐ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ ಕೇಳಿಬಂದಿದ್ದ ಹಿನ್ನೆಲೆ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರ ಇರುವಾಗ ಎಸ್ ಡಿಪಿಐಯನ್ನು ನಿಷೇಧ ಯಾಕೆ ಮಾಡಿಲ್ಲ. ಬಿಜೆಪಿಯವರ ಕುತಂತ್ರಕ್ಕೆ ಎಸ್ ಡಿಪಿಐ ಬೇಕು, ಇದರಿಂದ ಅವರಿಗೆ ಲಾಭ ಇದೆ ಎಂದು ಟೀಕಿಸಿದ್ದರು.
ಚರ್ಚೆಯಲ್ಲಿ ಮಹಿಳೆ ತನ್ನ ಅಭಿಪ್ರಾಯ ಹೇಳಿಕೊಂಡಿದ್ದರು ಅಷ್ಟೇ. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ಬಾಬುರಾವ್ ಸರ್ದೇಸಾಯಿ ಎಂಬ ಹೆಸರಿನಲ್ಲಿ ಖಾತೆ ಹೊಂದಿರುವ ವ್ಯಕ್ತಿ ಅವಾಚ್ಯ ಪದಗಳಿಂದ ಮಹಿಳೆಯನ್ನು ನಿಂದಿಸಿದ್ದಾನೆ. ಅಲ್ಲದೆ, ಇನ್ನಿತರ ತನ್ನ ಸ್ನೇಹಿತರಿಗೆ ಈಕೆಯನ್ನು ಸಾಮೂಹಿಕ ಅತ್ಯಾಚಾರ ಮಾಡಬೇಕೆಂದು ಹೇಳಿದ್ದಾನೆ. ಈ ಬಗ್ಗೆ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಆತನಿಗೆ ಟ್ಯಾಗ್ ಮಾಡಿ ಬರೆದಿದ್ದು ಪ್ರಧಾನಿ ಮೋದಿಯನ್ನು ಅನುಸರಿಸುವ ಮಂದಿ ಇಷ್ಟು ಕೀಳು ಮಟ್ಟಕ್ಕೆ ಇಳಿಯಬಾರದು ಎಂದಿದ್ದಾರೆ.
ಬಾಬುರಾವ್ ಸರ್ದೇಸಾಯಿ ಬಿಜೆಪಿ ಕಾರ್ಯಕರ್ತನೇ, ಮೋದಿ ಅಭಿಮಾನಿಯೇ, ತಾನು ಎಲ್ಲಿಯವನು ಎಂಬ ಬಗ್ಗೆ ಪ್ರೊಫೈಲ್ ನಲ್ಲಿ ಹಾಕಿಕೊಂಡಿಲ್ಲ. ಈ ವಿಚಾರದ ಬಗ್ಗೆ ಮುನೀರ್ ಕಾಟಿಪಳ್ಳ ಮತ್ತು ಸ್ನೇಹಿತರು ಮಹಿಳೆಯ ಜೊತೆ ಸೇರಿ ಮಂಗಳೂರಿನ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
Social Activist of Mangalore Threatened of Gang Rape on social media for sharing her political view on BJP party. A case has been filed at the Cybercrime police station.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm