ಬ್ರೇಕಿಂಗ್ ನ್ಯೂಸ್
02-01-21 08:11 pm Mangaluru Correspondent ಕರಾವಳಿ
ಮಂಗಳೂರು, ಜ.2: ಬಿಜೆಪಿ ಪಕ್ಷದ ಬಗ್ಗೆ ಟೀಕಿಸಿ ಬರೆದಿದ್ದ ಮಹಿಳೆಯೊಬ್ಬರನ್ನು ಅವಾಚ್ಯವಾಗಿ ನಿಂದಿಸಿ, ಗ್ಯಾಂಗ್ ರೇಪ್ ಮಾಡಬೇಕು ಎಂದು ಫೇಸ್ಬುಕ್ ನಲ್ಲಿ ಕರೆ ಕೊಟ್ಟ ವಿಚಾರದ ಬಗ್ಗೆ ಮಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಮ್ಯುನಿಸ್ಟ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತೆ ಆಗಿರುವ ಮಂಗಳೂರಿನ ಮಹಿಳೆಯೊಬ್ಬರು, ಫೇಸ್ಬುಕ್ ನಲ್ಲಿ ಬಿಜೆಪಿ ಪಕ್ಷದ ಕುರಿತ ಪರ- ವಿರೋಧ ಚರ್ಚೆಯಲ್ಲಿ ತನ್ನ ಅಭಿಪ್ರಾಯ ಹಾಕಿದ್ದರು. ಎಸ್ ಡಿಪಿಐ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ ಕೇಳಿಬಂದಿದ್ದ ಹಿನ್ನೆಲೆ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರ ಇರುವಾಗ ಎಸ್ ಡಿಪಿಐಯನ್ನು ನಿಷೇಧ ಯಾಕೆ ಮಾಡಿಲ್ಲ. ಬಿಜೆಪಿಯವರ ಕುತಂತ್ರಕ್ಕೆ ಎಸ್ ಡಿಪಿಐ ಬೇಕು, ಇದರಿಂದ ಅವರಿಗೆ ಲಾಭ ಇದೆ ಎಂದು ಟೀಕಿಸಿದ್ದರು.


ಚರ್ಚೆಯಲ್ಲಿ ಮಹಿಳೆ ತನ್ನ ಅಭಿಪ್ರಾಯ ಹೇಳಿಕೊಂಡಿದ್ದರು ಅಷ್ಟೇ. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ಬಾಬುರಾವ್ ಸರ್ದೇಸಾಯಿ ಎಂಬ ಹೆಸರಿನಲ್ಲಿ ಖಾತೆ ಹೊಂದಿರುವ ವ್ಯಕ್ತಿ ಅವಾಚ್ಯ ಪದಗಳಿಂದ ಮಹಿಳೆಯನ್ನು ನಿಂದಿಸಿದ್ದಾನೆ. ಅಲ್ಲದೆ, ಇನ್ನಿತರ ತನ್ನ ಸ್ನೇಹಿತರಿಗೆ ಈಕೆಯನ್ನು ಸಾಮೂಹಿಕ ಅತ್ಯಾಚಾರ ಮಾಡಬೇಕೆಂದು ಹೇಳಿದ್ದಾನೆ. ಈ ಬಗ್ಗೆ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಆತನಿಗೆ ಟ್ಯಾಗ್ ಮಾಡಿ ಬರೆದಿದ್ದು ಪ್ರಧಾನಿ ಮೋದಿಯನ್ನು ಅನುಸರಿಸುವ ಮಂದಿ ಇಷ್ಟು ಕೀಳು ಮಟ್ಟಕ್ಕೆ ಇಳಿಯಬಾರದು ಎಂದಿದ್ದಾರೆ.
ಬಾಬುರಾವ್ ಸರ್ದೇಸಾಯಿ ಬಿಜೆಪಿ ಕಾರ್ಯಕರ್ತನೇ, ಮೋದಿ ಅಭಿಮಾನಿಯೇ, ತಾನು ಎಲ್ಲಿಯವನು ಎಂಬ ಬಗ್ಗೆ ಪ್ರೊಫೈಲ್ ನಲ್ಲಿ ಹಾಕಿಕೊಂಡಿಲ್ಲ. ಈ ವಿಚಾರದ ಬಗ್ಗೆ ಮುನೀರ್ ಕಾಟಿಪಳ್ಳ ಮತ್ತು ಸ್ನೇಹಿತರು ಮಹಿಳೆಯ ಜೊತೆ ಸೇರಿ ಮಂಗಳೂರಿನ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
Social Activist of Mangalore Threatened of Gang Rape on social media for sharing her political view on BJP party. A case has been filed at the Cybercrime police station.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am