ಬ್ರೇಕಿಂಗ್ ನ್ಯೂಸ್
21-03-26 06:31 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 21: ಯುವಕನೊಬ್ಬ ಪಾನಮತ್ತನಾಗಿ ಬಂದು ಮೆಲ್ಕಾರ್ ಗುಡ್ಡೆಯಂಗಡಿ ಎಂಬಲ್ಲಿರುವ ಪೆಟ್ರೋಲ್ ಪಂಪ್ ನಲ್ಲಿ ದಾಂಧಲೆಗೈದು ಅಲ್ಲಿದ್ದ ಸೊತ್ತುಗಳನ್ನು ಧ್ವಂಸಗೈದ ಘಟನೆ ನಡೆದಿದ್ದು, ಪೊಲೀಸ್ ಒಬ್ಬರ ಎದುರಲ್ಲೇ ಆವಾಜ್ ಹಾಕುತ್ತಾ ಸ್ಥಳದಲ್ಲಿ ಹೈಡ್ರಾಮಾ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿದೆ.
ಮಾರ್ಚ್ 20ರಂದು ಸಂಜೆ ಘಟನೆ ನಡೆದಿದ್ದು, ಸಜಪಮೂಡ ಕಾರಾಜೆಯ ಅಫ್ರೀದ್ (28) ಎನ್ನುವ ಯುವಕ ಕುಡಿದು ತೂರಾಡುತ್ತಾ ಗ್ಯಾಸ್ ಹಾಕುತ್ತಿದ್ದ ಸಿಬಂದಿ ಬಳಿಗೆ ಬಂದಿದ್ದಾನೆ. ಅಲ್ಲಿದ್ದ ಸಿಬಂದಿ ಜೊತೆಗೆ ವಾಗ್ವಾದ ನಡೆಸಿ ಒಬ್ಬನಿಗೆ ಹಲ್ಲೆ ನಡೆಸಿದ್ದಾನೆ. ಆನಂತರ, ಗ್ಯಾಸ್ ಪೈಪನ್ನು ಎಳೆದು ಕಾಲಿನಲ್ಲಿ ತುಳಿದು ಅಲ್ಲಿದ್ದ ಇತರೇ ಉಪಕರಣಗಳಿಗೂ ಹಾನಿ ಮಾಡಿದ್ದಲ್ಲದೆ, ಸಿಬಂದಿಯನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ.



ಬಳಿಕ ಸ್ಥಳಕ್ಕೆ ಬಂದ ಬೀಟ್ ಪೊಲೀಸ್ ಒಬ್ಬರು ರಂಪಾಟ ಮಾಡುತ್ತಿದ್ದ ಯುವಕನನ್ನು ಎತ್ತಿಕೊಂಡು ಹೋಗಲು ಠಾಣೆಯಿಂದ ಪೊಲೀಸ್ ಜೀಪ್ ಬರಲು ಹೇಳಿದ್ದಾರೆ. ಆದರೆ ಅಷ್ಟರಲ್ಲೇ ಪೊಲೀಸರಿಗೂ ಆವಾಜ್ ಹಾಕುತ್ತಾ ಅವರಿಗೂ ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಳಿಕ ಪೊಲೀಸ್ ಜೀಪ್ ಬರುತ್ತಲೇ ಅಲ್ಲಿಂದ ಆತನನ್ನು ಎಳಕೊಂಡು ಜೀಪಿಗೆ ತಳ್ಳಿ ಠಾಣೆಗೆ ಒಯ್ದಿದ್ದಾರೆ.
ಘಟನೆ ಬಗ್ಗೆ ಪೆಟ್ರೋಲ್ ಪಂಪ್ ಮ್ಯಾನೇಜರ್ ಆಗಿರುವ ಕುನಾಲ್ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದು, ಆರೋಪಿ ಆಟೋ ಚಾಲಕನ ವಿರುದ್ಧ 115(2), 287, 324(4), 351(2) ಹಾಗೂ 352 ಅಡಿ ಕೇಸು ದಾಖಲಿಸಿದ್ದಾರೆ. ಆರೋಪಿ ಯುವಕ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದರೂ ಅಲ್ಲಿಗೆ ಆಟೋ ತಂದಿರಲಿಲ್ಲ. ಕುಡಿದು ತೂರಾಡುತ್ತಾ ನಡೆದುಕೊಂಡೇ ಬಂದಿದ್ದು ಸ್ಥಳದಲ್ಲಿ ಗಲಾಟೆ ನಡೆಸಿದ್ದಾನೆ.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm