ಬ್ರೇಕಿಂಗ್ ನ್ಯೂಸ್
24-03-26 05:34 pm HK News Staffer ಕರಾವಳಿ
ಉಡುಪಿ, ಮಾರ್ಚ್ 24: ನಕಲಿ ಬಂಗಾರದ ಆಭರಣಗಳನ್ನು ಬಳಸಿಕೊಂಡು ವಂಚನೆ ನಡೆಸಿದ ಪ್ರಕರಣದಲ್ಲಿ ಪಡುಬಿದ್ರಿ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ. ನಕಲಿ ಆಭರಣಗಳನ್ನು ನಿಜವಾದ ಬಂಗಾರ ಹಾಗೂ ನಗದು ಹಣಕ್ಕೆ ಬದಲಾಯಿಸಿ ಮೋಸ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಪೊಲೀಸರ ಮಾಹಿತಿಯ ಪ್ರಕಾರ, ಜನವರಿ 13ರಂದು ಕಾಪು ತಾಲೂಕು ನಾಡ್ಸಾಲು ಗ್ರಾಮದ ಹಳೆಯ ಅಂಚೆ ಕಚೇರಿ ಸಮೀಪ ಈ ಘಟನೆ ನಡೆದಿದೆ. ಬಸ್ಸಮ್ಮ ಎಂಬ ಮಹಿಳೆ ಆ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಓರ್ವ ಪುರುಷ ಹಾಗೂ ಮಹಿಳೆ ಅವರನ್ನು ಸಂಪರ್ಕಿಸಿದ್ದಾರೆ. ಅವರು ಬಂಗಾರದಂತೆ ಕಾಣುವ ಸರವನ್ನು ತೋರಿಸಿ, ಅದರಲ್ಲಿ ಲಕ್ಷ್ಮೀ ಲಾಕೆಟ್ ಇದ್ದು ಸುಮಾರು ಆರು ಪವನ್ ತೂಕವಿದೆ ಎಂದು ನಂಬಿಸಿದ್ದಾರೆ.
ಇವರ ಮಾತುಗಳನ್ನು ನಂಬಿದ ಬಸ್ಸಮ್ಮ, ಸುಮಾರು ಎರಡು ಸವರಣ ತೂಕದ ತನ್ನ ಬಂಗಾರದ ಆಭರಣಗಳು (ಸುಮಾರು ₹1.5 ಲಕ್ಷ ಮೌಲ್ಯದ) ಹಾಗೂ ₹6,000 ನಗದು ಹಣವನ್ನು ಅವರಿಗೆ ನೀಡಿದ್ದಾರೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ನಂತರ ಬಸ್ಸಮ್ಮ ಸಮೀಪದ ಆಭರಣ ಅಂಗಡಿಯಲ್ಲಿ ಸರವನ್ನು ಪರಿಶೀಲಿಸಿದಾಗ ಅದು ನಕಲಿ ಎಂಬುದು ಬಹಿರಂಗವಾಗಿದೆ. ತಕ್ಷಣವೇ ಅವರು ಘಟನೆ ನಡೆದ ಸ್ಥಳಕ್ಕೆ ಹಿಂತಿರುಗಿದರೂ ಆರೋಪಿಗಳು ಆಗಲೇ ಎಸ್ಕೇಪ್ ಆಗಿದ್ದರು.
ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಲಾಗಿದೆ.
ಉಡುಪಿ ಜಿಲ್ಲಾ ಎಸ್ಪಿ ಹರಿರಾಮ ಶಂಕರ್ ನಿರ್ದೇಶನದಂತೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ಎಸ್ ನಾಯಕ್, ಕಾರ್ಕಳ ಉಪವಿಭಾಗದ ಡಿಎಸ್ಪಿ ಎಸ್ ವಿಜಯಪ್ರಸಾದ್ ಹಾಗೂ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರ ಮಾರ್ಗದರ್ಶನದಲ್ಲಿ, ಪಿಎಸ್ಐ ಶಕ್ತಿವೇಲು ಹಾಗೂ ಅನಿಲ್ ಕುಮಾರ್ ಟಿ ನಾಯಕ್ ಅವರ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿದೆ.
ತನಿಖೆ ವೇಳೆ, ಆರೋಪಿಗಳಲ್ಲಿ ಒಬ್ಬಳನ್ನು ತುಮಕೂರು ಜಿಲ್ಲೆಯ ಬೆಳ್ಳಾವಿ ಹೋಬಳಿಯ ಬುಡುಗನಹಳ್ಳಿ ನಿವಾಸಿ ಕಾವ್ಯ ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಆರೋಪಿ ದಾವಣಗೆರೆ ಜಿಲ್ಲೆಯ ಸಂತೇಬೆನ್ನೂರು ತಾಲೂಕಿನ ವೆಂಕಟೇಶ್ ಎಂದು ಪತ್ತೆಯಾಗಿದೆ.
ಪೊಲೀಸರು ಕಾವ್ಯಳನ್ನ ಬಂಧಿಸಿ, ಸುಮಾರು 7.610 ಗ್ರಾಂ ತೂಕದ (ಸುಮಾರು ₹75,000 ಮೌಲ್ಯದ) ಬಂಗಾರದ ಆಭರಣಗಳು ಹಾಗೂ ₹6,000 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ನಾಪತ್ತೆಯಾಗಿರುವ ವೆಂಕಟೇಶ್ ಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am