ಬ್ರೇಕಿಂಗ್ ನ್ಯೂಸ್
10-04-26 10:12 pm Mangalore Correspondent ಕರಾವಳಿ
ಮಂಗಳೂರು, ಎಪ್ರಿಲ್ 10: ಸಂತ ಅಲೋಶಿಯಸ್ ಡೀಮ್ಡ್ ಯುನಿವರ್ಸಿಟಿಯ ಪ್ರೋ ಚಾನ್ಸಲರ್, ಸೈಂಟ್ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ಮತ್ತು ಮಂಗಳೂರು ಜೆಸೂಟ್ ಎಜುಕೇಶನಲ್ ಸೊಸೈಟಿ ಇದರ ಉಪಾಧ್ಯಕ್ಷರಾಗಿದ್ದ ಫಾದರ್ ಮೆಲ್ವಿನ್ ಜೆ. ಪಿಂಟೋ(63) ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಹಾರ್ಟ್ ಅಟ್ಯಾಕ್ ಆಗಿದ್ದ ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲೇ ಶಿಕ್ಷಣ ಪೂರೈಸಿ ಇಂಗ್ಲಿಷ್ ಎಂಎ ಮಾಡಿದ್ದ ಮೆಲ್ವಿನ್ ಪಿಂಟೋ ಅವರು 1980ರಲ್ಲಿ ಜೆಸೂಟ್ ಆಗಿ ಸೇರ್ಪಡೆಯಾಗಿದ್ದರು. ಇದಲ್ಲದೆ, ಸೈಕಾಲಜಿಯಲ್ಲಿ ಡಿಪ್ಲೊಮಾ, ಸ್ಕೂಲ್ ಅಡ್ಮಿನಿಸ್ಟ್ರೇಶನ್ ವಿಷಯದಲ್ಲಿ ಡಿಪ್ಲೊಮಾ ಮಾಡಿದ್ದರು. 1997ರಲ್ಲಿ ಜೆಸೂಟ್ ಫಾದರ್ ಆಗಿದ್ದು ಮೊದಲಿಗೆ ಹಾಸನದಲ್ಲಿ ಸೈಂಟ್ ಜೋಸೆಫ್ ಹೈಯರ್ ಪ್ರೈಮರಿ ಸ್ಕೂಲ್ ನಲ್ಲಿ ಹೆಡ್ ಮಾಸ್ಟರ್ ಆಗಿದ್ದರು. ಆನಂತರ ಸೈಂಟ್ ಜೋಸೆಫ್ ಇಂಡಿಯನ್ ಪಿಯು ಕಾಲೇಜು ಸ್ಥಾಪಿಸಿ 2007ರ ತನಕ ಅದರ ಪ್ರಿನ್ಸಿಪಾಲ್ ಆಗಿದ್ದರು.
2007ರಿಂದ 11ರ ವರೆಗೆ ಮಂಗಳೂರಿನ ಸಂತ ಅಲೋಶಿಯಸ್ ಹೈಸ್ಕೂಲಿನಲ್ಲಿ ಹೆಡ್ ಮಾಸ್ಟರ್ ಆಗಿದ್ದು, 2012ರಲ್ಲಿ ಮರಳಿ ಹಾಸನದ ಪಿಯು ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇರಿದ್ದರು. ಫಾದರ್ ಮೆಲ್ವಿನ್ ಅವರು ವ್ಯಾಟಿಕನ್ ಕಮ್ಯುನಿಕೇಶನ್ಸ್ ಮತ್ತು ರೇಡಿಯೋ ರೋಮ್ ನಲ್ಲಿ ಏಷ್ಯಾ ಮತ್ತು ಭಾರತೀಯ ಭಾಷೆಗಳ ಪ್ರತಿನಿಧಿಯಾಗಿಯೂ ಕೆಲಸ ಮಾಡಿದ್ದರು. 2017ರ ಬಳಿಕ ಮಂಗಳೂರಿನ ವೆಲೆನ್ಸಿಯಾದ ಫಾತಿಮಾ ರಿಟ್ರೀಟ್ ಹೌಸ್ ನಲ್ಲಿ ಎರಡು ವರ್ಷಗಳ ಕಾಲ ಮುಖ್ಯಸ್ಥರಾಗಿದ್ದರು. ಆನಂತರ ಧಾರವಾಡದ ವಿದ್ಯಾನಿಕೇತನದಲ್ಲಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ಆಗಿದ್ದುಕೊಂಡು ಹಲವು ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವಲ್ಲಿ ನೆರವಾಗಿದ್ದರು. ಆಮೂಲಕ ವಿದ್ಯಾರ್ಥಿಗಳು, ಅಲ್ಲಿನ ಶಿಕ್ಷಕ ವೃಂದಕ್ಕೂ ಜನಾನುರಾಗಿಯಾಗಿದ್ದರು.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm