ಬ್ರೇಕಿಂಗ್ ನ್ಯೂಸ್
09-05-26 02:13 pm HK News Staffer ಕರಾವಳಿ
ಉಡುಪಿ, ಮೇ 9: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮನೆ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಉಡುಪಿ ಪೊಲೀಸರು “ಲಾಕ್ ಹೌಸ್ ಬೀಟ್ ಸಿಸ್ಟಮ್” ಎಂಬ ಹೊಸ ಭದ್ರತಾ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಮನೆಮಾಲೀಕರು ಪ್ರವಾಸ, ಉದ್ಯೋಗ ಅಥವಾ ಇತರ ಕಾರಣಗಳಿಂದ ಕೆಲವು ದಿನ ಮನೆ ಖಾಲಿ ಇಡುವ ಸಂದರ್ಭಗಳಲ್ಲಿ ಪೊಲೀಸರಿಗೆ ಮುಂಚಿತವಾಗಿ ಮಾಹಿತಿ ನೀಡುವ ಮೂಲಕ ಈ ಸೇವೆಯ ಪ್ರಯೋಜನ ಪಡೆಯಬಹುದಾಗಿದೆ.
ಖಾಲಿ ಮನೆಗಳ ಮೇಲೆ ಪೊಲೀಸರ ವಿಶೇಷ ನಿಗಾ
ಈ ಯೋಜನೆಯಡಿ ಮನೆಮಾಲೀಕರು ತಮ್ಮ ಮನೆಯ ವಿಳಾಸ, ಸಂಪರ್ಕ ಸಂಖ್ಯೆ, ಹೊರಡುವ ಹಾಗೂ ಮರಳುವ ದಿನಾಂಕದ ಮಾಹಿತಿ ಸ್ಥಳೀಯ ಪೊಲೀಸ್ ಠಾಣೆಗೆ ನೀಡಬೇಕು. ಮಾಹಿತಿ ಪಡೆದ ಬಳಿಕ ಪೊಲೀಸ್ ಸಿಬ್ಬಂದಿ ಆ ಮನೆಗಳ ಮೇಲೆ ವಿಶೇಷ ನಿಗಾ ವಹಿಸಿ, ವಿಶೇಷವಾಗಿ ರಾತ್ರಿ ವೇಳೆ ನಿಯಮಿತ ಪೆಟ್ರೋಲಿಂಗ್ ನಡೆಸಲಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾತನಾಡಿ, “ಜನರ ಮನೆಗಳ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಿದರೆ ಮನೆ ಕಳ್ಳತನ ಪ್ರಕರಣಗಳನ್ನು ಬಹಳ ಮಟ್ಟಿಗೆ ತಡೆಯಬಹುದು” ಎಂದು ತಿಳಿಸಿದ್ದಾರೆ.
ಮೂರು ವರ್ಷಗಳಲ್ಲಿ ಕಳ್ಳತನ ಪ್ರಕರಣ ಏರಿಕೆ
ಪೊಲೀಸರ ಮಾಹಿತಿ ಪ್ರಕಾರ, ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಮನೆ ಕಳ್ಳತನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆ ಈ ಹೊಸ ವ್ಯವಸ್ಥೆ ಜಾರಿಗೆ ತರಲಾಗಿದೆ. ಖಾಲಿ ಮನೆಗಳನ್ನು ಗುರಿಯಾಗಿಸಿಕೊಂಡು ನಡೆಯುವ ಕಳ್ಳತನ ತಡೆಯಲು ಈ ಯೋಜನೆ ಸಹಕಾರಿ ಆಗಲಿದೆ ಎಂಬ ವಿಶ್ವಾಸವನ್ನು ಇಲಾಖೆ ವ್ಯಕ್ತಪಡಿಸಿದೆ.
ಸೇವೆ ಪಡೆಯಲು ಏನು ಮಾಡಬೇಕು?
• ಮನೆ ಕೆಲವು ದಿನ ಖಾಲಿ ಇಡುವ ಮೊದಲು ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.
• ಮನೆಯ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಪರ್ಯಾಯ ಸಂಪರ್ಕ ಸಂಖ್ಯೆಯನ್ನು ಸಲ್ಲಿಸಬೇಕು.
• ಹೊರಡುವ ದಿನಾಂಕ ಮತ್ತು ಮರಳುವ ದಿನಾಂಕವನ್ನು ತಿಳಿಸಬೇಕು.
• ಅಗತ್ಯವಿದ್ದರೆ ಆಧಾರ್ ಮಾಹಿತಿ ಹಾಗೂ ಇಮೇಲ್ ವಿಳಾಸ ನೀಡಬೇಕು.
• ಪೊಲೀಸ್ ವೆಬ್ಸೈಟ್ ಅಥವಾ ಮೊಬೈಲ್ ಆಪ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಮಾಹಿತಿ ನೀಡಿದ ಬಳಿಕ ಪೊಲೀಸರು ಮನೆ ಸುತ್ತಮುತ್ತ ನಿಯಮಿತ ಪೆಟ್ರೋಲಿಂಗ್ ನಡೆಸಿ ಭದ್ರತೆ ಪರಿಶೀಲಿಸಲಿದ್ದಾರೆ.
ಸಂಪರ್ಕಕ್ಕೆ
📞 ಪೊಲೀಸ್ ಸಹಾಯವಾಣಿ : 9480805400
📞 ಉಡುಪಿ ಎಸ್ಪಿ ಕಚೇರಿ : 0820-2526709
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm