ಬ್ರೇಕಿಂಗ್ ನ್ಯೂಸ್
30-03-26 02:06 pm Mangaluru Staffer ಕರಾವಳಿ
ಮಂಗಳೂರು, ಮಾರ್ಚ್ 30: ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಕೊರತೆಯಾಗಿದ್ದು ಸಕಾಲಕ್ಕೆ ಗ್ಯಾಸ್ ಸಿಗದೆ ಆಟೋ ಚಾಲಕರು ಫಿಲ್ಲಿಂಗ್ ಸ್ಟೇಶನ್ ಮುಂದೆ ಕ್ಯೂ ನಿಂತಿದ್ದಾರೆ. ನಗರದ ಬಲ್ಮಠದ ಗೋ ಗ್ಯಾಸ್ ಹೆಸರಿನ ಆಟೋ ಎಲ್ಪಿಜಿ ಫಿಲ್ಲಿಂಗ್ ಸ್ಟೇಷನ್ ಮುಂದೆ ಆಟೋ ಚಾಲಕರು ಕಿಮೀ ಉದ್ದಕ್ಕೂ ಕ್ಯೂ ನಿಂತಿದ್ದು ಟ್ರಾಫಿಕ್ ಜಾಮ್ ಉಂಟಾಗಲು ಕಾರಣವಾಗಿದೆ.
ಗ್ಯಾಸ್ ಸ್ಟೇಶನ್ ಮುಂದೆ ಆಟೋಗಳು ಸಾಲುಗಟ್ಟಿದ್ದು ಯಾವಾಗ ಗ್ಯಾಸ್ ಸಿಗುತ್ತದೆ ಎಂಬ ಆತಂಕದಲ್ಲಿದ್ದಾರೆ. ಗ್ಯಾಸ್ ಸ್ಟೇಶನ್ ನಲ್ಲಿ ಫಿಲ್ಲಿಂಗ್ ಮಾಡುತ್ತಿದ್ದರೂ ಆಟೋ ಚಾಲಕರು ಗ್ಯಾಸ್ ಕೊರತೆ ಇದೆಯೆಂಬ ವದಂತಿಗೀಡಾಗಿದ್ದು ಸ್ಟೇಶನ್ ಮುಂದೆ ಸೇರಿದ್ದಾರೆ. ಪಂಪ್ ನಲ್ಲಿ ಗ್ಯಾಸ್ ಇದೆಯೆಂದು ಅಲ್ಲಿನ ಸಿಬಂದಿ ಹೇಳುತ್ತಿದ್ದಾರೆ. ಆಟೋ ಚಾಲಕರು ರಸ್ತೆಯಲ್ಲಿ ಸಾಲುಗಟ್ಟಿದ್ದರಿಂದ ಟ್ರಾಫಿಕ್ ತೊಂದರೆಯಾಗಿದ್ದು ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಪರದಾಡುತ್ತಿದ್ದಾರೆ. ಎಸ್ ಸಿಎಸ್ ಆಸ್ಪತ್ರೆ ರಸ್ತೆಯ ಉದ್ದಕ್ಕೂ ಆಟೋಗಳು ಸಾಲುಗಟ್ಟಿ ನಿಂತಿವೆ.




ಇದೇ ವೇಳೆ, ಆಟೋ ಗ್ಯಾಸ್ ದರವು ಎಪ್ರಿಲ್ 1ರ ಬಳಿಕ ಏರಿಕೆಯಾಗುತ್ತದೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಗ್ಯಾಸ್ ಸ್ಟೇಶನ್ ಕಡೆಯಿಂದಲೇ ಕೃತಕ ಅಭಾವ ಸೃಷ್ಟಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಆಟೋ ಸಿಎನ್ ಜಿ ಸ್ಟೇಶನ್ ಹಲವು ಕಡೆ ಲಭ್ಯವಿದ್ದರೂ ಎಲ್ಪಿಜಿ ಸ್ಟೇಶನ್ ಹೆಚ್ಚಿಲ್ಲ. ಮಂಗಳೂರು ನಗರ ಒಳಭಾಗದಲ್ಲಿ ಬಲ್ಮಟದ ಈ ಸ್ಟೇಶನ್ ನಲ್ಲಿ ಮಾತ್ರ ಲಭ್ಯ ಇದೆ. ಹೀಗಾಗಿ ನಾಡಿದ್ದು ಬೆಲೆ ಏರುತ್ತದೆ ಮತ್ತು ಗ್ಯಾಸ್ ಕೊರತೆಯಾಗುತ್ತದೆ ಎಂಬ ವದಂತಿ ನಂಬಿ ಆಟೋ ಚಾಲಕರು ಸ್ಟೇಶನ್ ಮುಂದೆ ಸಾಲುಗಟ್ಟಿದ್ದಾರೆ. ಆದರೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಿಲ್ಲ, ಆಟೋ ಚಾಲಕರು ಕೂಡ ಗಾಬರಿಯಾಗಬೇಡಿ ಎಂದು ಕಿವಿಮಾತು ಹೇಳಿದೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am