ಬ್ರೇಕಿಂಗ್ ನ್ಯೂಸ್
01-04-26 09:04 pm HK News Staffer ಕರಾವಳಿ
ಬೆಂಗಳೂರು, ಎಪ್ರಿಲ್ 1: ಅಮಾನತುಗೊಂಡ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣ ರದ್ದುಪಡಿಸುವಂತೆ ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಲು ನಿರಾಕರಿಸಿದೆ. ಇನ್ಸ್ಪೆಕ್ಟರ್ ತನ್ನ ಅಧಿಕಾರದ ದುರುಪಯೋಗ ಮಾಡಿಲ್ಲವೇ ಎಂದು ನ್ಯಾಯಾಲಯ ಗಂಭೀರ ಪ್ರಶ್ನೆ ಎತ್ತಿದ್ದು, ಅರ್ಜಿ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಿದೆ.
ಪ್ರಕರಣಕ್ಕೆ ಸಂಬಂಧಿಸಿ ಸಂದೇಶ್ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿ, ಮಹಿಳೆಯೊಂದಿಗೆ ಒಪ್ಪಿತ ಸಂಬಂಧವಿದ್ದು, ಅತ್ಯಾಚಾರ ಆರೋಪಕ್ಕೆ ಸ್ಪಷ್ಟವಾದ ಸಾಕ್ಷ್ಯಗಳಿಲ್ಲ ಎಂದು ತಿಳಿಸಿದರು. ಆದರೆ ಈ ವಾದವನ್ನು ತಳ್ಳಿ ಹಾಕಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದರೆ ಅದು ಅಧಿಕಾರದ ದುರುಪಯೋಗವಲ್ಲವೇ ಎಂದು ಕಟುವಾಗಿ ಪ್ರಶ್ನಿಸಿತು.
ಶಿಕ್ಷಕಿ ನೀಡಿದ ದೂರಿನ ಆಧಾರದ ಮೇಲೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ ಸಂದೇಶ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ 376(2)(a)(1), 376(2)(n), 384 ಹಾಗೂ 506 ಕಲಂಗಳಡಿ ಎಫ್ಐಆರ್ ದಾಖಲಾಗಿದೆ. ಈಗಾಗಲೇ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಅವರ ವಿರುದ್ಧ ಕೇಳಿಬಂದಿದ್ದು, ಇತ್ತೀಚೆಗೆ ಇಬ್ಬರು ಮಹಿಳೆಯರು ಮಾಡಿದ್ದ ಆರೋಪಗಳು ಭಾರೀ ಚರ್ಚೆಗೆ ಕಾರಣವಾಗಿದ್ದವು. ಆದರೆ ಪ್ರಾಥಮಿಕ ತನಿಖೆಯಲ್ಲಿ ಅವು ಪ್ರಚೋದಿತ ಹಾಗೂ ಸುಳ್ಳು ಆರೋಪಗಳಾಗಿವೆ ಎಂಬ ಮಾಹಿತಿ ಹೊರಬಂದಿತ್ತು.
ಇದೀಗ ಶಿಕ್ಷಕಿಯೊಬ್ಬರು ನೀಡಿರುವ ದೂರಿನಿಂದ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಆಗಿದ್ದ ಅವಧಿಯಲ್ಲಿ 2018ರಿಂದ 2023ರ ವರೆಗೆ ಮನೆಗೆ ಬಂದು ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಶಿಕ್ಷಕಿ ಆರೋಪಿಸಿದ್ದಾರೆ. ವಿವಿಧ ಪ್ರಕರಣಗಳ ಹೆಸರಿನಲ್ಲಿ ಬೆದರಿಕೆ ಹಾಕಿ, ಜೀವ ಭಯ ಹಾಗೂ ಕುಟುಂಬದ ಮಾನ ಹಾನಿಯಾಗುವ ಭೀತಿಯಿಂದ ಇಷ್ಟು ವರ್ಷ ಮೌನವಾಗಿದ್ದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಕರಣದ ಗಂಭೀರತೆಯನ್ನು ಗಮನಿಸಿದ ಹೈಕೋರ್ಟ್, ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿದ್ದು, ಮುಂದಿನ ವಿಚಾರಣೆಯಲ್ಲಿ ಪ್ರಕರಣದ ವಿವರಗಳನ್ನು ಪರಿಗಣಿಸಲು ನಿರ್ಧರಿಸಿದೆ.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm