ಬ್ರೇಕಿಂಗ್ ನ್ಯೂಸ್
13-05-26 11:02 pm HK News Desk ಕರಾವಳಿ
ಮಂಗಳೂರು, ಮೇ 13: ಬೀಗ ಹಾಕಿರುವ ಮನೆಗಳಲ್ಲಿ ಸಂಭಾವ್ಯ ಕಳ್ಳತನವನ್ನು ತಡೆಯುವ ನಿಟ್ಟಿನಲ್ಲಿ ಅಂತಹ ಮನೆಗಳ ಮೇಲೆ ನಿಯಮಿತ ಪೊಲೀಸ್ ನಿಗಾವಹಿಸಲು ರಾಜ್ಯದ ವಿವಿಧೆಡೆ ಜಾರಿಗೆ ಬಂದಿರುವ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್' (ಎಲ್ಎಚ್ಬಿಎಸ್) ಅನ್ನು ಉಡುಪಿ ನಂತರ ಇದೀಗ ಮಂಗಳೂರು ಕಮಿನಷರೆಟ್ ವ್ಯಾಪ್ತಿಯಲ್ಲೂ ಅನುಷ್ಠಾನ ಮಾಡಲಾಗಿದೆ.
ಸಮುದಾಯ ಪೊಲೀಸ್ ಉಪಕ್ರಮದ ಭಾಗವಾಗಿರುವ "ಲಾಕ್ಸ್ ಹೌಸ್ ಬೀಟ್ ಸಿಸ್ಟಮ್' ಯೋಜನೆ ಮನೆಯನ್ನು ಕಳ್ಳತನದಿಂದ ರಕ್ಷಿಸಲು ಸಹಾಯ ಮಾಡಲಿದೆ. ಬೀಗ ಹಾಕಿರುವ ಮನೆಗಳ ಮೇಲೆ ನಿಯಮಿತ ನಿಗಾ ವಹಿಸುವ ಮೂಲಕ ಮನೆಯ ಮಾಲಕರು ವಾಪಾಸು ಬರುವವ ವರೆಗೆ ಸಂಪೂರ್ಣ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸಲಾಗಿತ್ತದೆ.
ಮನೆ ಮಾಲಕರು ಪ್ರವಾಸ, ಇತರ ಕಾರ್ಯಕ್ರಮಗಳಿಗಾಗಿ ಮನೆಗೆ ಬೀಗ ಹಾಕಿ ತಾತ್ಕಾಲಿಕವಾಗಿ ಹೊರಗೆ ಹೋಗುವ ಸಂದರ್ಭದಲ್ಲಿ ಪೊಲೀಸರಿಗೆ ಮಾಹಿತಿ ನೀಡುವುದರಿಂದ ಅಂತಹ ಮನೆಗಳ ಮೇಲೆ ಹೆಚ್ಚಿನ ನಿಗಾ ವಹಿಸಲು ಸಾಧ್ಯವಾಗಲಿದೆ. ಈ ಯೋಜನೆ ವೈಯಕ್ತಿಕ ಮನೆಗಳಿಗೆ ಮಾತ್ರ ಅನ್ವಯಿಸುತ್ತದೆ. ಅಪಾರ್ಟ್ ಮೆಂಟ್ ಅಥವಾ ವಾಣಿಜ್ಯ ಕಟ್ಟಡಗಳಿಗೆ ಅನ್ವಯಿಸುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ನೀಡಿದವರ ಮನೆಯ ಪರಿಸರದಲ್ಲಿ ಪೊಲೀಸ್ ಬೀಟ್ ಹೆಚ್ಚಿಸಲಾಗುತ್ತದೆ. ರಾತ್ರಿಯ ಹೊತ್ತು ಪೊಲೀಸರು ಈ ಭಾಗದಲ್ಲಿ ಹೆಚ್ಚು ಓಡಾಟ ನಡೆಸುತ್ತಾರೆ. ಮನೆಯ ಸುತ್ತಮುತ್ತ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿದ್ದರೆ ಗಮನಹರಿಸಲಿದ್ದಾರೆ.
ಯೋಜನೆಯ ಉದ್ದೇಶಗಳು;
ಬೀಗ ಹಾಕಿರುವ ಮನೆಗಳಲ್ಲಿ ಕಳ್ಳತನ ತಡೆಗಟ್ಟುವುದು.
ರಾತ್ರಿ ಗಸ್ತನ್ನು ಹೆಚ್ಚು ಪರಿಣಾಮಕಾರಿ ಆಗಿಸುವುದು.
ಅಪರಾಧ ತಡೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಹೆಚ್ಚಳ
ಸಾರ್ವಜನಿಕರು ಏನು ಮಾಡಬೇಕು ?
ಸಾರ್ವಜನಿಕರು ಮನೆಯನ್ನು ಕೆಲ ದಿನಗಳ ಮಟ್ಟಿಗೆ ಖಾಲಿ ಬಿಟ್ಟು ಹೋಗಲು ನಿರ್ಧರಿಸಿದ್ದರೆ ಅಂತಹ ಸಂದರ್ಭದಲ್ಲಿ ಪೊಲೀಸ್ ಕಂಟ್ರೋಲ್ ರೂಂ.ನ ವಾಟ್ಸ್ ಆ್ಯಪ್ ಸಂಖ್ಯೆಗೆ ಮಾಹಿತಿ ನೀಡಬಹುದು. ವಾಟ್ಸ್ ಆ್ಯಪ್ ನಲ್ಲಿ ಮನೆ ಮಾಲಕರ ಹೆಸರು, ಪೂರ್ಣ ವಿಳಾಸ, ಗೂಗಲ್ ಲೊಕೇಶನ್, ಮನೆಯಲ್ಲಿ ಇಲ್ಲದಿರುವ ದಿನಾಂಕ ಹಾಗೂ ಮನೆಯೊಂದಿಗೆ ಒಂದು ಸೆಲ್ಪಿಯನ್ನು ಕಳುಹಿಸಬೇಕು. ವಾಟ್ಸ್ ಆ್ಯಪ್ ಕಳುಹಿಸಬೇಕಾದ ಸಂಖ್ಯೆ 9480802321.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm