ಬ್ರೇಕಿಂಗ್ ನ್ಯೂಸ್
26-03-26 10:29 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 26: ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ ಸೃಷ್ಟಿಸಿ ಸೈಬರ್ ವಂಚಕರು ಸಾರ್ವಜನಿಕರನ್ನು ಖೆಡ್ಡಾಕ್ಕೆ ಬೀಳಿಸಲು ಯತ್ನಿಸಿರುವ ಅಂಶ ಬೆಳಕಿಗೆ ಬಂದಿದ್ದು ಈ ಬಗ್ಗೆ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ನಗರದ ಸೈಬರ್ ಕ್ರೈಂ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರೇವಣ ಸಿದ್ದಪ್ಪ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಾರ್ಚ್ 25ರಂದು ಸೈಬರ್ ವಿಭಾಗದ ಅಧಿಕಾರಿಗಳು ಗೂಗಲ್ ಪರಿಶೀಲಿಸುತ್ತಿದ್ದಾಗ, ‘ಮಂಗಳೂರು ಸಿಟಿ ಪೊಲೀಸ್’ ಹೆಸರಿನಲ್ಲಿ ಪ್ರತ್ಯೇಕ ನಕಲಿ ವೆಬ್ಸೈಟ್ (https://mangalorecitypolice.com/) ಇರುವುದು ಕಂಡುಬಂದಿದೆ. ಅಮಾಯಕ ಸಾರ್ವಜನಿಕರು ಮತ್ತು ಹಿರಿಯ ನಾಗರಿಕರನ್ನು ನಂಬಿಸಿ, ಅವರಿಂದ ಹಣ ಲೂಟಿ ಮಾಡುವ ದುರುದ್ದೇಶದಿಂದ ಈ ಜಾಲತಾಣವನ್ನು ಸೃಷ್ಟಿಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ನಕಲಿ ವೆಬ್ಸೈಟ್ನಲ್ಲಿ ಕೇವಲ ಮಾಹಿತಿ ಮಾತ್ರವಲ್ಲದೆ, ಅಪಾಯಕಾರಿ ಆನ್ಲೈನ್ ಗ್ಯಾಂಬ್ಲಿಂಗ್ (ಜೂಜಾಟ) ಗೇಮ್ಗಳನ್ನು ಅಳವಡಿಸಲಾಗಿದೆ.
‘ಗೇಟ್ಸ್ ಆಫ್ ಒಲಿಂಪಸ್’, ‘ಮಾಜಾಂಗ್ ವಿನ್ಸ್ 3’, ‘ಸ್ಟಾರ್ ಲೈಟ್ ಪ್ರಿನ್ಸೆಸ್ 1000’, ‘ಸ್ವೀಟ್ ಬೊನಾಂಜಾ’, ‘ಪೋಕರ್ ಒಮಾಹ’ ಸೇರಿದಂತೆ ನೂರಾರು ಜಾಕ್ಪಾಟ್ ಆಟಗಳು ಈ ಸೈಟ್ನಲ್ಲಿವೆ. ‘ಮಲ್ಟಿ ಸ್ಕ್ಯಾಟರ್ ಪ್ರಾಗ್ಮ್ಯಾಟಿಕ್’ ಎಂಬ ಹೆಸರಿನಡಿ ಈ ಆಟಗಳನ್ನು ಆಡಿಸಿ, ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಹಣವನ್ನು ಮೋಸದಿಂದ ವರ್ಗಾಯಿಸಿಕೊಳ್ಳುವ ಸಂಚು ರೂಪಿಸಲಾಗಿದೆ.
ಪೊಲೀಸ್ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿ ಸೈಬರ್ ವಂಚನೆ ಎಸಗುತ್ತಿರುವ ಅಪರಿಚಿತ ವ್ಯಕ್ತಿಗಳು ಹಾಗೂ ನಕಲಿ ವೆಬ್ಸೈಟ್ ಸೃಷ್ಟಿಕರ್ತರ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ಗಳನ್ನು ಹೊರತುಪಡಿಸಿ, ಇಂತಹ ಯಾವುದೇ ಅನುಮಾನಾಸ್ಪದ ಲಿಂಕ್ಗಳನ್ನು ಕ್ಲಿಕ್ ಮಾಡಬಾರದು. ಅದರಲ್ಲೂ ಹಣದ ಆಮಿಷ ಒಡ್ಡುವ ಆನ್ಲೈನ್ ಜೂಜಾಟದ ಸೈಟ್ಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಸೈಬರ್ ಪೊಲೀಸರು ಮನವಿ ಮಾಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am