ಬ್ರೇಕಿಂಗ್ ನ್ಯೂಸ್
19-03-26 11:30 pm HK News Desk ಕರಾವಳಿ
ಮಂಗಳೂರು, ಮಾರ್ಚ್ 19: ಮಾರ್ಚ್ 19ರ ಗುರುವಾರ ಸಂಜೆಯೇ ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಭಾಗದಲ್ಲಿ ಚಂದ್ರದರ್ಶನ ಆಗಿರುವ ಹಿನ್ನೆಲೆಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಫಿತರ್ ಮಾರ್ಚ್ 20ರ ಶುಕ್ರವಾರವೇ ನಡೆಯಲಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬದ ಸಾರ್ವತ್ರಿಕ ರಜೆಯನ್ನು ಶುಕ್ರವಾರವೇ ನೀಡಲಾಗಿದೆ.
ಈದುಲ್ ಫಿತರ್ ಹಬ್ಬವು ಶುಕ್ರವಾರ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್.ವಿ ದರ್ಶನ್ ಆದೇಶಿಸಿದ್ದಾರೆ. ಒಂದು ತಿಂಗಳ ಕಾಲ ರಂಜಾನ್ ಉಪವಾಸದ ಬಳಿಕ ಕೊನೆಯ ದಿನವನ್ನು ಈದುಲ್ ಫಿತರ್ ಎಂದು ಆಚರಿಸಲಾಗುತ್ತದೆ. ಮುಸ್ಲಿಮರು ಇದನ್ನು ಸಂಭ್ರಮದ ದಿನವಾಗಿ ಆಚರಿಸುತ್ತಾರೆ.
ಕರ್ನಾಟಕದ ಇತರೇ ಭಾಗದಲ್ಲಿ ಈ ಹಬ್ಬವನ್ನು ಶನಿವಾರ ಮಾರ್ಚ್ 21ರಂದೇ ಆಚರಣೆ ಮಾಡಲಾಗುತ್ತದೆ. ಆದರೆ ದಕ್ಷಿಣ ಕನ್ನಡ ಖಾಜಿಯವರು ಕೇರಳದ ಆಚರಣಾ ಪದ್ಧತಿಯನ್ನು ಅನುಸರಿಸುವುದಲ್ಲದೆ, ಕೇರಳಕ್ಕೆ ಹತ್ತಿರ ಇರುವುದರಿಂದ ಚಂದ್ರ ದರ್ಶನ ಆಗಿರುವುದನ್ನು ಘೋಷಿಸುತ್ತಾರೆ. ಇದರಂತೆ, ಕರಾವಳಿ ಭಾಗದ ಮುಸ್ಲಿಂ ಸಮುದಾಯದ ಜನರು ಶುಕ್ರವಾರವೇ ಹಬ್ಬದ ಆಚರಣೆ ಮಾಡುತ್ತಾರೆ. ಇದರಂತೆ, ಹಬ್ಬದ ಆಚರಣೆಗೆ ಅನುವಾಗುವಂತೆ ಶಾಲೆ, ಕಾಲೇಜುಗಳಿಗೆ ಶುಕ್ರವಾರವೇ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am