ಬ್ರೇಕಿಂಗ್ ನ್ಯೂಸ್
04-01-21 09:05 pm Mangaluru Correspondant ಕರಾವಳಿ
Photo credits : RPTS
ಮಂಗಳೂರು, ಜ.4: ಪಡೀಲ್ ಬಳಿಯ ಫೈಸಲ್ ನಗರದಲ್ಲಿ ಏಕ್ಟಿವಾ ವಾಹನದಲ್ಲಿ ಸಾಗುತ್ತಿದ್ದ ಸವಾರರಿಬ್ಬರು ರಸ್ತೆ ಬದಿಯ ಬಾವಿಗೆ ಬಿದ್ದು ದುರಂತ ಸಂಭವಿಸಿದೆ.
ಸಂಜೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಫೈಸಲ್ ನಗರದ ಏರು ಹಾದಿಯ ರಸ್ತೆಯಲ್ಲಿ ಸಾಗುತ್ತಿದ್ದಾಗ ರಸ್ತೆ ಬದಿಯಿದ್ದ ಬಾವಿಗೆ ಉರುಳಿ ಬಿದ್ದಿದೆ. ಕಾಂಕ್ರೀಟ್ ರಸ್ತೆಯಾಗಿದ್ದು ರಸ್ತೆ ಬದಿಗೆ ಇಳಿಯುವಷ್ಟರಲ್ಲಿ ಸ್ಕಿಡ್ ಆಗಿ ಏಕ್ಟಿವಾ ಉರುಳಿ ಬಿದ್ದಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಏಕ್ಟಿವಾ ವಾಹನ ರಸ್ತೆ ಬದಿಯಲ್ಲಿ ಉಳಿದುಕೊಂಡಿದ್ದರೆ, ಅದರಲ್ಲಿದ್ದ ಇಬ್ಬರು ಸವಾರರು ಬಾವಿಗೆ ಉರುಳಿ ಬಿದ್ದಿದ್ದಾರೆ.
ಘಟನೆ ನಡೆದಿರುವ ಪ್ರದೇಶದಲ್ಲಿ ಕತ್ತಲು ಕವಿದಿದ್ದರಿಂದ ಯಾರಿಗೂ ಗೊತ್ತಾಗಿಲ್ಲ. ಬೀದಿ ದೀಪ ಇಲ್ಲದ ರಸ್ತೆ ಅದಾಗಿದ್ದು ಇತ್ತೀಚೆಗಷ್ಟೇ ಕಾಂಕ್ರೀಟ್ ಆಗಿತ್ತು. ರಸ್ತೆ ಬದಿಯಲ್ಲೇ ಬಾವಿ ಇದ್ದು ಅದಕ್ಕೆ ಆವರಣ ಗೋಡೆ ಇರಲಿಲ್ಲ. ರಸ್ತೆ ಬದಿ ಅಪಾಯಕಾರಿ ಜಾಗ ಆಗಿದ್ದರೂ ತಡೆಗೋಡೆ ಮಾಡಿರಲಿಲ್ಲ.
ಸ್ವಲ್ಪ ಹೊತ್ತಿನ ಬಳಿಕ ಅದೇ ದಾರಿಯಲ್ಲಿ ಬಂದವರು ಯಾರೋ ಏಕ್ಟಿವಾ ಗಮನಿಸಿ, ಬಾವಿಗೆ ಇಣುಕಿದಾಗ ನೀರಿನಲ್ಲಿ ಯುವಕರು ಇರುವುದು ಪತ್ತೆಯಾಗಿದೆ. ಆನಂತರ ಸ್ಥಳೀಯರು ಸೇರಿ ಒಬ್ಬನನ್ನು ರಕ್ಷಣೆ ಮಾಡಿದ್ದು ಬಾವಿಯಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ಒಯ್ದಿದ್ದಾರೆ. ಇನ್ನೊಬ್ಬನ ರಕ್ಷಣಾ ಕಾರ್ಯ ನಡೆಯುತ್ತಿದೆ. ಎಂಟು ಗಂಟೆ ಸುಮಾರಿಗೆ ಅಗ್ನಿಶಾಮಕ ದಳ ಆಗಮಿಸಿದೆ. ಅದಕ್ಕೂ ಮುನ್ನ ಲೈಟ್ ಇಲ್ಲದೆ ಸ್ಥಳೀಯರು ಮೊಬೈಲ್ ಬೆಳಕಿನಲ್ಲಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ನೀರಿಗೆ ಬಿದ್ದವರ ಗುರುತು ಪತ್ತೆಯಾಗಿಲ್ಲ. ಸ್ಥಳದಲ್ಲಿ ಪೊಲೀಸರು ಮತ್ತು ನೂರಾರು ಮಂದಿ ಸೇರಿದ್ದಾರೆ.
Breaking Update: ಆ್ಯಕ್ಟಿವಾ ನಿಯಂತ್ರಣ ತಪ್ಪಿ ಪಲ್ಟಿ ; ಸವಾರ ಬಾವಿಗೆ ಬಿದ್ದು ಸಾವು !
Two Wheeler Active fell into well after rider lost control and got slipped in FaizalNagar, Padil, Mangalore. The Fire brigade personals rushed to the spot and have rescued two persons.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am