ಬ್ರೇಕಿಂಗ್ ನ್ಯೂಸ್
03-01-21 02:36 pm Mangaluru Correspondent ಕರಾವಳಿ
ಪುತ್ತೂರು, ಜ.3: ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ ಹೊಡೆದ ಪ್ರಕರಣದಲ್ಲಿ ಮೃತರ ಸಂಖ್ಯೆ ಎಂಟಕ್ಕೇರಿದ್ದು ಹತ್ತಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಪುತ್ತೂರು ತಾಲೂಕಿನ ಈಶ್ವರಮಂಗಲದಿಂದ ಹೊರಟಿದ್ದ ಮದುವೆ ದಿಬ್ಬಣದ ಬಸ್ ನಲ್ಲಿ 63 ಮಂದಿ ಇದ್ದರು. 30 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಐವರು ಮಧ್ಯಾಹ್ನವೇ ಮೃತಪಟ್ಟಿದ್ದರು ಎನ್ನಲಾಗಿತ್ತು.



ಕೊಡಗು ಜಿಲ್ಲೆಯ ಗಡಿಭಾಗ ಕರಿಕೆ ಬಳಿಯ ಚೆತ್ತುಕಯ ಎಂಬಲ್ಲಿ ಮದುವೆ ಕಾರ್ಯ ಇತ್ತು. ಇದಕ್ಕಾಗಿ ಪುತ್ತೂರಿನ ವಧುವಿನ ಕಡೆಯವರು ಬಸ್ಸಿನಲ್ಲಿ ಹೊರಟಿದ್ದರು. ಬಸ್ ಸುಳ್ಯ ಮೂಲಕ ಕಾಸರಗೋಡು ಜಿಲ್ಲೆಯ ಆಲೆಟ್ಟಿ - ಕಲ್ಲಪಳ್ಳಿ - ಪಾಣತ್ತೂರು ಮಾರ್ಗವಾಗಿ ಕೊಡಗಿನತ್ತ ತೆರಳುತ್ತಿತ್ತು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಾಣತ್ತೂರು ಬಳಿ ಪಲ್ಟಿಯಾಗಿದ್ದು ಮನೆಯ ಮೇಲೆ ಬಿದ್ದಿತ್ತು.
ಮೃತರನ್ನು ರಾಜೇಶ್, ರವಿಚಂದ್ರ, ಆದರ್ಶ, ಶ್ರೇಯಸ್, ಸುಮತಿ, ಶಶಿಕುಮಾರ್ ಮತ್ತು ಜಯಲಕ್ಷ್ಮಿ ಎಂದು ಗುರುತಿಸಲಾಗಿದೆ. ಬಸ್ಸಿನಲ್ಲಿ ಫುಲ್ ರಶ್ ಇದ್ದುದರಿಂದ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ.
EARLIER REPORT: ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ ಹೊಡೆದ ಪರಿಣಾಮ ಐವರು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಗಡಿಭಾಗ ಪಾಣತ್ತೂರಿನಲ್ಲಿ ನಡೆದಿದೆ.
ಪುತ್ತೂರಿನಿಂದ ಹೊರಟಿದ್ದ ಮದುವೆ ದಿಬ್ಬಣದ ಬಸ್ ನಲ್ಲಿ 60 ಮಂದಿ ಇದ್ದರೆನ್ನಲಾಗುತ್ತಿದ್ದು 30 ಮಂದಿಗೆ ಗಂಭೀರ ಗಾಯಗಳಾಗಿವೆ. ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಮತ್ತು 11 ವರ್ಷದ ಬಾಲಕ ಸಾವನ್ನಪ್ಪಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯ ಗಡಿಭಾಗ ಕರಿಕೆ ಎಂಬಲ್ಲಿ ಮದುವೆ ಕಾರ್ಯ ಇತ್ತು. ಇದಕ್ಕಾಗಿ ಪುತ್ತೂರಿನ ವರನ ಕಡೆಯವರು ಬಸ್ಸಿನಲ್ಲಿ ಹೊರಟಿದ್ದರು. ಬಸ್ ಸುಳ್ಯ ಮೂಲಕ ಕಾಸರಗೋಡು ಜಿಲ್ಲೆಯ ಆಲೆಟ್ಟಿ - ಕಲ್ಲಪಳ್ಳಿ - ಪಾಣತ್ತೂರು ಮಾರ್ಗವಾಗಿ ಕೊಡಗಿನತ್ತ ತೆರಳುತ್ತಿತ್ತು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಾಣತ್ತೂರು ಬಳಿ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿದ್ದು ಮನೆಯ ಮೇಲೆ ಬಿದ್ದಿದೆ.
ಮೃತರು ಪುತ್ತೂರಿನ ನಿವಾಸಿಗಳು ಎನ್ನಲಾಗುತ್ತಿದೆ. ಹಲವಾರು ಮಂದಿ ಗಾಯಗೊಂಡಿದ್ದು ಗಾಯಾಳುಗಳನ್ನು ಕಾಞಂಗಾಡ್ ಮತ್ತು ಕಾಸರಗೋಡಿನ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
Five people were killed and several others injured after a bus from Puttur was on its way to wedding function toppled near Panathooru, Kasargod here on Sunday January 3.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm