ಬ್ರೇಕಿಂಗ್ ನ್ಯೂಸ್
21-03-26 06:31 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 21: ಯುವಕನೊಬ್ಬ ಪಾನಮತ್ತನಾಗಿ ಬಂದು ಮೆಲ್ಕಾರ್ ಗುಡ್ಡೆಯಂಗಡಿ ಎಂಬಲ್ಲಿರುವ ಪೆಟ್ರೋಲ್ ಪಂಪ್ ನಲ್ಲಿ ದಾಂಧಲೆಗೈದು ಅಲ್ಲಿದ್ದ ಸೊತ್ತುಗಳನ್ನು ಧ್ವಂಸಗೈದ ಘಟನೆ ನಡೆದಿದ್ದು, ಪೊಲೀಸ್ ಒಬ್ಬರ ಎದುರಲ್ಲೇ ಆವಾಜ್ ಹಾಕುತ್ತಾ ಸ್ಥಳದಲ್ಲಿ ಹೈಡ್ರಾಮಾ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿದೆ.
ಮಾರ್ಚ್ 20ರಂದು ಸಂಜೆ ಘಟನೆ ನಡೆದಿದ್ದು, ಸಜಪಮೂಡ ಕಾರಾಜೆಯ ಅಫ್ರೀದ್ (28) ಎನ್ನುವ ಯುವಕ ಕುಡಿದು ತೂರಾಡುತ್ತಾ ಗ್ಯಾಸ್ ಹಾಕುತ್ತಿದ್ದ ಸಿಬಂದಿ ಬಳಿಗೆ ಬಂದಿದ್ದಾನೆ. ಅಲ್ಲಿದ್ದ ಸಿಬಂದಿ ಜೊತೆಗೆ ವಾಗ್ವಾದ ನಡೆಸಿ ಒಬ್ಬನಿಗೆ ಹಲ್ಲೆ ನಡೆಸಿದ್ದಾನೆ. ಆನಂತರ, ಗ್ಯಾಸ್ ಪೈಪನ್ನು ಎಳೆದು ಕಾಲಿನಲ್ಲಿ ತುಳಿದು ಅಲ್ಲಿದ್ದ ಇತರೇ ಉಪಕರಣಗಳಿಗೂ ಹಾನಿ ಮಾಡಿದ್ದಲ್ಲದೆ, ಸಿಬಂದಿಯನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ.



ಬಳಿಕ ಸ್ಥಳಕ್ಕೆ ಬಂದ ಬೀಟ್ ಪೊಲೀಸ್ ಒಬ್ಬರು ರಂಪಾಟ ಮಾಡುತ್ತಿದ್ದ ಯುವಕನನ್ನು ಎತ್ತಿಕೊಂಡು ಹೋಗಲು ಠಾಣೆಯಿಂದ ಪೊಲೀಸ್ ಜೀಪ್ ಬರಲು ಹೇಳಿದ್ದಾರೆ. ಆದರೆ ಅಷ್ಟರಲ್ಲೇ ಪೊಲೀಸರಿಗೂ ಆವಾಜ್ ಹಾಕುತ್ತಾ ಅವರಿಗೂ ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಳಿಕ ಪೊಲೀಸ್ ಜೀಪ್ ಬರುತ್ತಲೇ ಅಲ್ಲಿಂದ ಆತನನ್ನು ಎಳಕೊಂಡು ಜೀಪಿಗೆ ತಳ್ಳಿ ಠಾಣೆಗೆ ಒಯ್ದಿದ್ದಾರೆ.
ಘಟನೆ ಬಗ್ಗೆ ಪೆಟ್ರೋಲ್ ಪಂಪ್ ಮ್ಯಾನೇಜರ್ ಆಗಿರುವ ಕುನಾಲ್ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದು, ಆರೋಪಿ ಆಟೋ ಚಾಲಕನ ವಿರುದ್ಧ 115(2), 287, 324(4), 351(2) ಹಾಗೂ 352 ಅಡಿ ಕೇಸು ದಾಖಲಿಸಿದ್ದಾರೆ. ಆರೋಪಿ ಯುವಕ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದರೂ ಅಲ್ಲಿಗೆ ಆಟೋ ತಂದಿರಲಿಲ್ಲ. ಕುಡಿದು ತೂರಾಡುತ್ತಾ ನಡೆದುಕೊಂಡೇ ಬಂದಿದ್ದು ಸ್ಥಳದಲ್ಲಿ ಗಲಾಟೆ ನಡೆಸಿದ್ದಾನೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm