ಬ್ರೇಕಿಂಗ್ ನ್ಯೂಸ್
02-05-26 11:05 pm Mangalore Correspondent ಕರಾವಳಿ
ಮಂಗಳೂರು, ಮೇ 2: ಉಳ್ಳಾಲದ ಹಝ್ರತ್ ಸಯ್ಯದ್ ಮದನಿ ದರ್ಗಾ ಹಾಗೂ ಜುಮ್ಮಾ ಮಸೀದಿಗೆ ನೂತನ ಆಡಳಿತ ಸಮಿತಿ ಆಯ್ಕೆಗೆ ಚುನಾವಣೆ ನಡೆಸಲು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮುಂದಾಗಿದೆ. ಈ ಸಂಬಂಧ ಮಂಡಳಿ ಆದೇಶ ಹೊರಡಿಸಿದ್ದು, ಚುನಾವಣೆ ಮತ್ತು ನೋಂದಣಿ ಪ್ರಕ್ರಿಯೆಗಾಗಿ ವಿಶೇಷ ಅಧಿಕಾರಿಗಳನ್ನು ನೇಮಕ ಮಾಡಿದೆ.
ಉಳ್ಳಾಲ ದರ್ಗಾ ಮತ್ತು ಮಸೀದಿ ಆಡಳಿತ ನಿರ್ವಹಿಸುತ್ತಿದ್ದ ಹಾಲಿ ವ್ಯವಸ್ಥಾಪಕ ಸಮಿತಿಯ ಮೂರು ವರ್ಷಗಳ ಅವಧಿ 2026ರ ಮಾರ್ಚ್ 7ರಂದು ಪೂರ್ಣಗೊಂಡಿದೆ. ಅವಧಿ ಮುಗಿದ ತಕ್ಷಣವೇ ನೂತನ ಸಮಿತಿ ರಚಿಸುವ ನಿಟ್ಟಿನಲ್ಲಿ ವಕ್ಫ್ ಮಂಡಳಿ ಚುನಾವಣೆ ನಡೆಸಲು ಮುಂದಾಗಿದೆ.
ಚುನಾವಣಾಧಿಕಾರಿಯಾಗಿ ನಿವೃತ್ತ ವಕ್ಫ್ ಅಧಿಕಾರಿ ಹಾಗೂ ಪ್ರಸ್ತುತ ಸಮಾಲೋಚಕರಾಗಿರುವ ಮೊಹಮ್ಮದ್ ಪಾಷಾ ಅವರನ್ನು ಚುನಾವಣಾ ಪ್ರಕ್ರಿಯೆ ಜವಾಬ್ದಾರಿಗೆ ನೇಮಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಹಾಲಿ ವಕ್ಫ್ ಅಧಿಕಾರಿಗಳನ್ನು ಮತದಾರರ ಪಟ್ಟಿ ಸಿದ್ಧಪಡಿಸುವ ಮತ್ತು ನೋಂದಣಿ ಕಾರ್ಯಕ್ಕೆ ನೇಮಕ ಮಾಡಲಾಗಿದೆ.
ಅರ್ಹ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ, ನೋಂದಣಿ ಪ್ರಕ್ರಿಯೆ ನಡೆಸಲಾಗುತ್ತದೆ. ನಂತರ ಚುನಾವಣಾ ದಿನಾಂಕ ಘೋಷಿಸಿ, ನೂತನ ಆಡಳಿತ ಮಂಡಳಿಯ ಆಯ್ಕೆ ನಡೆಯಲಿದೆ.
ಉಳ್ಳಾಲ ಜುಮ್ಮಾ ಮಸೀದಿ ಹಾಗೂ ದರ್ಗಾ ಆಡಳಿತದ ಹಾಲಿ ಸಮಿತಿ ವಿರುದ್ಧ ಸಮಿತಿ ಸದಸ್ಯರೇ ರಾಜ್ಯ ಉಚ್ಚ ನ್ಯಾಯಾಲಯದ ಮೊರೆ ಹೋಗಿ ಕಳೆದೊಂದು ವರ್ಷದಿಂದ ಕಾನೂನು ಹೋರಾಟ ಮಾಡುತ್ತಿದ್ದು ಪರಿಶೀಲನೆಗೆ ರಾಜ್ಯ ವಕ್ಫ್ ಮಂಡಳಿಗೆ ಹೈಕೋರ್ಟ್ ಆದೇಶ ಮಾಡಿತ್ತು. ಆಕ್ಷೇಪಣೆಗಳ ಪರಿಶೀಲನೆಗಾಗಿ ತನಿಖಾಧಿಕಾರಿಯನ್ನು ನೇಮಕ ಮಾಡಿ ರಾಜ್ಯ ವಕ್ಫ್ ಮಂಡಳಿ ಆದೇಶ ಮಾಡಿತ್ತು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm