ಬ್ರೇಕಿಂಗ್ ನ್ಯೂಸ್
14-05-26 10:48 pm HK News Staffer ಕರಾವಳಿ
ಉಳ್ಳಾಲ, ಮೇ 14: ಉಳ್ಳಾಲ ಕೋಟೆಪುರದ ಫಿಶ್ ಮೀಲ್ ಫ್ಯಾಕ್ಟರಿಯಿಂದ ಮೀನಿನ ಎಣ್ಣೆಯನ್ನು ಹೊತ್ತೊಯ್ಯುತ್ಯಿದ್ದ ಕ್ಯಾಂಟರ್ ನಿಂದ ತಾಂತ್ರಿಕ ದೋಷದಿಂದಾಗಿ ಭಾರೀ ಪ್ರಮಾಣದ ಮೀನಿನ ಎಣ್ಣೆ ಉಳ್ಳಾಲದ ರಾಜ ರಸ್ತೆಯಲ್ಲೇ ಸೋರಿಕೆಯಾಗಿದ್ದು ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಮೀನಿನ ಕ್ಯಾಂಟರನ್ನ ತಡೆದು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉಳ್ಳಾಲ ಕೋಟೆಪುರದಲ್ಲಿ ನಾಯಿಕೊಡೆಗಳಂತೆ ಫಿಶ್ ಮೀಲ್ ಫ್ಯಾಕ್ಟರಿಗಳು ತಲೆ ಎತ್ತಿದ್ದು ಉಳ್ಳಾಲ ನಗರವನ್ನ ಅನಧಿಕೃತ ಕೈಗಾರಿಕಾ ಪ್ರದೇಶವನ್ನಾಗಿಸಿದೆ. ಇಂದು ರಾತ್ರಿ ಕೋಟೆಪುರದಿಂದ ಮಂಗಳೂರು ಬಂದರಿಗೆ ಫಿಶ್ ಮೀಲ್ ಆಯಿಲನ್ನು ಹೊತ್ಯೊಯ್ಯುತ್ತಿದ್ದ ಬೃಹತ್ ಕ್ಯಾಂಟರ್ ಒಂದರಿಂದ ತಾಂತ್ರಿಕ ದೋಷದಿಂದಾಗಿ ಭಾರೀ ಪ್ರಮಾಣದ ಫಿಶ್ ಆಯಿಲ್ ರಸ್ತೆಯಲ್ಲೇ ಸೋರಿಕೆಯಾಗಿದೆ. ಉಳ್ಳಾಲ ಅಬ್ಬಕ್ಕ ಸರ್ಕಲ್ ನಿಂದ ಉಳ್ಳಾಲ ಬೈಲ್ ವರೆಗೂ ಫಿಶ್ ಆಯಿಲ್ ಸೋರಿಕೆಯಾಗಿದ್ದು ದ್ವಿಚಕ್ರ ವಾಹನ ಸವಾರರಲ್ಲದೆ, ತ್ರಿಚಕ್ರ ವಾಹನ ಸವಾರರು ಕೂಡ ರಸ್ತೆಯಲ್ಲಿ ಜಾರಿ ಬಿದ್ದಿದ್ದಾರೆ.




ಉದ್ರಿಕ್ತ ಸ್ಥಳೀಯರು ಫಿಶ್ ಮೀಲ್ ಆಯಿಲ್ ಸಾಗಿಸುತ್ತಿದ್ದ ಕ್ಯಾಂಟರನ್ನ ಉಳ್ಳಾಲ ಬೈಲಿನಲ್ಲಿ ಅಡ್ಡ ಹಾಕಿ ತಡೆದು ನಿಲ್ಲಿಸಿ ಪ್ರತಿಭಟಿಸಿದ್ದಾರೆ. ಕ್ಯಾಂಟರಿಂದ ಲಕ್ಷಗಟ್ಟಲೆ ಮೌಲ್ಯದ ಆಯಿಲ್ ಸೋರಿಕೆಯಾಗುತ್ತಲೇ ಇದ್ದು ಆಯಿಲನ್ನು ಬೇರೊಂದು ಕ್ಯಾಂಟರ್ ಗೆ ತುಂಬಿಸಲಾಗುತ್ತಿದೆ.
ಘಟನೆಯಿಂದ ಉಳ್ಳಾಲ ಅಬ್ಬಕ್ಕ ಸರ್ಕಲ್ ನಿಂದ ಉಳ್ಳಾಲ ಬೈಲ್ ತನಕ ಏಕಮುಖ ರಸ್ತೆಯ ಸಂಚಾರ ಸ್ಥಗಿತಗೊಳಿಸಲಾಗಿದೆ. ರಸ್ತೆಯುದ್ದಕ್ಕೂ ಸೋರಿಕೆಯಾಗಿರುವ ಭಾರೀ ಜಿಡ್ಡಿನ ಫಿಶ್ ಆಯಿಲನ್ನ ಶುದ್ಧಗೊಳಿಸುವುದು ಹೇಗೆಂದು ಪೊಲೀಸರು ಜನಸಾಮಾನ್ಯರಲ್ಲಿ ವಿಚಾರಿಸುತ್ತಿದ್ದಾರೆ.
ಉಳ್ಳಾಲ ನಗರ ಪ್ರದೇಶದಲ್ಲಿ ತಲೆ ಎತ್ತಿರುವ ಅನಧಿಕೃತ ಫಿಶ್ ಮೀಲ್ ಫ್ಯಾಕ್ಟರಿಗಳಿಂದ ಇಲ್ಲಿನ ಜನರು ದಿನ ನಿತ್ಯವೂ ತೊಂದರೆ ಅನುಭವಿಸುತ್ತಿದ್ದಾರೆ. ಫ್ಯಾಕ್ಟರಿಗಳ ಗಬ್ಬು ವಾಸನೆ ಉಳ್ಳಾಲ ಮಾತ್ರವಲ್ಲದೆ ಸಮೀಪದ ಮಂಗಳಾದೇವಿ ಪರಿಸರಕ್ಕೂ ವ್ಯಾಪಿಸಿದೆ. ಇದೀಗ ಭಾರೀ ಪ್ರಮಾಣದಲ್ಲಿ ರಸ್ತೆಯಲ್ಲಿ ಫಿಶ್ ಮೀಲ್ ಆಯಿಲ್ ಸೋರಿಕೆಯಾಗಿರುವುದರಿಂದ ಇಡೀ ಉಳ್ಳಾಲವೇ ಗಬ್ಬು ನಾರುವಂತಾಗಿದೆ.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm