ಬ್ರೇಕಿಂಗ್ ನ್ಯೂಸ್
20-04-26 01:02 pm HK News Staffer ಕರಾವಳಿ
ಕಾರವಾರ , ಏಪ್ರಿಲ್ 20: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿ ಸೈಲ್ 61ನೇ ಫೆಮಿನಾ ಮಿಸ್ ಇಂಡಿಯಾ ಕಿರೀಟ ಗೆದ್ದು ಮಹತ್ವದ ಸಾಧನೆ ಮಾಡಿದ್ದಾರೆ. ಏಪ್ರಿಲ್ 18ರಂದು ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ನಡೆದ ಫಿನಾಲೆಯಲ್ಲಿ ಸಾಧ್ವಿ 29 ಸ್ಪರ್ಧಿಗಳನ್ನು ಹಿಂದಿಕ್ಕಿ ಗೆಲುವು ಸಾಧಿಸಿದ್ದಾರೆ. ಗೋವಾ ಪ್ರತಿನಿಧಿಸಿದ್ದ ಸಾಧ್ವಿ ಸೈಲ್ ಅವರಿಗೆ ಮಾಜಿ ವಿಜೇತೆ ನಿಕಿತಾ ಪೋರ್ವಾಲ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ಮಹಾರಾಷ್ಟ್ರದ ರಾಜನಂದಿನಿ ಮೊದಲ ರನ್ನರ್ ಅಪ್ ಹಾಗೂ ಜಮ್ಮು ಮತ್ತು ಕಾಶ್ಮೀರದ ಶ್ರೀತಿ ಅದ್ವೈತಾ ಎರಡನೇ ರನ್ನರ್ ಅಪ್ ಆಗಿದ್ದಾರೆ. ಕರ್ನಾಟಕದ ಖುಷಿ ರಮೇಶ್ ಟಾಪ್ 15ರಲ್ಲಿ ಸ್ಥಾನ ಪಡೆದಿದ್ದಾರೆ. ಗೆಲುವಿನ ಬಳಿಕ ಸಾಧ್ವಿ ತಂದೆ ಸತೀಶ್ ಸೈಲ್ ಅವರೊಂದಿಗೆ ವಿಡಿಯೋ ಕಾಲ್ ಮೂಲಕ ಸಂತೋಷ ಹಂಚಿಕೊಂಡಿದ್ದಾರೆ.
ಸಾಧ್ವಿ ತಮ್ಮ ಪ್ರತಿಕ್ರಿಯೆಯಲ್ಲಿ, “ಈ ಅವಕಾಶ ಸಿಕ್ಕಿದ್ದು ನನಗೆ ಅತ್ಯಂತ ಕೃತಜ್ಞತೆಯ ವಿಷಯ. ಇಲ್ಲಿ ಬಂದ ಪ್ರತಿಯೊಬ್ಬರೂ ವಿಜೇತರು. ಭಾರತವನ್ನು ಹೆಮ್ಮೆಪಡಿಸುವುದು ನನ್ನ ಗುರಿ” ಎಂದು ಹೇಳಿದ್ದಾರೆ. ಕೆನಡಾದ ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಮತ್ತು ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಪದವಿ ಪಡೆದಿರುವ ಅವರು ಸ್ಪರ್ಧೆಗೆ ಮೊದಲು 10 ಕೆಜಿ ತೂಕ ಇಳಿಸಿಕೊಂಡಿದ್ದರು. ಛಾಯಾಗ್ರಹಣ, ಬ್ಯಾಡ್ಮಿಂಟನ್ ಮತ್ತು ಜೇನುಸಾಕಣೆ ಅವರ ಹವ್ಯಾಸಗಳಾಗಿವೆ.
ಇದೀಗ ಸಾಧ್ವಿ ಸೈಲ್ 2026ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ವಿಯಟ್ನಾಂನಲ್ಲಿ ನಡೆಯಲಿರುವ ಈ ಸ್ಪರ್ಧೆಯ ಫಿನಾಲೆ ಸೆಪ್ಟೆಂಬರ್ 5ರಂದು ನಡೆಯಲಿದೆ.
ಕಳೆದ ಆವೃತ್ತಿಯ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ನಿಕಿತಾ ಪೋರ್ವಾಲ್ ಅವರು 60ನೇ ಫೆಮಿನಾ ಮಿಸ್ ಇಂಡಿಯಾ ಕಿರೀಟ ಧರಿಸಿದ್ದರು. ಸದ್ಯ ಇವರು 2027ರ ಮಿಸ್ ವರ್ಲ್ಡ್ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿದ್ದು, ಭಾರತ ಪ್ರತಿನಿಧಿಸಲು ತಯಾರಾಗುತ್ತಿದ್ದಾರೆ.


61ನೇ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಅಂತಿಮ ಸುತ್ತಿಗೆ 3 ಸ್ಪರ್ಧಿಗಳು ತಲುಪಿದ್ದರು.ಅವರಲ್ಲಿ ಸಾದ್ವಿ ಸತೀಶ್ ಸೈಲ್ ವಿಜೇತರಾದರು. ಇವರು ಮಾಡೆಲ್ ಮಾತ್ರವಲ್ಲದೇ ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಪ್ರತಿ ಯುವತಿಯಲ್ಲಿಯೂ ಒಂದು ಕನಸಿನ ಕಿರೀಟ ಅಡಗಿದೆ. ಅದನ್ನು ತಲುಪಲು ಧೈರ್ಯ, ಶ್ರಮ ಮತ್ತು ನಂಬಿಕೆ ಬೇಕು. ಅದಕ್ಕೆ ಈ ಸಾಧ್ವಿ ಸೈಲ್ ಸಾಧನೆ ಉತ್ತಮ ಉದಾಹರಣೆಯಾಗಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm