ಬ್ರೇಕಿಂಗ್ ನ್ಯೂಸ್
11-04-26 05:05 pm Mangalore Correspondent ಕರಾವಳಿ
ಬಂಟ್ವಾಳ, ಎಪ್ರಿಲ್ 11: ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ್ತಿದ್ದ ಮಾಜಿ ಪತ್ರಕರ್ತ, ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಸಂಭವಿಸಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಫರಂಗಿಪೇಟೆ ಅಬ್ಬೆಟ್ಟು ನಿವಾಸಿ, ಹತ್ತು ವರ್ಷಗಳ ಹಿಂದೆ ಮಂಗಳೂರಿನಲ್ಲಿ ರಾಜ್ ಟಿವಿ ಸೇರಿದಂತೆ ಸ್ಥಳೀಯ ಕೇಬಲ್ ವಾಹಿನಿಗಳಲ್ಲಿ ವರದಿಗಾರನಾಗಿದ್ದ ಅಶ್ವಿತ್ ಕುಮಾರ್ (32) ಮೃತಪಟ್ಟ ಯುವಕ. ಪತ್ರಕರ್ತ ಕೆಲಸ ಬಿಟ್ಟು ಮೋಟಾರ್ಸ್ ಸಂಸ್ಥೆಯೊಂದರಲ್ಲಿ ಸುಪರ್ ವೈಸರ್ ಆಗಿದ್ದರು. ಇದರ ನಡುವೆ, ಸ್ಥಳೀಯ ಕಾರ್ಯಕ್ರಮಗಳಲ್ಲಿ ನಿರೂಪಕರಾಗಿ ಗುರುತಿಸಿಕೊಂಡಿದ್ದರು. ನಾಯಿಲದಲ್ಲಿರುವ ಸಂಬಂಧಿಕರ ಮನೆಯ ಮದರಂಗಿ ಕಾರ್ಯಕ್ರಮದಲ್ಲಿ ಅಶ್ವಿತ್ ನಿರೂಪಣೆ ಜವಾಬ್ದಾರಿ ವಹಿಸಿಕೊಂಡಿದ್ದರು.
ಅದರಂತೆ ಶುಕ್ರವಾರ ರಾತ್ರಿ (ಏಪ್ರಿಲ್ 10) ಎಂದಿನಂತೆ ವೇದಿಕೆ ಏರಿ ಕಾರ್ಯಕ್ರಮ ಆರಂಭಿಸಲು ತಯಾರಿ ನಡೆಸುತ್ತಿದ್ದರು. ಮಾತು ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ತೀವ್ರ ಅಸ್ವಸ್ಥಗೊಂಡು ಇದ್ದಕ್ಕಿದ್ದಂತೆ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಸಂಭ್ರಮ ಮನೆ ಮಾಡಿದ್ದ ಮನೆಯಲ್ಲಿ ಕ್ಷಣಾರ್ಧದಲ್ಲಿ ಶೋಕ ಆವರಿಸಿದೆ. ಮದರಂಗಿ, ಮದುವೆ ಕಾರ್ಯಕ್ರಮಕ್ಕೆ ನಿರೂಪಣೆ ಮಾಡಲಿಕ್ಕಿದ್ದ ಯುವಕನ ಸಾವು ಕುಟುಂಬಸ್ಥರಲ್ಲಿ ಬೇಸರ ಮೂಡಿಸಿದೆ. ಅಶ್ವಿತ್ ಮದುವೆ ಆಗಿರಲಿಲ್ಲ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm