ಬ್ರೇಕಿಂಗ್ ನ್ಯೂಸ್
30-03-26 02:06 pm Mangaluru Staffer ಕರಾವಳಿ
ಮಂಗಳೂರು, ಮಾರ್ಚ್ 30: ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಕೊರತೆಯಾಗಿದ್ದು ಸಕಾಲಕ್ಕೆ ಗ್ಯಾಸ್ ಸಿಗದೆ ಆಟೋ ಚಾಲಕರು ಫಿಲ್ಲಿಂಗ್ ಸ್ಟೇಶನ್ ಮುಂದೆ ಕ್ಯೂ ನಿಂತಿದ್ದಾರೆ. ನಗರದ ಬಲ್ಮಠದ ಗೋ ಗ್ಯಾಸ್ ಹೆಸರಿನ ಆಟೋ ಎಲ್ಪಿಜಿ ಫಿಲ್ಲಿಂಗ್ ಸ್ಟೇಷನ್ ಮುಂದೆ ಆಟೋ ಚಾಲಕರು ಕಿಮೀ ಉದ್ದಕ್ಕೂ ಕ್ಯೂ ನಿಂತಿದ್ದು ಟ್ರಾಫಿಕ್ ಜಾಮ್ ಉಂಟಾಗಲು ಕಾರಣವಾಗಿದೆ.
ಗ್ಯಾಸ್ ಸ್ಟೇಶನ್ ಮುಂದೆ ಆಟೋಗಳು ಸಾಲುಗಟ್ಟಿದ್ದು ಯಾವಾಗ ಗ್ಯಾಸ್ ಸಿಗುತ್ತದೆ ಎಂಬ ಆತಂಕದಲ್ಲಿದ್ದಾರೆ. ಗ್ಯಾಸ್ ಸ್ಟೇಶನ್ ನಲ್ಲಿ ಫಿಲ್ಲಿಂಗ್ ಮಾಡುತ್ತಿದ್ದರೂ ಆಟೋ ಚಾಲಕರು ಗ್ಯಾಸ್ ಕೊರತೆ ಇದೆಯೆಂಬ ವದಂತಿಗೀಡಾಗಿದ್ದು ಸ್ಟೇಶನ್ ಮುಂದೆ ಸೇರಿದ್ದಾರೆ. ಪಂಪ್ ನಲ್ಲಿ ಗ್ಯಾಸ್ ಇದೆಯೆಂದು ಅಲ್ಲಿನ ಸಿಬಂದಿ ಹೇಳುತ್ತಿದ್ದಾರೆ. ಆಟೋ ಚಾಲಕರು ರಸ್ತೆಯಲ್ಲಿ ಸಾಲುಗಟ್ಟಿದ್ದರಿಂದ ಟ್ರಾಫಿಕ್ ತೊಂದರೆಯಾಗಿದ್ದು ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಪರದಾಡುತ್ತಿದ್ದಾರೆ. ಎಸ್ ಸಿಎಸ್ ಆಸ್ಪತ್ರೆ ರಸ್ತೆಯ ಉದ್ದಕ್ಕೂ ಆಟೋಗಳು ಸಾಲುಗಟ್ಟಿ ನಿಂತಿವೆ.




ಇದೇ ವೇಳೆ, ಆಟೋ ಗ್ಯಾಸ್ ದರವು ಎಪ್ರಿಲ್ 1ರ ಬಳಿಕ ಏರಿಕೆಯಾಗುತ್ತದೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಗ್ಯಾಸ್ ಸ್ಟೇಶನ್ ಕಡೆಯಿಂದಲೇ ಕೃತಕ ಅಭಾವ ಸೃಷ್ಟಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಆಟೋ ಸಿಎನ್ ಜಿ ಸ್ಟೇಶನ್ ಹಲವು ಕಡೆ ಲಭ್ಯವಿದ್ದರೂ ಎಲ್ಪಿಜಿ ಸ್ಟೇಶನ್ ಹೆಚ್ಚಿಲ್ಲ. ಮಂಗಳೂರು ನಗರ ಒಳಭಾಗದಲ್ಲಿ ಬಲ್ಮಟದ ಈ ಸ್ಟೇಶನ್ ನಲ್ಲಿ ಮಾತ್ರ ಲಭ್ಯ ಇದೆ. ಹೀಗಾಗಿ ನಾಡಿದ್ದು ಬೆಲೆ ಏರುತ್ತದೆ ಮತ್ತು ಗ್ಯಾಸ್ ಕೊರತೆಯಾಗುತ್ತದೆ ಎಂಬ ವದಂತಿ ನಂಬಿ ಆಟೋ ಚಾಲಕರು ಸ್ಟೇಶನ್ ಮುಂದೆ ಸಾಲುಗಟ್ಟಿದ್ದಾರೆ. ಆದರೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಿಲ್ಲ, ಆಟೋ ಚಾಲಕರು ಕೂಡ ಗಾಬರಿಯಾಗಬೇಡಿ ಎಂದು ಕಿವಿಮಾತು ಹೇಳಿದೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am