ಬ್ರೇಕಿಂಗ್ ನ್ಯೂಸ್
01-04-26 09:04 pm HK News Staffer ಕರಾವಳಿ
ಬೆಂಗಳೂರು, ಎಪ್ರಿಲ್ 1: ಅಮಾನತುಗೊಂಡ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣ ರದ್ದುಪಡಿಸುವಂತೆ ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಲು ನಿರಾಕರಿಸಿದೆ. ಇನ್ಸ್ಪೆಕ್ಟರ್ ತನ್ನ ಅಧಿಕಾರದ ದುರುಪಯೋಗ ಮಾಡಿಲ್ಲವೇ ಎಂದು ನ್ಯಾಯಾಲಯ ಗಂಭೀರ ಪ್ರಶ್ನೆ ಎತ್ತಿದ್ದು, ಅರ್ಜಿ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಿದೆ.
ಪ್ರಕರಣಕ್ಕೆ ಸಂಬಂಧಿಸಿ ಸಂದೇಶ್ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿ, ಮಹಿಳೆಯೊಂದಿಗೆ ಒಪ್ಪಿತ ಸಂಬಂಧವಿದ್ದು, ಅತ್ಯಾಚಾರ ಆರೋಪಕ್ಕೆ ಸ್ಪಷ್ಟವಾದ ಸಾಕ್ಷ್ಯಗಳಿಲ್ಲ ಎಂದು ತಿಳಿಸಿದರು. ಆದರೆ ಈ ವಾದವನ್ನು ತಳ್ಳಿ ಹಾಕಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದರೆ ಅದು ಅಧಿಕಾರದ ದುರುಪಯೋಗವಲ್ಲವೇ ಎಂದು ಕಟುವಾಗಿ ಪ್ರಶ್ನಿಸಿತು.
ಶಿಕ್ಷಕಿ ನೀಡಿದ ದೂರಿನ ಆಧಾರದ ಮೇಲೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ ಸಂದೇಶ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ 376(2)(a)(1), 376(2)(n), 384 ಹಾಗೂ 506 ಕಲಂಗಳಡಿ ಎಫ್ಐಆರ್ ದಾಖಲಾಗಿದೆ. ಈಗಾಗಲೇ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಅವರ ವಿರುದ್ಧ ಕೇಳಿಬಂದಿದ್ದು, ಇತ್ತೀಚೆಗೆ ಇಬ್ಬರು ಮಹಿಳೆಯರು ಮಾಡಿದ್ದ ಆರೋಪಗಳು ಭಾರೀ ಚರ್ಚೆಗೆ ಕಾರಣವಾಗಿದ್ದವು. ಆದರೆ ಪ್ರಾಥಮಿಕ ತನಿಖೆಯಲ್ಲಿ ಅವು ಪ್ರಚೋದಿತ ಹಾಗೂ ಸುಳ್ಳು ಆರೋಪಗಳಾಗಿವೆ ಎಂಬ ಮಾಹಿತಿ ಹೊರಬಂದಿತ್ತು.
ಇದೀಗ ಶಿಕ್ಷಕಿಯೊಬ್ಬರು ನೀಡಿರುವ ದೂರಿನಿಂದ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಆಗಿದ್ದ ಅವಧಿಯಲ್ಲಿ 2018ರಿಂದ 2023ರ ವರೆಗೆ ಮನೆಗೆ ಬಂದು ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಶಿಕ್ಷಕಿ ಆರೋಪಿಸಿದ್ದಾರೆ. ವಿವಿಧ ಪ್ರಕರಣಗಳ ಹೆಸರಿನಲ್ಲಿ ಬೆದರಿಕೆ ಹಾಕಿ, ಜೀವ ಭಯ ಹಾಗೂ ಕುಟುಂಬದ ಮಾನ ಹಾನಿಯಾಗುವ ಭೀತಿಯಿಂದ ಇಷ್ಟು ವರ್ಷ ಮೌನವಾಗಿದ್ದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಕರಣದ ಗಂಭೀರತೆಯನ್ನು ಗಮನಿಸಿದ ಹೈಕೋರ್ಟ್, ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿದ್ದು, ಮುಂದಿನ ವಿಚಾರಣೆಯಲ್ಲಿ ಪ್ರಕರಣದ ವಿವರಗಳನ್ನು ಪರಿಗಣಿಸಲು ನಿರ್ಧರಿಸಿದೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am