ಬ್ರೇಕಿಂಗ್ ನ್ಯೂಸ್
13-04-26 11:39 pm Mangalore Correspondent ಕರಾವಳಿ
ಮಂಗಳೂರು, ಎಪ್ರಿಲ್ 13: ಮಹಿಳೆಯೊಬ್ಬರು ಕಾವೂರಿನ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆಟೋದಲ್ಲಿ ತನ್ನ ಮನೆಗೆ ತೆರಳುತ್ತಿದ್ದಾಗ ಚಿನ್ನಾಭರಣಗಳಿದ್ದ ಬ್ಯಾಗ್ ಕಳಕೊಂಡಿದ್ದು ಕಾವೂರು ಪೊಲೀಸರು ಕೆಲವೇ ಗಂಟೆಗಳಲ್ಲಿ ಆಟೋವನ್ನು ಪತ್ತೆಹಚ್ಚಿ ಬಂಗಾರ ಮರಳಿಸಿದ್ದಾರೆ.
ಕುಂಜತ್ತ್ ಬೈಲು ನಿವಾಸಿ ರೇಖಾ ತಾಜವ್ ಎಂಬವರು ಎಪ್ರಿಲ್ 7ರಂದು ಕಾವೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ತನ್ನ ಮನೆಯಾದ ಕುಂಜತ್ ಬೈಲಿಗೆ ಆಟೋ ರಿಕ್ಷಾದಲ್ಲಿ ಹೋಗಿದ್ದು ಮನೆಗೆ ತಲುಪಿದಾಗ ಅವರು ತನ್ನ ಬ್ಯಾಗ್ ಅನ್ನು ಆಟೋ ರಿಕ್ಷಾದಲ್ಲಿಯೇ ಮರೆತು ಇಳಿದಿದ್ದರು. ಬ್ಯಾಗ್ ನಲ್ಲಿ 4 ಚಿನ್ನದ ಉಂಗುರಗಳು ಮತ್ತು 1 ಚಿನ್ನದ ಪೆಂಡೆಂಟ್ ಹಾಗೂ 2 ವಾಚ್ ಇದ್ದ ವಿಷಯ ತಿಳಿದಾಗ ಆಟೋ ಹಿಂತಿರುಗಿ ಹೋಗಿತ್ತು.
ಇನ್ನೇನು ಮಾಡುವುದೆಂದು ತಿಳಿಯದೆ ಮಹಿಳೆ ಬಳಿಕ ಕಾವೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿ ಆಟೋ ಚಾಲಕನ ಬಗ್ಗೆ ಒಂದಷ್ಟು ವಿವರ ನೀಡಿದ್ದರು. ತಕ್ಷಣವೇ ಕಾವೂರು ಠಾಣಾ ಸಿಬ್ಬಂದಿಗಳು ಸದ್ರಿ ರಸ್ತೆಯಲ್ಲಿ ಸಿಸಿಟಿವಿ ಚೆಕ್ ಮಾಡಿದ್ದು ಆಟೋ ರಿಕ್ಷಾ ನಂಬರ್ ಪತ್ತೆ ಮಾಡಿದ್ದಾರೆ. ಬಳಿಕ ಆಟೋ ಚಾಲಕನನ್ನು ವಿಚಾರಿಸಿದಾಗ ಅವರಿಗೆ ಯಾವುದೇ ಮಾಹಿತಿ ಇರಲಿಲ್ಲ.
ಆಟೋವನ್ನು ಪರಿಶೀಲನೆ ನಡೆಸಿದಾಗ ಡಿಕ್ಕಿಯಲ್ಲಿ ಮಹಿಳೆಯ ಬ್ಯಾಗ್ ಪತ್ತೆಯಾಗಿದ್ದು ಅದರಲ್ಲಿ ಬಂಗಾರದ ಒಡವೆಗಳು ಹಾಗೇ ಇದ್ದವು. ಘಟನೆ ನಡೆದು 24 ಗಂಟೆ ಒಳಗೆ ಆಟೋ ಪತ್ತೆಹಚ್ಚಿದ ಪೊಲೀಸರು ಕಳೆದು ಹೋದ ಬ್ಯಾಗ್ ಸಮೇತ ಎಲ್ಲಾ ಬಂಗಾರವನ್ನು ಮಹಿಳೆಗೆ ಒಪ್ಪಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm