ಬ್ರೇಕಿಂಗ್ ನ್ಯೂಸ್
08-05-26 09:05 pm HK News Staffer ಕರಾವಳಿ
ಮಂಗಳೂರು, ಮೇ 08: ದಶಕಗಳ ಕನಸಾಗಿದ್ದ ಮಂಗಳೂರು-ತಣ್ಣೀರುಬಾವಿ ಸೇತುವೆ ಕಾಮಗಾರಿ ಇದೀಗ ಅಂತಿಮ ಹಂತ ತಲುಪಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಲ್ಲಿ ಸಾರ್ವಜನಿಕ ಬಳಕೆಗೆ ಲೋಕಾರ್ಪಣೆ ಮಾಡುವ ಸಾಧ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸೇತುವೆ ನಿರ್ಮಾಣದಿಂದ ತಣ್ಣೀರುಬಾವಿ ಭಾಗದ ಜನರ ಸಂಚಾರ ಸಮಸ್ಯೆಗೆ ದೊಡ್ಡ ಮಟ್ಟದ ಪರಿಹಾರ ಸಿಗಲಿದೆ.
ದಶಕಗಳ ಬೇಡಿಕೆಗೆ ಸಾಕಾರ;
ತಣ್ಣೀರುಬಾವಿ ಬೀಚ್ ಮಂಗಳೂರು ನಗರದ ಸಮೀಪದಲ್ಲೇ ಇದ್ದರೂ, ರಸ್ತೆ ಮಾರ್ಗದಲ್ಲಿ ತೆರಳಬೇಕಾದರೆ ಸುಮಾರು 15 ರಿಂದ 20 ಕಿಲೋಮೀಟರ್ ಸುತ್ತುವ ಪರಿಸ್ಥಿತಿ ಇತ್ತು. ಫೆರಿಯಲ್ಲಿ ಕೆಲವೇ ನಿಮಿಷಗಳಲ್ಲಿ ತಲುಪಬಹುದಾದ ಈ ಭಾಗಕ್ಕೆ ನೇರ ರಸ್ತೆ ಸಂಪರ್ಕದ ಕೊರತೆ ವರ್ಷಗಳಿಂದ ಜನರ ಸಮಸ್ಯೆಯಾಗಿತ್ತು.
ತಣ್ಣೀರುಬಾವಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಮಂಗಳೂರಿಗೆ ಸಂಪರ್ಕ ಸಾಧಿಸಲು ಫೆರಿಯನ್ನೇ ಅವಲಂಬಿಸಬೇಕಾಗುತ್ತಿತ್ತು. ತುರ್ತು ವೈದ್ಯಕೀಯ ಸೇವೆ ಸೇರಿದಂತೆ ಹಲವು ಸಂದರ್ಭಗಳಲ್ಲಿ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದರು.
ಪ್ರಯಾಣದ ಸಮಯ 35 ನಿಮಿಷದಿಂದ 10 ನಿಮಿಷಕ್ಕೆ;
ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣವಾಗುತ್ತಿರುವ ಈ ಸೇತುವೆ ಒಟ್ಟು 285 ಮೀಟರ್ ಉದ್ದವಿದ್ದು, ಸುಮಾರು 64 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಇದರಲ್ಲೂ 100 ಮೀಟರ್ ಉದ್ದದ ಬೋ-ಸ್ಟ್ರಿಂಗ್ ವಿನ್ಯಾಸದ ಸೇತುವೆ ಪ್ರಮುಖ ಆಕರ್ಷಣೆಯಾಗಿದೆ. ಸೇತುವೆ ಪೂರ್ಣಗೊಂಡ ಬಳಿಕ ಪ್ರಸ್ತುತ 30 ರಿಂದ 35 ನಿಮಿಷ ಬೇಕಾಗುವ ಪ್ರಯಾಣ ಕೇವಲ 8 ರಿಂದ 10 ನಿಮಿಷಕ್ಕೆ ಇಳಿಯಲಿದೆ.
ಎಲ್ಲಾ ವಾಹನಗಳಿಗೆ ಸಂಚಾರ ಸೌಲಭ್ಯ ;
ಈ ಸೇತುವೆ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಪ್ರವಾಸೋದ್ಯಮ, ವ್ಯಾಪಾರ ಮತ್ತು ಸ್ಥಳೀಯ ಸಂಚಾರಕ್ಕೆ ಇದು ಹೊಸ ಚೈತನ್ಯ ನೀಡಲಿದೆ ಎನ್ನಲಾಗುತ್ತಿದೆ.
ಮಳೆಗಾಲದ ನಡುವೆ ಕಾಮಗಾರಿ ಸವಾಲು;
ಸದ್ಯ ಕಾಮಗಾರಿ ವೇಗವಾಗಿ ಸಾಗುತ್ತಿದ್ದರೂ, ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಉಳಿದ ಕೆಲಸಗಳು ಎಷ್ಟು ವೇಗವಾಗಿ ಪೂರ್ಣಗೊಳ್ಳುತ್ತವೆ ಎನ್ನುವ ಕುತೂಹಲ ಹೆಚ್ಚಾಗಿದೆ. ಸಚಿವ ದಿನೇಶ್ ಗುಂಡೂರಾವ್ ಈಗಾಗಲೇ ಲೋಕಾರ್ಪಣೆ ವೇಳಾಪಟ್ಟಿ ಘೋಷಿಸಿರುವುದರಿಂದ, ಗುತ್ತಿಗೆದಾರರು ಮತ್ತು ಅಧಿಕಾರಿಗಳು ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸಬೇಕಾದ ಒತ್ತಡದಲ್ಲಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am