ಬ್ರೇಕಿಂಗ್ ನ್ಯೂಸ್
19-03-26 02:51 pm HK News Staffer ಕರಾವಳಿ
ಉಡುಪಿ, ಮಾರ್ಚ್ 19: ಗಲ್ಫ್ ಯುದ್ದದಿಂದಾಗಿ ಉಂಟಾಗಿರುವ ಎಲ್ ಪಿಜಿ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು ಇದೀಗ ಗ್ಯಾಸ್ ಸಿಲಿಂಡರ್ ಕುರಿತಾಗಿ ಮೆಸೇಜ್ ಗಳನ್ನು ಕಳುಹಿಸಿ ಅಮಾಯಕರನ್ನು ಬಲೆಗೆ ಬೀಳಿಸಲು ಮುಂದಾಗಿದ್ದಾರೆ. ಉಡಪಿಯಲ್ಲಿ ಇತ್ತೀಚೆಗೆ ಇಂತಹ ಎರಡು ಪ್ರಕರಣಗಳು ಬೆಳಕಿಗೆ ಬಂದಿದೆ.
ಕೇವಲ 20 ರೂ. ಗ್ಯಾಸ್ ಬಿಲ್ ಬಾಕಿ ಇದೆ ಎಂದು ನಂಬಿಸಿ, ವೃದ್ಧ ದಂಪತಿಗಳ ಬ್ಯಾಂಕ್ ಖಾತೆಯಿಂದ ಸುಮಾರು ₹9.78 ಲಕ್ಷ ಹಣವನ್ನು ಲೂಟಿ ಮಾಡಿರುವ ಘಟನೆ ಉಡುಪಿ ನಗರದ ಶಿವಳ್ಳಿಯಲ್ಲಿ ನಡೆದಿದೆ. ಶಿವಳ್ಳಿ ನಿವಾಸಿ ರವಿದಾಸ್ ರಾಘವೇಂದ್ರ ನಾಯಕ್ ಅವರಿಗೆ ಮಾರ್ಚ್ 17ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ಗ್ಯಾಸ್ ಬಿಲ್ ₹20 ಬಾಕಿ ಇದೆ ಎಂದು ತಿಳಿಸಿದ್ದಾನೆ. ಬಳಿಕ ವಾಟ್ಸಾಪ್ ಮೂಲಕ ‘Mahangar Gas Bill Update.apk’ ಎಂಬ ಲಿಂಕ್ ಕಳುಹಿಸಿ, ಅದನ್ನು ಡೌನ್ಲೋಡ್ ಮಾಡುವಂತೆ ಸೂಚಿಸಿದ್ದಾನೆ. ರವಿದಾಸ್ ಅವರು ಆ ಲಿಂಕ್ ಒತ್ತಿದ ತಕ್ಷಣ ಅವರ ಫೋನ್ ಹ್ಯಾಕ್ ಆಗಿದೆ.
ಬಿಲ್ ಪಾವತಿಯಾಗಿಲ್ಲ ಎಂಬ ನೆಪವೊಡ್ಡಿ ಆರೋಪಿ ದಂಪತಿಗಳ ಬಂಧನ್ ಬ್ಯಾಂಕ್, ಯೆಸ್ ಬ್ಯಾಂಕ್ ಹಾಗೂ ಹೆಚ್ಡಿಎಫ್ಸಿ ಬ್ಯಾಂಕಿನ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ವಿವರಗಳನ್ನು ಪಡೆದಿದ್ದಾನೆ. ಕ್ಷಣಾರ್ಧದಲ್ಲಿ ಮೂರೂ ಬ್ಯಾಂಕ್ ಖಾತೆಗಳಿಂದ ಒಟ್ಟು ₹9,78,036.50/- ಹಣವನ್ನು ವರ್ಗಾಯಿಸಿ ವಂಚಿಸಿದ್ದಾನೆ. ಈ ಕುರಿತು ಉಡುಪಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಐಟಿ ಆಕ್ಟ್ ಹಾಗೂ ಬಿಎನ್ಎಸ್ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಉಡುಪಿ ಎಸ್ಪಿ ಹರಿರಾಮ್ ಶಂಕರ್ ಸೈಬರ್ ವಂಚನೆಯ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ತಿಳಿಸಿದ್ದಾರೆ. ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡು ಸೈಬರ್ ವಂಚಕರು ಗ್ಯಾಸ್ ಬುಕ್ಕಿಂಗ್ ಅಥವಾ ಗ್ಯಾಸ್ ಸಿಲಿಂಡರ್ ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಮೋಸ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಅಪರಿಚಿತರಿಂದ ಬರುವ ಲಿಂಕ್ಗಳು ಅಥವಾ ಎಪಿಕೆ ಫೈಲ್ಗಳನ್ನು ತೆರೆಯದೇ ಜಾಗರೂಕರಾಗಿರಬೇಕು ಎಂದು ತಿಳಿಸಿದ್ದಾರೆ. ಈ ರೀತಿಯ ವಂಚನೆಗೆ ಈಗಾಗಲೇ ಉಡುಪಿ ಜಿಲ್ಲೆಯ ಇಬ್ಬರು ವ್ಯಕ್ತಿಗಳು ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿರುವುದಾಗಿ ತಿಳಿದುಬಂದಿದೆ. ಸಾರ್ವಜನಿಕರು ಯಾವುದೇ ಅನುಮಾನಾಸ್ಪದ ಸಂದೇಶಗಳು, ಕರೆಗಳು ಅಥವಾ ಲಿಂಕ್ಗಳ ಬಗ್ಗೆ ಎಚ್ಚರಿಕೆ ವಹಿಸಿ, ಅಧಿಕೃತ ಮೂಲಗಳ ಮೂಲಕವೇ ಗ್ಯಾಸ್ ಬುಕ್ಕಿಂಗ್ ಹಾಗೂ ಕೆವೈಸಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ಎಸ್ಪಿ ಮನವಿ ಮಾಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm