ಬ್ರೇಕಿಂಗ್ ನ್ಯೂಸ್
11-04-26 05:05 pm Mangalore Correspondent ಕರಾವಳಿ
ಬಂಟ್ವಾಳ, ಎಪ್ರಿಲ್ 11: ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ್ತಿದ್ದ ಮಾಜಿ ಪತ್ರಕರ್ತ, ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಸಂಭವಿಸಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಫರಂಗಿಪೇಟೆ ಅಬ್ಬೆಟ್ಟು ನಿವಾಸಿ, ಹತ್ತು ವರ್ಷಗಳ ಹಿಂದೆ ಮಂಗಳೂರಿನಲ್ಲಿ ರಾಜ್ ಟಿವಿ ಸೇರಿದಂತೆ ಸ್ಥಳೀಯ ಕೇಬಲ್ ವಾಹಿನಿಗಳಲ್ಲಿ ವರದಿಗಾರನಾಗಿದ್ದ ಅಶ್ವಿತ್ ಕುಮಾರ್ (32) ಮೃತಪಟ್ಟ ಯುವಕ. ಪತ್ರಕರ್ತ ಕೆಲಸ ಬಿಟ್ಟು ಮೋಟಾರ್ಸ್ ಸಂಸ್ಥೆಯೊಂದರಲ್ಲಿ ಸುಪರ್ ವೈಸರ್ ಆಗಿದ್ದರು. ಇದರ ನಡುವೆ, ಸ್ಥಳೀಯ ಕಾರ್ಯಕ್ರಮಗಳಲ್ಲಿ ನಿರೂಪಕರಾಗಿ ಗುರುತಿಸಿಕೊಂಡಿದ್ದರು. ನಾಯಿಲದಲ್ಲಿರುವ ಸಂಬಂಧಿಕರ ಮನೆಯ ಮದರಂಗಿ ಕಾರ್ಯಕ್ರಮದಲ್ಲಿ ಅಶ್ವಿತ್ ನಿರೂಪಣೆ ಜವಾಬ್ದಾರಿ ವಹಿಸಿಕೊಂಡಿದ್ದರು.
ಅದರಂತೆ ಶುಕ್ರವಾರ ರಾತ್ರಿ (ಏಪ್ರಿಲ್ 10) ಎಂದಿನಂತೆ ವೇದಿಕೆ ಏರಿ ಕಾರ್ಯಕ್ರಮ ಆರಂಭಿಸಲು ತಯಾರಿ ನಡೆಸುತ್ತಿದ್ದರು. ಮಾತು ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ತೀವ್ರ ಅಸ್ವಸ್ಥಗೊಂಡು ಇದ್ದಕ್ಕಿದ್ದಂತೆ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಸಂಭ್ರಮ ಮನೆ ಮಾಡಿದ್ದ ಮನೆಯಲ್ಲಿ ಕ್ಷಣಾರ್ಧದಲ್ಲಿ ಶೋಕ ಆವರಿಸಿದೆ. ಮದರಂಗಿ, ಮದುವೆ ಕಾರ್ಯಕ್ರಮಕ್ಕೆ ನಿರೂಪಣೆ ಮಾಡಲಿಕ್ಕಿದ್ದ ಯುವಕನ ಸಾವು ಕುಟುಂಬಸ್ಥರಲ್ಲಿ ಬೇಸರ ಮೂಡಿಸಿದೆ. ಅಶ್ವಿತ್ ಮದುವೆ ಆಗಿರಲಿಲ್ಲ.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
17-05-26 09:10 pm
HK News Staffer
ಕೋಲಾರ; ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಮತ್ತು ಇಬ...
17-05-26 08:41 pm
ಕೊಡಚಾದ್ರಿ ಬೆಟ್ಟದಿಂದ ಮರಳುತ್ತಿದ್ದ ಪ್ರವಾಸಿಗರ ಜೀಪ...
17-05-26 08:14 pm
ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ; ಎಸಿ ಕೋಚ...
17-05-26 05:51 pm
ಮಂಗಳೂರಿನಲ್ಲಿ ಭೀಕರ ಲಿಫ್ಟ್ ದುರಂತ; ಲಿಫ್ಟ್ ನಲ್ಲಿ...
17-05-26 05:49 pm