ಬ್ರೇಕಿಂಗ್ ನ್ಯೂಸ್
22-03-26 07:30 pm HK News Staffer ಕರಾವಳಿ
ಉಡುಪಿ, ಮಾರ್ಚ್ 22: ಜಿಲ್ಲೆಯ ರಾಜಕೀಯದಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ವಾಗ್ವಾದ ತೀವ್ರಗೊಂಡಿದೆ. ಮಾಜಿ ಶಾಸಕ ರಘುಪತಿ ಭಟ್ ಹಾಲಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಗಂಭೀರ ಆರೋಪಗಳನ್ನು ಹೊರ ಹಾಕಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಬಡಾನಿಡಿಯೂರು ಗ್ರಾಮದಲ್ಲಿ ರೆಸಾರ್ಟ್ ನಿರ್ಮಾಣಕ್ಕಾಗಿ ಸಲ್ಲಿಸಿದ್ದ ಸಿಂಗಲ್ ಲೇಔಟ್ ಅರ್ಜಿಗೆ ಉದ್ದೇಶಪೂರ್ವಕವಾಗಿ ಅಡ್ಡಿ ಮಾಡಲಾಗುತ್ತಿದೆ ಎಂದು ಭಟ್ ಆರೋಪಿಸಿದ್ದಾರೆ. 2024ರ ಮಾರ್ಚ್ 20ರಂದು ಅರ್ಜಿ ಸಲ್ಲಿಸಿದ್ದರೂ, ಸಾಮಾನ್ಯವಾಗಿ ಮೂರು ತಿಂಗಳಲ್ಲಿ ಸಿಗಬೇಕಿದ್ದ ಅನುಮತಿ ಎರಡು ವರ್ಷವಾದರೂ ಲಭ್ಯವಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳು ಶಾಸಕರ ಒತ್ತಡದಿಂದಲೇ ಅನುಮತಿ ನೀಡಲು ಹಿಂಜರಿಯುತ್ತಿದ್ದಾರೆ ಎಂದು ಕಿಡಿಕಾರಿದ ಭಟ್, ಹೈಕೋರ್ಟ್ 30 ದಿನಗಳಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರೂ ಅದನ್ನು ಪಾಲಿಸಲಾಗಿಲ್ಲ ಎಂದು ಮತ್ತೊಂದು ಗಂಭೀರ ಆರೋಪವಾಗಿ ಮಾಡಿದ್ದಾರೆ. ಸಿ.ಆರ್.ಝೆಡ್ ಅನುಮತಿ, ಜೋನ್ ಚೇಂಜ್ ಹಾಗೂ ಕಮರ್ಷಿಯಲ್ ಕನ್ವರ್ಷನ್ ಸೇರಿದಂತೆ ಅಗತ್ಯ ಪ್ರಕ್ರಿಯೆಗಳು ಪೂರ್ಣಗೊಂಡಿದ್ದರೂ, ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಫೈಲ್ ತಡೆಹಿಡಿಯಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಶಾಸಕನ ಧೋರಣೆಯನ್ನು ಖಂಡಿಸಿ ಸೋಮವಾರದಿಂದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮುಂಭಾಗದಲ್ಲಿ ನಿರಂತರ ಧರಣಿ ಆರಂಭಿಸುವುದಾಗಿ ಭಟ್ ತಿಳಿಸಿದ್ದಾರೆ. “ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯುತ್ತದೆ. ಇದು ರಾಜಕೀಯ ಹೋರಾಟವಲ್ಲ, ವೈಯಕ್ತಿಕ ಹಕ್ಕಿಗಾಗಿ ನಡೆಸುತ್ತಿರುವ ಹೋರಾಟ” ಎಂದು ಅವರು ಹೇಳಿದ್ದಾರೆ.
ಉಡುಪಿಯಲ್ಲಿ ಇಂತಹ ರಾಜಕೀಯ ದ್ವೇಷದ ಘಟನೆಗಳು ಅಪರೂಪವಾಗಿದ್ದು, ಬೇರೆ ಪಕ್ಷದವರಾದರೂ ವೈಯಕ್ತಿಕ ಉದ್ಯಮಗಳಿಗೆ ಅಡ್ಡಿಪಡಿಸುವ ಸಂಪ್ರದಾಯ ಇಲ್ಲ ಎಂದು ಅವರು ಹೇಳಿದರು. ಯಶ್ ಪಾಲ್ ಸುವರ್ಣ ಶಾಸಕರಾಗಲು ತಾನು ಸಹಕಾರ ನೀಡಿದ್ದೇನೆ ಎಂದು ನೆನಪಿಸಿಕೊಂಡ ಭಟ್, ಈಗ ಅದೇ ವ್ಯಕ್ತಿಯಿಂದ ಅಡಚಣೆ ಎದುರಿಸುತ್ತಿದ್ದೇನೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm