ಬ್ರೇಕಿಂಗ್ ನ್ಯೂಸ್
18-04-26 11:09 pm Mangalore Correspondent ಕರಾವಳಿ
ಉಳ್ಳಾಲ, ಏ.18: ನಿರ್ಮಾಣ ಹಂತದ ಲೇ ಔಟ್ ಒಂದರ ಎತ್ತರದ ಆವರಣ ಗೋಡೆಯು ದಿಢೀರ್ ಕುಸಿದು ಬಿದ್ದ ಪರಿಣಾಮ ಲೇಔಟಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜೆಸಿಬಿ ಯಂತ್ರವು ಪಕ್ಕದ ರಸ್ತೆಗೆ ಉರುಳಿ ಬಿದ್ದಿದ್ದು, ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೋ ರಿಕ್ಷಾ, ಬೈಕ್ ಮತ್ತು ಪಕ್ಕದ ಮನೆಗಳ ಆವರಣ ಗೋಡೆ ಮತ್ತು ಗೇಟ್ ಗಳು ಜಖಂಗೊಂಡ ಘಟನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕುಂಪಲ ಗುರುನಗರ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.
ಕುಂಪಲ ನಿವಾಸಿ ದೇವೇಶ ಸರಳಾಯ ಎಂಬವರು ಕುಂಪಲ ಗುರುನಗರದ ಶ್ರೀಕೃಷ್ಣ ಮುಖ್ಯಪ್ರಾಣ ದೇವಸ್ಥಾನದ ಬಳಿ ನಿರ್ಮಿಸುತ್ತಿರುವ ವಸತಿ ಬಡಾವಣೆಯ ಬೃಹತ್ ಆವರಣ ಗೋಡೆಯು ಶನಿವಾರ ಸಂಜೆ ಏಕಾಏಕಿ ಕುಸಿದು ಪಕ್ಕದ ಬಡಾವಣೆಯ ರಸ್ತೆಗೆ ಬಿದ್ದಿದೆ. ಲೇ ಔಟ್ ಆವರಣದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜೆಸಿಬಿ ಯಂತ್ರವು ಆವರಣ ಗೋಡೆಯ ಜತೆಯಲ್ಲೇ ಪಕ್ಕದ ರಸ್ತೆಗೆ ಉರುಳಿ ಬಿದ್ದಿದ್ದು, ಚಾಲಕನು ಜೆಸಿಬಿ ಯಂತ್ರದಿಂದ ಹೊರ ಜಿಗಿದು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.


ಕುಸಿದು ಬಿದ್ದ ಆವರಣ ಗೋಡೆಯ ಪಕ್ಕದ ರಸ್ತೆಯಲ್ಲಿ ನಿತ್ಯವೂ ಸಂಜೆ ಸ್ಥಳೀಯ ಮಕ್ಕಳು ಆಟವಾಡುತ್ತಿದ್ದು ಘಟನೆ ಸಂಜೆ ನಾಲ್ಕು ಗಂಟೆಗೆ ಘಟಿಸಿದ್ದರಿಂದ ಮತ್ತು ಆ ವೇಳೆ ರಸ್ತೆಯಲ್ಲಿ ಬಿಸಿಲು ಇದ್ದ ಕಾರಣ ಮಕ್ಕಳು ಆಟವಾಡಲು ಮನೆಗಳಿಂದ ಹೊರ ಬಂದಿರಲಿಲ್ಲ. ಮಕ್ಕಳು ಆಟವಾಡುತ್ತಿದ್ದ ವೇಳೆ ಘಟನೆ ನಡೆಯುತ್ತಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆಗಾಲದಲ್ಲಿ ನೀರಿನ ಹರಿವು ಮತ್ತು ಮಣ್ಣು ಒದ್ದೆಯಾದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿರುತ್ತಿದ್ದರೆ ಘೋರ ಅನಾಹುತವೇ ಸಂಭವಿಸುತ್ತಿತ್ತು. ಕಳಪೆ ಕಾಮಗಾರಿ ನಡೆಸಿ ನಿರ್ಲಕ್ಷ್ಯ ವಹಿಸಿ ಘಟನೆಗೆ ಕಾರಣರಾದವರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಇಂದೋ ನಾಳೆಯೋ ಮಳೆ ಸುರಿದಲ್ಲಿ ಕುಸಿದ ಆವರಣ ಗೋಡೆಯ ಮಣ್ಣೆಲ್ಲ ಸ್ಥಳೀಯ ಮನೆಗಳ ಒಳಗೆ ನುಗ್ಗುವ ಭೀತಿ ಎದುರಾಗಿದೆ.
ಸ್ಥಳೀಯ ಬಡಾವಣೆ ನಿವಾಸಿ ಸುಶಿತ್ ರಾವ್ ಅವರ ಕಾರು ಮತ್ತು ಆಟೋ ರಿಕ್ಷಾ, ರಕ್ಷಿತ್ ಎಂಬವರ ಮೋಟಾರ್ ಬೈಕ್ ಜಖಂಗೊಂಡಿದೆ. ಆವರಣ ಗೋಡೆ ಕುಸಿದ ರಭಸಕ್ಕೆ ಪಕ್ಕದ ಬಡಾವಣೆಯ ಮನೆಗಳ ಆವರಣ ಗೋಡೆಗಳು ಮತ್ತು ಗೇಟ್ ಗಳು ಜಖಂಗೊಂಡಿವೆ. ಕಳಪೆ ಕಾಮಗಾರಿಯಿಂದಲೇ ಎತ್ತರದ ಆವರಣ ಗೋಡೆ ಕುಸಿದು ಬಿದ್ದಿದೆಯೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಸೋಮೇಶ್ವರ ಪುರಸಭೆಯ ಉಪಾಧ್ಯಕ್ಷರಾದ ರವಿಶಂಕರ ಸೋಮೇಶ್ವರ, ಸದಸ್ಯರಾದ ಮನೋಜ್ ಕಟ್ಟೆಮನೆ, ಮೋಹನ್ ಶೆಟ್ಟಿ ಕುಂಪಲ, ಜಯ ಪೂಜಾರಿ, ಪುರಸಭಾ ಅಧಿಕಾರಿಗಳು ಮತ್ತು ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm