ಬ್ರೇಕಿಂಗ್ ನ್ಯೂಸ್
17-04-26 08:56 pm HK News Staffer ಕರಾವಳಿ
ಮಂಗಳೂರು, ಎಪ್ರಿಲ್ 17 : ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಬಿ.ಸಿ. ರೋಡ್ನಿಂದ ಪೂಂಜಾಲಕಟ್ಟೆ ವರೆಗಿನ ಹೆದ್ದಾರಿ ನಿರ್ವಹಣೆ, ಬಿ.ಸಿ. ರೋಡ್ ಜಂಕ್ಷನ್ನಿಂದ ಗಾಣದಪಡ್ಪು ಹೆದ್ದಾರಿಯನ್ನು ಚತುಷ್ಪಥವನ್ನಾಗಿ ಮೇಲ್ದರ್ಜೆಗೇರಿಸುವುದು ಸೇರಿದಂತೆ ವಿವಿಧ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಯೋಜನೆಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 64 ಕೋಟಿ ರೂ. ಮಂಜೂರು ಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಕಾಮಗಾರಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿರುವ ಸಂಸದರು, ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಬಿ.ಸಿ.ರೋಡ್ನಿಂದ ಪುಂಜಾಲಕಟ್ಟೆ ವರೆಗಿನ ಸುಮಾರು 20 ಕಿಮೀ. ಹೆದ್ದಾರಿಯ ನಿರ್ವಹಣೆ ಕಾಮಗಾರಿಗಳಿಗಾಗಿ ಒಟ್ಟು 34.53 ಕೋಟಿ ರೂ.ಗಳ ಅನುದಾನವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಜೂರು ಮಾಡಿದೆ. ಜತೆಗೆ, ಬಿ.ಸಿ.ರೋಡ್ ಜಂಕ್ಷನ್ನಿಂದ ಬಂಟ್ವಾಳ ಕಡೆಗೆ ಹೋಗುವ ಹೆದ್ದಾರಿಯಲ್ಲಿ ಶ್ರೀ ನಾರಾಯಣಗುರು ಮಂದಿರದ ವರೆಗಿನ ರಸ್ತೆ ಸದ್ಯ ಅಗಲೀಕರಣಕ್ಕೆ ಬಾಕಿಯಿದೆ. ಈ ಭಾಗದ ಹೆದ್ದಾರಿಯನ್ನು ನಾಲ್ಕು ಪಥಗಳ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸುವುದಕ್ಕೆ ಒಟ್ಟು 22.59 ಕೋಟಿ ರೂ.ಗಳ ಅನುದಾನ ದೊರೆತಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.
ಹಾಗೆಯೇ, ಇದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ. ರೋಡ್ ಜಂಕ್ಷನ್, ಚಾರ್ಮಾಡಿ ಘಾಟಿಯಲ್ಲಿ ರಸ್ತೆಗಳ ನಿರ್ವಹಣೆ ಕಾಮಗಾರಿಗಾಗಿ 6.92 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. ಜಿಲ್ಲೆಯ ಈ ಪ್ರಮುಖ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡರೆ ನಮ್ಮ ಭಾಗದ ಸುಗಮ ಸಂಚಾರ ಹಾಗೂ ಆರ್ಥಿಕ ಪ್ರಗತಿಗೆ ಹೊಸ ವೇಗ ನೀಡಲಿದೆ ಎಂದು ಕ್ಯಾ. ಚೌಟ ಸಂತಸ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕೆಲಸಗಳಿಗೆ ಹಾಗೂ ಕೆಲವು ಕಡೆ ಹೆದ್ದಾರಿ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರದಿಂದ ಅನುದಾನ ದೊರೆಯುತ್ತಿದ್ದು ಜಿಲ್ಲೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಇದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಕ್ಯಾ. ಚೌಟ ಹೇಳಿದ್ದಾರೆ.
ಉಜಿರೆ- ಧರ್ಮಸ್ಥಳ- ಪೆರಿಯಶಾಂತಿ ಕಾಮಗಾರಿ ಪ್ರಗತಿಯಲ್ಲಿ
ಉಜಿರೆ -ಧರ್ಮಸ್ಥಳ- ಪೆರಿಯಶಾಂತಿ ಹೆದ್ದಾರಿಯನ್ನು ಕೂಡ ಸುಮಾರು 613.665 ಕೋಟಿ ವೆಚ್ಚದಲ್ಲಿ ದ್ವಿಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ ಭರದಿಂದ ಸಾಗುತ್ತಿದೆ. ಬಿ.ಸಿ ರೋಡ್ನಿಂದ ಪೂಂಜಾಲಕಟ್ಟೆ ವರೆಗಿನ ಹೆದ್ದಾರಿಯಲ್ಲಿ ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ಬಿ.ಸಿ ರೋಡ್ ಜಂಕ್ಷನ್ ಬಳಿಯ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೂ ಚಾಲನೆ ದೊರೆಯಲಿದೆ. ಆ ಮೂಲಕ, ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಸಂಪರ್ಕ ಜಾಲ ಮತ್ತಷ್ಟು ಉನ್ನತೀಕರಣಗೊಳ್ಳಲಿದೆ ಎಂದು ಸಂಸದ ಕ್ಯಾ. ಚೌಟ ತಿಳಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm