ಬ್ರೇಕಿಂಗ್ ನ್ಯೂಸ್
19-03-26 01:05 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 19: ಮೂಡುಬಿದರೆ ಪೊಲೀಸ್ ಠಾಣಾ ಸರಹದ್ದಿನ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ಕೋಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆಯ ನೆಪದಲ್ಲಿ ಕೋಳಿ ಅಂಕ ನಡೆಸಿದ್ದು ಪೊಲೀಸರು ದಾಳಿ ನಡೆಸಿ ಆರು ಜನರನ್ನು ಬಂಧಿಸಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವಿರುದ್ಧವೂ ಕೇಸು ದಾಖಲಿಸಿದ್ದಾರೆ.
ರಾಜೇಂದ್ರ ಪೂಜಾರಿ ಹಾಗೂ ರಾಜೇಶ್ ಬಲ್ಲಾಳ್ ಎಂಬವರ ನೇತೃತ್ವದಲ್ಲಿ ಕೆಲವು ವ್ಯಕ್ತಿಗಳು ಅಕ್ರಮವಾಗಿ ಸೇರಿಕೂಂಡು ಕೋಳಿಗಳಿಗೆ ಹರಿತವಾದ ಕತ್ತಿಗಳನ್ನು ಕಟ್ಟಿ ಹಿಂಸಾತ್ಮಕವಾಗಿ ಕಾದಾಡಲು ಬಿಟ್ಟು ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದರು. ದಾಳಿ ನಡೆಸಿದ ಪೊಲೀಸರು ಕೋಳಿ ಅಂಕದಲ್ಲಿ ನಿರತರಾಗಿದ್ದ 6 ಜನ ಆರೋಪಿಗಳನ್ನು ಹಾಗೂ ಕೋಳಿ ಅಂಕದಲ್ಲಿ ಪಣಕ್ಕಿಟ್ಟಿದ್ದ 1480/- ರೂ. ಹಣವನ್ನು ಹಾಗೂ 17 ಜೀವಂತ ಹುಂಜಗಳು ಮತ್ತು ಕೋಳಿ ಅಂಕಕ್ಕೆ ಬಳಸುವ ಎರಡು ಬಾಳ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ದೈವಸ್ದಾನದ ವ್ಯವಸ್ದಾಪನಾ ಸಮಿತಿ ಹಾಗೂ ಆರೋಪಿಗಳ ಮೇಲೆ ಮೂಡಬಿದ್ರೆ ಪೊಲೀಸ್ ಠಾಣಾ ಅ ಕ್ರ 30/2026 ಕಲಂ 189(2), 193 ಜೊತೆಗೆ 190 ಬಿ ಎನ್ ಎಸ್ ಮತ್ತು 87, 93 ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 11(1)(ಟಿ) ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆ 1960 ರಂತೆ ಪ್ರಕರಣ ದಾಖಲಿಸಿದ್ದಾರೆ.

ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಮಿಷನರ್ ಸುಧೀರ್ ರೆಡ್ಡಿ, ಜಾತ್ರೆಯ ಸಂಪ್ರದಾಯ ಎಂದು ಒಂದು ದಿನ ಕೋಳಿ ಅಂಕ ನಡೆಸಲು ಬಿಡಲಾಗಿತ್ತು. ಆನಂತರವೂ ಕೋಳಿ ಅಂಕ ನಡೆಸುವುದು ಜೂಜಿನ ಸಂಸ್ಕೃತಿಯಾಗುತ್ತದೆ. ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಹಣ ಪಣಕ್ಕಿಟ್ಟು ಮತ್ತೆ ಅದನ್ನೇ ಮುಂದುವರಿಸುವುದು ಸಂಪ್ರದಾಯ ಪಾಲನೆ ಆಗುವುದಿಲ್ಲ. ಕಾನೂನು ತನ್ನ ಕೆಲಸ ಮಾಡುತ್ತದೆ ಎಂದು ಹೇಳಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm