ಬ್ರೇಕಿಂಗ್ ನ್ಯೂಸ್
25-03-26 03:49 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 25: ಕರಾವಳಿಯ ಪ್ರಮುಖ ಸಂಚಾರ ಸಂಪರ್ಕ ಕೊಂಡಿಯಾದ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ-ಕುಂದಾಪುರ ವಿಭಾಗದಲ್ಲಿ ಮೂರು ಟೋಲ್ ಪ್ಲಾಜಾಗಳಿದ್ದು ಈಗ ಪರಿಸರ ಸ್ನೇಹಿ ಸೋಲಾರ್ ಉತ್ಪಾದನೆಗೆ ಮುಂದಾಗಿವೆ. ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಅಳವಡಿಸಿರುವ ಸೌರ ಫಲಕಗಳು ಸರಾಸರಿ ದಿನಕ್ಕೆ 521 ಯೂನಿಟ್ ವಿದ್ಯುತ್ ಉತ್ಪಾದಿಸುವ ಮೂಲಕ ಗಮನ ಸೆಳೆಯುತ್ತಿವೆ.
ನವಯುಗ ಉಡುಪಿ ಟೋಲ್ ವೇ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಿರ್ವಹಿಸಲ್ಪಡುವ ಈ ಮೂರು ಟೋಲ್ ಪ್ಲಾಜಾಗಳಲ್ಲಿ ಸೌರಶಕ್ತಿ ಘಟಕಗಳನ್ನು ಅಳವಡಿಸಲಾಗಿದೆ. ಹೆಜಮಾಡಿ, ಗುಂಡ್ಮಿ (ಶಾಸ್ತಾನ) ಮತ್ತು ಕೇರಳದ ಗಡಿಭಾಗ ತಲಪಾಡಿಯಲ್ಲಿ ಟೋಲ್ ಪ್ಲಾಜಾ ಇದೆ. ಪ್ರತಿ ಟೋಲ್ ಪ್ಲಾಜಾದ ಮೇಲ್ಛಾವಣಿಯಲ್ಲಿ ಸುಮಾರು 50 ಕಿಲೋ ವ್ಯಾಟ್ (kWp) ಸಾಮರ್ಥ್ಯದ ಸೌರ ಘಟಕಗಳನ್ನು ಅಳವಡಿಸಲಾಗಿದೆ. ಮೂರು ಘಟಕಗಳಿಂದ ಒಟ್ಟಾರೆಯಾಗಿ ತಿಂಗಳಿಗೆ ಸರಾಸರಿ 15,600 ಯೂನಿಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.
ಟೋಲ್ ಪ್ಲಾಜಾದಲ್ಲಿನ ಬೂತ್ಗಳ ವಿದ್ಯುತ್ ದೀಪಗಳು, ಕಂಪ್ಯೂಟರ್ಗಳು, ಸರ್ವರ್ಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆಗೆ ಈ ಸೌರ ವಿದ್ಯುತ್ ಅನ್ನೇ ಬಳಸಲಾಗುತ್ತಿದೆ. ಹಗಲಿನ ವೇಳೆ ಉತ್ಪಾದನೆಯಾಗಿ ಉಳಿಯುವ ಹೆಚ್ಚುವರಿ ವಿದ್ಯುತ್ ಅನ್ನು ಮೆಸ್ಕಾಂ ಗ್ರಿಡ್ಗೆ 'ನೆಟ್ ಮೀಟರಿಂಗ್' ವ್ಯವಸ್ಥೆಯ ಮೂಲಕ ವರ್ಗಾಯಿಸಲಾಗುತ್ತದೆ.
ಸೋಲಾರ್ ವ್ಯವಸ್ಥೆಯಿಂದಾಗಿ ಟೋಲ್ ಪ್ಲಾಜಾದಲ್ಲಿ ಮಾಸಿಕ ವಿದ್ಯುತ್ ಬಿಲ್ನಲ್ಲಿ ಗಣನೀಯ ಇಳಿಕೆಯಾಗಿದೆ. ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ, ನವೀಕರಿಸಬಹುದಾದ ಇಂಧನವನ್ನು ಬಳಸುವ ಮೂಲಕ ಇಂಗಾಲದ ಹೊರ ಸೂಸುವಿಕೆಯನ್ನು ತಗ್ಗಿಸಲು ಇದು ನೆರವಾಗಿದೆ. ಮೆಸ್ಕಾಂ ಗ್ರಿಡ್ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾದಾಗಲೂ ಬ್ಯಾಟರಿ ಮತ್ತು ಸೌರಶಕ್ತಿಯ ಬ್ಯಾಕ್-ಅಪ್ ಇರುವುದರಿಂದ ಟೋಲ್ ಪ್ರಕ್ರಿಯೆಯಲ್ಲಿ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಲು ಸಾಧ್ಯವಾಗುತ್ತಿದೆ.
ಸೋಲಾರ್ ವಿದ್ಯುತ್ ನಿಂದಾಗಿ ಮೂರು ಪ್ಲಾಜಾಗಳಲ್ಲಿ ಮೆಸ್ಕಾಂ ಅವಂಲಬಿಸದೆ ಪ್ರಕ್ರಿಯೆ ನಡೆಯುವುದಲ್ಲದೆ, ವಾರ್ಷಿಕ 1,87,632 ಯುನಿಟ್ ವಿದ್ಯುತ್ ಉಳಿತಾಯವಾಗುತ್ತದೆ. ಆಮೂಲಕ ಪ್ರತಿ ವರ್ಷದ ವಿದ್ಯುತ್ ಬಿಲ್ ಅಂದಾಜು 20 ಲಕ್ಷ ಮೊತ್ತವೂ ಉಳಿಕೆಯಾಗಿದೆ. ದಿನಕ್ಕೆ 521 ಯುನಿಟ್ ನಂತೆ ತಿಂಗಳಿಗೆ 15,636 ಯುನಿಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಇದರೊಂದಿಗೆ ಹೆಜಮಾಡಿ ಟೋಲ್ ಪ್ಲಾಜಾದಲ್ಲಿ 10 ಕೆವಿ ಸಾಮರ್ಥ್ಯದ ಪವನ್ ವಿದ್ಯುತ್ ಉತ್ಪಾದನಾ ಯಂತ್ರವನ್ನೂ ಅಳವಡಿಸಲಾಗಿದ್ದು ಮತ್ತಷ್ಟು ವಿದ್ಯುತ್ ಜನರೇಟ್ ಆಗುತ್ತಿದೆ. ಕರಾವಳಿಯಲ್ಲಿ ಅತಿ ಹೆಚ್ಚು ಬಿಸಿಲು ಮತ್ತು ಗಾಳಿ ಇರುವುದರಿಂದ ಪರಿಸರ ಸ್ನೇಹಿ ವಿದ್ಯುತ್ ಉತ್ಪಾದನಗೆ ದೊಡ್ಡ ಕೊಡುಗೆಯಾಗಿದೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am