ಬ್ರೇಕಿಂಗ್ ನ್ಯೂಸ್
11-08-20 02:47 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 11: ಪುತ್ತೂರು ನಗರ ಠಾಣಾ ಪೊಲೀಸರು ಬೃಹತ್ ಗಾಂಜಾ ಅಕ್ರಮ ಜಾಲವನ್ನು ಭೇದಿಸಿದ್ದಾರೆ. ಕೇರಳದಿಂದ ಕರ್ನಾಟಕಕ್ಕೆ ತರಲಾಗುತ್ತಿದ್ದ 17.5 ಲಕ್ಷ ಮೌಲ್ಯದ 175 ಕೇಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದು ಮೂವರನ್ನು ಬಂಧಿಸಿದ್ದಾರೆ.
ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ಎಂಬಲ್ಲಿ ಕೆಎ 19 ಎಎ 9294 ನೋಂದಣಿಯ ಪಿಕ್ ಅಪ್ ವಾಹನ ಮತ್ತು ಕೆಎಲ್ 14 ಎಕ್ಸ್ 9707 ನೋಂದಣಿಯ ಕಾರಿನಲ್ಲಿ 175 ಕೇಜಿ ಗಾಂಜಾ ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಪಿಕ್ ಅಪ್ ವಾಹನದಲ್ಲಿ ಗಾಂಜಾ ಪ್ಯಾಕೆಟ್ ಮೇಲೆ ಹಸಿ ಮೆಕ್ಕೆಜೋಳ ರಾಶಿಯನ್ನು ಹಾಕಲಾಗಿತ್ತು. ಮೇಲ್ಭಾಗದಲ್ಲಿ ಜೋಳದ ಸಾಗಾಟ ನಡೆಸುತ್ತಿರುವ ರೀತಿ ಬಿಂಬಿಸಲಾಗಿತ್ತು. ಪೊಲೀಸರು ತಪಾಸಣೆ ನಡೆಸಿದಾಗ, ಬೃಹತ್ ಗಾಂಜಾ ಸಾಗಾಟ ಜಾಲ ಬಯಲಾಗಿದೆ. ವಾಹನ ಮತ್ತು ಸೊತ್ತುಗಳ ಜೊತೆ ಮೂವರನ್ನು ಬಂಧಿಸಿದ್ದು ಆರೋಪಿಗಳಾದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೀಂಜ ನಿವಾಸಿ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು (26) , ಮಂಜೇಶ್ವರದ ಮಜೀರ್ ಪಳ್ಳ ನಿವಾಸಿ ಮೊಹಮ್ಮದ್ ಶಫೀಕ್ (31), ಕನ್ಯಾನ ಗ್ರಾಮದ ನಿವಾಸಿ ಖಲಂದರ್ ಶಾಫಿ(26) ವಿರುದ್ಧ ಎನ್ ಡಿಪಿಎಸ್ ಏಕ್ಟ್ ಅಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಪೈಕಿ ಇಬ್ರಾಹಿಂ ವಿರುದ್ಧ ಮಂಜೇಶ್ವರ ಠಾಣೆಯಲ್ಲಿ 7 ಪ್ರಕರಣ, ಕುಂಬಳೆ ಠಾಣೆಯಲ್ಲಿ 2 ಪ್ರಕರಣ, ಖಲಂದರ್ ಶಾಫಿ ವಿರುದ್ಧ 2 ಅಕ್ರಮ ಗಾಂಜಾ ಅಕ್ರಮ ಪ್ರಕರಣ, ಒಂದು ಕೊಲೆ ಯತ್ನ ಪ್ರಕರಣ ಹಾಗೂ ಕಾವೂರು ಠಾಣೆಯಲ್ಲಿ ಒಂದು ಅಕ್ರಮ ಗಾಂಜಾ ಸಾಗಾಟ ಪ್ರಕರಣ ದಾಖಲಾಗಿರುತ್ತದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm