ಬ್ರೇಕಿಂಗ್ ನ್ಯೂಸ್
06-04-26 07:58 pm HK News Staffer ಕರಾವಳಿ
ಬೆಳ್ತಂಗಡಿ, ಎಪ್ರಿಲ್ 6: ಇತ್ತೀಚೆಗೆ ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣದಿಂದಾಗಿ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ನೇತ್ರಾವತಿ ಸ್ನಾನಘಟ್ಟದ ಬಳಿಯ ಬಂಗ್ಲೆಗುಡ್ಡೆ ಅರಣ್ಯದಲ್ಲಿ ಅಪರಿಚಿತ ಪುರುಷನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಎಪ್ರಿಲ್ 6ರ ಬೆಳಗ್ಗೆ 10 ಗಂಟೆ ಸುಮಾರಿಗೆ ಶವ ಕಾಣಸಿಕ್ಕಿದ್ದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಬಂದು ಪ್ರಕರಣ ದಾಖಲಿಸಿದ್ದಾರೆ.
ಸುಮಾರು 40-50 ವರ್ಷ ಪ್ರಾಯದ ಪ್ಯಾಂಟ್, ಶರ್ಟ್ ಹಾಕಿರುವ ಗಂಡಸಿನ ಮೃತದೇಹವಾಗಿದ್ದು ಕೊಳೆತು ನಾರುವ ಸ್ಥಿತಿಯಲ್ಲಿತ್ತು. ಮೃತದೇಹವು ಎತ್ತರ 5.7 ಅಡಿ, ಸಾಧಾರಣ ಶರೀರವಾಗಿದ್ದು, ಕೊಳೆತಿರುವುದರಿಂದ ಯಾವುದೇ ಚಹರೆ ಗುರುತು ಪತ್ತೆಯಾಗಿಲ್ಲ. ಮೈಮೇಲೆ ಬಿಳಿ ಬಣ್ಣದ ಉದ್ದ ತೋಳಿನ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್, ಬಿಳಿ ಬಣ್ಣದ ಬನಿಯನ್, ಕಪ್ಪು ಬಣ್ಣದ ಒಳ ಚಡ್ಡಿ, ಎಡಗೈಯಲ್ಲಿ ಗೋಲ್ಡನ್ ಕಲರಿನ ವಾಚ್, ಎಡಕೈ ಉಗುಂರ ಬೆರಳಿನಲ್ಲಿ ತಿಳಿನೀಲಿ ಬಣ್ಣದ ಕಲ್ಲು ಇರುವ ಲೋಹದ ಉಂಗುರ ಧರಿಸಿದೆ.
ಶವ ಪೂರ್ತಿ ಕೊಳೆತು ಬಾತುಕೊಂಡಿದ್ದು ಹತ್ತು ದಿನಗಳ ಹಿಂದೆ ಸತ್ತಿರಬಹುದು ಎನ್ನುವ ಶಂಕೆಯಿದೆ. ಆತ್ಮಹತ್ಯೆಯೋ, ಯಾವ ರೀತಿಯಲ್ಲಿ ಸಾವು ಸಂಭವಿಸಿದೆ ಎನ್ನುವುದು ತಿಳಿದುಬಂದಿಲ್ಲ. ಧರ್ಮಸ್ಥಳ ಪೊಲೀಸರು ಪೋಸ್ಟ್ ಮಾರ್ಟಂ ನಡೆಸಲು ಶವವನ್ನು ಮಂಗಳೂರಿನ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಸದ್ರಿ ವ್ಯಕ್ತಿಯ ವಾರೀಸುದಾರರು ಅಥವಾ ಸಂಬಂಧಿಕರು ಇದ್ದರೆ ಧರ್ಮಸ್ಥಳ ಠಾಣೆಗೆ ಸಂಪರ್ಕಿಸಲು ಪೊಲೀಸರು ತಿಳಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ ಬಂಗ್ಲೆಗುಡ್ಡೆ ಕಾಡಿನಲ್ಲಿ ಹಲವಾರು ಅಸ್ಥಿಪಂಜರಗಳು ಸಿಕ್ಕಿವೆ ಎನ್ನುವ ಗುಮಾನಿ ಹಬ್ಬಿತ್ತು. ನೂರಾರು ಶವ ಹೂತ ಪ್ರಕರಣ ಸಂಬಂಧಿಸಿ ರಚನೆಯಾಗಿದ್ದ ವಿಶೇಷ ತನಿಖಾ ತಂಡ ಕಾಡಿನಲ್ಲಿ ಶೋಧ ಕಾರ್ಯ ನಡೆಸಿತ್ತು. ಪುತ್ತೂರು ವಿಭಾಗಾಧಿಕಾರಿ ನೇತೃತ್ವದಲ್ಲಿ ಅಸ್ಥಿಗಳನ್ನು ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಪ್ರಕರಣ ಕುರಿತಾಗಿ ಎಸ್ಐಟಿ ತಂಡವು ಕೋರ್ಟಿಗೆ ಪ್ರಾಥಮಿಕ ವರದಿಯನ್ನೂ ಸಲ್ಲಿಸಿತ್ತು. ಶವ ಹೂತ ಪ್ರಕರಣ ತಾರ್ಕಿಕ ಅಂತ್ಯ ಕಂಡಿಲ್ಲವಾದರೂ ಈ ನಡುವೆ ಅದೇ ಜಾಗದಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿರುವುದು ಮತ್ತೆ ಸುದ್ದಿಗೆ ಗ್ರಾಸವಾಗಿದೆ.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm