ಬ್ರೇಕಿಂಗ್ ನ್ಯೂಸ್
03-01-21 11:31 pm Mangaluru Correspondent ಕರಾವಳಿ
ಮಂಗಳೂರು, ಜ.3: ಮಂಗಳೂರು ನಗರಕ್ಕೆ ಆಗಮಿಸಿದ ನೂತನ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಕರ್ತವ್ಯ ಆರಂಭಿಸಿದ ಎರಡೇ ದಿನದಲ್ಲಿ ಪೊಲೀಸರಿಗೆ ಬಿಸಿ ಮುಟ್ಟಿಸುವ ಕೆಲಸ ಆರಂಭಿಸಿದ್ದಾರೆ.
ಮಂಗಳೂರಿನ ಬರ್ಕೆ ಮತ್ತು ಪಾಂಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ಆಪರೇಷನ್ ಸುರಕ್ಷಾ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಲು ಸೂಚಿಸಿದ್ದಾರೆ. ರಾತ್ರಿ ವೇಳೆ ವಿನಾಕಾರಣ ರಸ್ತೆಯಲ್ಲಿ ಓಡಾಡುವುದು, ಬಾರ್, ಹೊಟೇಲ್ ಮತ್ತಿತರ ಸಾರ್ವಜನಿಕ ಪ್ರದೇಶಗಳಲ್ಲಿ ನಿಂತುಕೊಳ್ಳುವುದು, ವಾಹನಗಳಲ್ಲಿ ಕುಳಿತು ಮದ್ಯಪಾನ ಮಾಡುವುದನ್ನು ತಪ್ಪಿಸಲು ಪೊಲೀಸರು ಕಾರ್ಯಾಚರಣೆ ನಡೆಸಲಿದ್ದಾರೆ.


ಪಾರ್ಕ್, ಮೈದಾನ, ಬಸ್ ನಿಲ್ದಾಣಗಳಲ್ಲಿ ಟಾರ್ಗೆಟ್ ಇಟ್ಟುಕೊಂಡು ಈ ರೀತಿಯ ಆಪರೇಶನ್ ನಡೆಯಲಿದೆ. ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದವರು ಅಪರಾಧ ಹಿನ್ನೆಲೆ ಹೊಂದಿದ್ದರೆ ಅವರ ವಿರುದ್ಧ ಕೇಸು ದಾಖಲಿಸಲಾಗುವುದು ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಇಬ್ಬರು ಡಿಸಿಪಿ ಸೇರಿದಂತೆ ಎಸಿಪಿ, ಹತ್ತು ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಗಳು ಮತ್ತು 50 ಮಂದಿ ಸಿಬಂದಿ ಇರಲಿದ್ದಾರೆ. ಆರಂಭಿಕವಾಗಿ ಎರಡು ಠಾಣೆ ವ್ಯಾಪ್ತಿಯಲ್ಲಿ ಈ ರೀತಿಯ ಕಾರ್ಯಾಚರಣೆ ನಡೆಯಲಿದ್ದು ಮುಂದಿನ ದಿನಗಳಲ್ಲಿ ಬೇರೆ ಠಾಣೆಗಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಕಾರ್ಯಾಚರಣೆ ವೇಳೆ ಅಗತ್ಯ ಬಿದ್ದರೆ ತಾನು ಕೂಡ ಬರಲಿದ್ದೇನೆ ಎಂದಿದ್ದಾರೆ.
ಪೊಲೀಸರು, ಪೊಲೀಸ್ ವ್ಯವಸ್ಥೆ ಬಗ್ಗೆ ಅಪರಾಧಿಗಳಲ್ಲಿ ಭಯ ಮೂಡಿಸುವುದು, ಅಪರಾಧಿಗಳನ್ನು ಮಟ್ಟ ಹಾಕುವುದು ಇದರ ಉದ್ದೇಶ. ರಾತ್ರಿ ವೇಳೆ ರಾಜಾರೋಷವಾಗಿ ವರ್ತಿಸುವುದು, ಎಲ್ಲೆಂದರಲ್ಲಿ ಕುಡಿಯುವುದು ಇಂಥ ಕೃತ್ಯಗಳಿಂದ ಮತ್ತೊಂದು ರೀತಿಯ ಅಪರಾಧಗಳಿಗೆ ಪ್ರೇರಣೆ ಸಿಗುವುದು. ಇದಕ್ಕಾಗಿ ಆಪರೇಷನ್ ಸುರಕ್ಷಾ ಹೆಸರಿನಲ್ಲಿ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
New Mangalore Commissioner of Police Shashi Kumar has issued strict rules for drunkards and night wanderers just in two days of his posting in the city.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am