ಬ್ರೇಕಿಂಗ್ ನ್ಯೂಸ್
09-05-26 02:13 pm HK News Staffer ಕರಾವಳಿ
ಉಡುಪಿ, ಮೇ 9: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮನೆ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಉಡುಪಿ ಪೊಲೀಸರು “ಲಾಕ್ ಹೌಸ್ ಬೀಟ್ ಸಿಸ್ಟಮ್” ಎಂಬ ಹೊಸ ಭದ್ರತಾ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಮನೆಮಾಲೀಕರು ಪ್ರವಾಸ, ಉದ್ಯೋಗ ಅಥವಾ ಇತರ ಕಾರಣಗಳಿಂದ ಕೆಲವು ದಿನ ಮನೆ ಖಾಲಿ ಇಡುವ ಸಂದರ್ಭಗಳಲ್ಲಿ ಪೊಲೀಸರಿಗೆ ಮುಂಚಿತವಾಗಿ ಮಾಹಿತಿ ನೀಡುವ ಮೂಲಕ ಈ ಸೇವೆಯ ಪ್ರಯೋಜನ ಪಡೆಯಬಹುದಾಗಿದೆ.
ಖಾಲಿ ಮನೆಗಳ ಮೇಲೆ ಪೊಲೀಸರ ವಿಶೇಷ ನಿಗಾ
ಈ ಯೋಜನೆಯಡಿ ಮನೆಮಾಲೀಕರು ತಮ್ಮ ಮನೆಯ ವಿಳಾಸ, ಸಂಪರ್ಕ ಸಂಖ್ಯೆ, ಹೊರಡುವ ಹಾಗೂ ಮರಳುವ ದಿನಾಂಕದ ಮಾಹಿತಿ ಸ್ಥಳೀಯ ಪೊಲೀಸ್ ಠಾಣೆಗೆ ನೀಡಬೇಕು. ಮಾಹಿತಿ ಪಡೆದ ಬಳಿಕ ಪೊಲೀಸ್ ಸಿಬ್ಬಂದಿ ಆ ಮನೆಗಳ ಮೇಲೆ ವಿಶೇಷ ನಿಗಾ ವಹಿಸಿ, ವಿಶೇಷವಾಗಿ ರಾತ್ರಿ ವೇಳೆ ನಿಯಮಿತ ಪೆಟ್ರೋಲಿಂಗ್ ನಡೆಸಲಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾತನಾಡಿ, “ಜನರ ಮನೆಗಳ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಿದರೆ ಮನೆ ಕಳ್ಳತನ ಪ್ರಕರಣಗಳನ್ನು ಬಹಳ ಮಟ್ಟಿಗೆ ತಡೆಯಬಹುದು” ಎಂದು ತಿಳಿಸಿದ್ದಾರೆ.
ಮೂರು ವರ್ಷಗಳಲ್ಲಿ ಕಳ್ಳತನ ಪ್ರಕರಣ ಏರಿಕೆ
ಪೊಲೀಸರ ಮಾಹಿತಿ ಪ್ರಕಾರ, ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಮನೆ ಕಳ್ಳತನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆ ಈ ಹೊಸ ವ್ಯವಸ್ಥೆ ಜಾರಿಗೆ ತರಲಾಗಿದೆ. ಖಾಲಿ ಮನೆಗಳನ್ನು ಗುರಿಯಾಗಿಸಿಕೊಂಡು ನಡೆಯುವ ಕಳ್ಳತನ ತಡೆಯಲು ಈ ಯೋಜನೆ ಸಹಕಾರಿ ಆಗಲಿದೆ ಎಂಬ ವಿಶ್ವಾಸವನ್ನು ಇಲಾಖೆ ವ್ಯಕ್ತಪಡಿಸಿದೆ.
ಸೇವೆ ಪಡೆಯಲು ಏನು ಮಾಡಬೇಕು?
• ಮನೆ ಕೆಲವು ದಿನ ಖಾಲಿ ಇಡುವ ಮೊದಲು ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.
• ಮನೆಯ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಪರ್ಯಾಯ ಸಂಪರ್ಕ ಸಂಖ್ಯೆಯನ್ನು ಸಲ್ಲಿಸಬೇಕು.
• ಹೊರಡುವ ದಿನಾಂಕ ಮತ್ತು ಮರಳುವ ದಿನಾಂಕವನ್ನು ತಿಳಿಸಬೇಕು.
• ಅಗತ್ಯವಿದ್ದರೆ ಆಧಾರ್ ಮಾಹಿತಿ ಹಾಗೂ ಇಮೇಲ್ ವಿಳಾಸ ನೀಡಬೇಕು.
• ಪೊಲೀಸ್ ವೆಬ್ಸೈಟ್ ಅಥವಾ ಮೊಬೈಲ್ ಆಪ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಮಾಹಿತಿ ನೀಡಿದ ಬಳಿಕ ಪೊಲೀಸರು ಮನೆ ಸುತ್ತಮುತ್ತ ನಿಯಮಿತ ಪೆಟ್ರೋಲಿಂಗ್ ನಡೆಸಿ ಭದ್ರತೆ ಪರಿಶೀಲಿಸಲಿದ್ದಾರೆ.
ಸಂಪರ್ಕಕ್ಕೆ
📞 ಪೊಲೀಸ್ ಸಹಾಯವಾಣಿ : 9480805400
📞 ಉಡುಪಿ ಎಸ್ಪಿ ಕಚೇರಿ : 0820-2526709
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am