ಬ್ರೇಕಿಂಗ್ ನ್ಯೂಸ್
10-04-26 09:49 pm Mangaluru Staffee ಕರಾವಳಿ
ಉಳ್ಳಾಲ, ಎ.10: ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲದ ನಿರ್ದೇಶಕರು, ಉಳ್ಳಾಲ ಬಂಡಿಕೊಟ್ಯ ನಿವಾಸಿ, ಭರತನಾಟ್ಯ ಗುರು ವಿದ್ವಾನ್ ಶ್ರಾವಣ್ ಉಳ್ಳಾಲ್ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೂರು ತಿಂಗಳಿಂದ ಹಳದಿ ಕಾಮಾಲೆ ರೋಗದಿಂದ ಬಳಲುತ್ತಿದ್ದು, ಕಳೆದ ವಾರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಸಂಜೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಶಾಂತಲಾ ಪ್ರಶಸ್ತಿ ಪುರಸ್ಕೃತ ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ ಹಾಗೂ ಸಂಸ್ಥೆಯ ಗೌರವಾಧ್ಯಕ್ಷೆ ಶಕೀಲಾ ಜನಾರ್ದನ ಅವರ ಮಾರ್ಗದರ್ಶನದಲ್ಲಿ ಸ್ಥಾಪಿತವಾದ ಮಂತ್ರ ನಾಟ್ಯಕಲಾ ಗುರುಕುಲವನ್ನು ಶ್ರಾವಣ್ ಉಳ್ಳಾಲ್ ಅವರು ಸಮರ್ಥವಾಗಿ ಮುನ್ನಡೆಸಿ ಅನೇಕ ವಿದ್ಯಾರ್ಥಿಗಳಿಗೆ ಭರತನಾಟ್ಯ ಕಲೆಯನ್ನು ಕಲಿಸಿದ್ದರು.

ಪಂದನಲ್ಲೂರು ಶೈಲಿಯ ಭರತನಾಟ್ಯವನ್ನು ದೇಶದ ವಿವಿಧ ರಾಜ್ಯಗಳಲ್ಲಿ ಪರಿಚಯಿಸಿ ಒರಿಸ್ಸಾ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ಗುಜರಾತ್ ಸೇರಿದಂತೆ ಅನೇಕ ರಾಜ್ಯಗಳ ಸಾಂಸ್ಕೃತಿಕ ವೇದಿಕೆಗಳಲ್ಲಿ ಪ್ರದರ್ಶನ ನೀಡಿದ್ದರು. ವಿದೇಶಗಳಲ್ಲಿ ಭರತನಾಟ್ಯ, ಕೂಚುಪುಡಿ, ಕಥಕ್, ಒಡಿಸ್ಸಿ ಹಾಗೂ ಯಕ್ಷಗಾನಗಳ ಸಮ್ಮಿಲನದ ಪ್ರದರ್ಶನ ನೀಡಿದ್ದರು. ‘ಮೋಕ್ಷಂ’, ‘ರುದ್ರ ವೀರಭದ್ರ’, ‘ಶ್ರೀಕೃಷ್ಣ ಲೀಲಾಮೃತಂ’, ‘ತ್ರಿಶಕ್ತಿ’, ‘ನೃಸಿಂಹ ಚಲತಂ’, ‘ದಶ ಹಲರೂಪಂ’, ‘ಶಕ್ತಿ’ ಮೊದಲಾದ ನೃತ್ಯ ರೂಪಕಗಳ ಮೂಲಕ ಜನಮನ್ನಣೆ ಪಡೆದಿದ್ದರು.
ದೂರದರ್ಶನ ಗ್ರೇಡೆಡ್ ಕಲಾವಿದರಾಗಿದ್ದ ಶ್ರಾವಣ್ ಉಳ್ಳಾಲರು ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ವೀಣಾ ವಾದನದಲ್ಲೂ ಪರಿಣತಿ ಹೊಂದಿದ್ದರು. ನಾಟ್ಯ ಪ್ರವೀಣ ಪ್ರಶಸ್ತಿ, ಜನಪದ ಬಂಧು ಪ್ರಶಸ್ತಿ, ದಕ್ಷಿಣ ಕನ್ನಡ ಜಿಲ್ಲಾಡಳಿತದ 2018ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಸಂದಿವೆ. ಶ್ರಾವಣ್ ಅವರು ಪತ್ನಿ ಶೈನಾ ಶ್ರಾವಣ್ ಮತ್ತು ಪುಟ್ಟ ಹೆಣ್ಣು ಮಗಳು ಮಂತ್ರ ಎಸ್ ಉಳ್ಳಾಲ್ ಅವರನ್ನ ಅಗಲಿದ್ದಾರೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm