ಬ್ರೇಕಿಂಗ್ ನ್ಯೂಸ್
08-05-26 10:33 pm HK News Staffer ಕರಾವಳಿ
ಉಳ್ಳಾಲ, ಮೇ 8: ನಿಟ್ಟೆ ಪರಿಗಣಿತ ವಿವಿ ವತಿಯಿಂದ ಕುತ್ತಾರು ಜಂಕ್ಷನ್ ನಲ್ಲಿ ಕುತ್ತಾರ್ ಜಂಕ್ಷನ್ನಲ್ಲಿ ವೃತ್ತವೊಂದನ್ನ ನಿರ್ಮಿಸಲು ರೂಪುರೇಷೆ ಸಿದ್ಧಗೊಂಡಿದ್ದು, ಇದೇ ವೇಳೆ ಅಲ್ಲಿ ಕೊರಗಜ್ಜನ ಹೆಸರಲ್ಲಿ ವೃತ್ತ ನಿರ್ಮಿಸಬಾರದೆಂದು ಅಲ್ಪಸಂಖ್ಯಾತ ಸಮುದಾಯದ ಗುಂಪೊಂದು ಸ್ಪೀಕರ್ ಖಾದರ್ ಅವರನ್ನ ತಡೆದು ಘೇರಾವ್ ಮಾಡಿ ತರಾಟೆಗೈದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಉಳ್ಳಾಲ ಮಾಸ್ತಿಕಟ್ಟೆಯ ರೆಸಾರ್ಟ್ ಒಂದರಲ್ಲಿ ಗುರುವಾರ ರಾತ್ರಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮುಸ್ಲಿಮರ ಗುಂಪೊಂದು ಸ್ಪೀಕರ್ ಖಾದರ್ ಅವರನ್ನು ಪ್ರಶ್ನೆ ಮಾಡಿ ಕುತ್ತಾರು ಜಂಕ್ಷನ್ ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣ ಮಾಡದಂತೆ ತಗಾದೆ ಎತ್ತಿದ್ದಾರೆ. ಈ ವೇಳೆ, ಮಾತಿಗೆ ಮಾತು ಬೆಳೆದಿದ್ದು ಇದರ ಸಣ್ಣ ವೀಡಿಯೋವನ್ನು ಅಲ್ಲಿದ್ದವರೇ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.
ಕುತ್ತಾರು ಕೊರಗಜ್ಜನ ಆದಿಕ್ಷೇತ್ರಕ್ಕೆ ರಾಜ್ಯದ ವಿವಿಧ ಕಡೆಗಳಿಂದ ಬರುವ ಭಕ್ತಾಧಿಗಳಿಗೆ ಮಾಹಿತಿ ನೀಡುವುದಕ್ಕಾಗಿ ವರ್ಷಗಳ ಹಿಂದೆ ಕುತ್ತಾರು ಜಂಕ್ಷನ್ ನಲ್ಲಿ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಕೊರಗಜ್ಜನ ಮುಟ್ಟಾಳೆಯ ಪ್ರತಿಕೃತಿಯುಳ್ಳ ಸಣ್ಣ ವೃತ್ತವೊಂದನ್ನ ನಿರ್ಮಿಸಿದ್ದರು. ಈಗಲೂ ಆ ವೃತ್ತವು ಕುತ್ತಾರು ಜಂಕ್ಷನ್ ನಲ್ಲಿದೆ. ಇದೀಗ ನಿಟ್ಟೆ ವಿವಿಯ ವತಿಯಿಂದ ಕುತ್ತಾರು ಜಂಕ್ಷನ್ ನಲ್ಲಿ ನೂತನ ವೃತ್ತವನ್ನ ನಿರ್ಮಿಸಲು ಮುಂದಾಗಿದ್ದಾರೆ. ವೃತ್ತದಲ್ಲಿ ಕೊರಗಜ್ಜನ ಆದಿ ಕ್ಷೇತ್ರದ ಮಾಹಿತಿ ಮತ್ತು ಕೊರಗಜ್ಜನ ಮುಟ್ಟಾಳೆ ಸೇರಿ ಇತರ ಧರ್ಮೀಯರ ಕ್ಷೇತ್ರದ ಬಗ್ಗೆಯೂ ಮಾಹಿತಿಯನ್ನು ನೀಡುವ ಸಿದ್ಧತೆ ನಡೆದಿದೆ.
ಆದರೆ ಈ ವಿಚಾರ ತಿಳಿಯದ ಮುಸ್ಲಿಂ ಗುಂಪು ಸ್ಥಳೀಯ ಶಾಸಕ ಹಾಗೂ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಪ್ರಶ್ನಿಸಿ ಘೇರಾವ್ ಹಾಕಿದ್ದು ಅದರ ವೀಡಿಯೋವನ್ನು ಜಾಲತಾಣಗಳಲ್ಲಿ ಹರಿಬಿಡಲಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am