ಬ್ರೇಕಿಂಗ್ ನ್ಯೂಸ್
14-05-26 10:48 pm HK News Staffer ಕರಾವಳಿ
ಉಳ್ಳಾಲ, ಮೇ 14: ಉಳ್ಳಾಲ ಕೋಟೆಪುರದ ಫಿಶ್ ಮೀಲ್ ಫ್ಯಾಕ್ಟರಿಯಿಂದ ಮೀನಿನ ಎಣ್ಣೆಯನ್ನು ಹೊತ್ತೊಯ್ಯುತ್ಯಿದ್ದ ಕ್ಯಾಂಟರ್ ನಿಂದ ತಾಂತ್ರಿಕ ದೋಷದಿಂದಾಗಿ ಭಾರೀ ಪ್ರಮಾಣದ ಮೀನಿನ ಎಣ್ಣೆ ಉಳ್ಳಾಲದ ರಾಜ ರಸ್ತೆಯಲ್ಲೇ ಸೋರಿಕೆಯಾಗಿದ್ದು ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಮೀನಿನ ಕ್ಯಾಂಟರನ್ನ ತಡೆದು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉಳ್ಳಾಲ ಕೋಟೆಪುರದಲ್ಲಿ ನಾಯಿಕೊಡೆಗಳಂತೆ ಫಿಶ್ ಮೀಲ್ ಫ್ಯಾಕ್ಟರಿಗಳು ತಲೆ ಎತ್ತಿದ್ದು ಉಳ್ಳಾಲ ನಗರವನ್ನ ಅನಧಿಕೃತ ಕೈಗಾರಿಕಾ ಪ್ರದೇಶವನ್ನಾಗಿಸಿದೆ. ಇಂದು ರಾತ್ರಿ ಕೋಟೆಪುರದಿಂದ ಮಂಗಳೂರು ಬಂದರಿಗೆ ಫಿಶ್ ಮೀಲ್ ಆಯಿಲನ್ನು ಹೊತ್ಯೊಯ್ಯುತ್ತಿದ್ದ ಬೃಹತ್ ಕ್ಯಾಂಟರ್ ಒಂದರಿಂದ ತಾಂತ್ರಿಕ ದೋಷದಿಂದಾಗಿ ಭಾರೀ ಪ್ರಮಾಣದ ಫಿಶ್ ಆಯಿಲ್ ರಸ್ತೆಯಲ್ಲೇ ಸೋರಿಕೆಯಾಗಿದೆ. ಉಳ್ಳಾಲ ಅಬ್ಬಕ್ಕ ಸರ್ಕಲ್ ನಿಂದ ಉಳ್ಳಾಲ ಬೈಲ್ ವರೆಗೂ ಫಿಶ್ ಆಯಿಲ್ ಸೋರಿಕೆಯಾಗಿದ್ದು ದ್ವಿಚಕ್ರ ವಾಹನ ಸವಾರರಲ್ಲದೆ, ತ್ರಿಚಕ್ರ ವಾಹನ ಸವಾರರು ಕೂಡ ರಸ್ತೆಯಲ್ಲಿ ಜಾರಿ ಬಿದ್ದಿದ್ದಾರೆ.




ಉದ್ರಿಕ್ತ ಸ್ಥಳೀಯರು ಫಿಶ್ ಮೀಲ್ ಆಯಿಲ್ ಸಾಗಿಸುತ್ತಿದ್ದ ಕ್ಯಾಂಟರನ್ನ ಉಳ್ಳಾಲ ಬೈಲಿನಲ್ಲಿ ಅಡ್ಡ ಹಾಕಿ ತಡೆದು ನಿಲ್ಲಿಸಿ ಪ್ರತಿಭಟಿಸಿದ್ದಾರೆ. ಕ್ಯಾಂಟರಿಂದ ಲಕ್ಷಗಟ್ಟಲೆ ಮೌಲ್ಯದ ಆಯಿಲ್ ಸೋರಿಕೆಯಾಗುತ್ತಲೇ ಇದ್ದು ಆಯಿಲನ್ನು ಬೇರೊಂದು ಕ್ಯಾಂಟರ್ ಗೆ ತುಂಬಿಸಲಾಗುತ್ತಿದೆ.
ಘಟನೆಯಿಂದ ಉಳ್ಳಾಲ ಅಬ್ಬಕ್ಕ ಸರ್ಕಲ್ ನಿಂದ ಉಳ್ಳಾಲ ಬೈಲ್ ತನಕ ಏಕಮುಖ ರಸ್ತೆಯ ಸಂಚಾರ ಸ್ಥಗಿತಗೊಳಿಸಲಾಗಿದೆ. ರಸ್ತೆಯುದ್ದಕ್ಕೂ ಸೋರಿಕೆಯಾಗಿರುವ ಭಾರೀ ಜಿಡ್ಡಿನ ಫಿಶ್ ಆಯಿಲನ್ನ ಶುದ್ಧಗೊಳಿಸುವುದು ಹೇಗೆಂದು ಪೊಲೀಸರು ಜನಸಾಮಾನ್ಯರಲ್ಲಿ ವಿಚಾರಿಸುತ್ತಿದ್ದಾರೆ.
ಉಳ್ಳಾಲ ನಗರ ಪ್ರದೇಶದಲ್ಲಿ ತಲೆ ಎತ್ತಿರುವ ಅನಧಿಕೃತ ಫಿಶ್ ಮೀಲ್ ಫ್ಯಾಕ್ಟರಿಗಳಿಂದ ಇಲ್ಲಿನ ಜನರು ದಿನ ನಿತ್ಯವೂ ತೊಂದರೆ ಅನುಭವಿಸುತ್ತಿದ್ದಾರೆ. ಫ್ಯಾಕ್ಟರಿಗಳ ಗಬ್ಬು ವಾಸನೆ ಉಳ್ಳಾಲ ಮಾತ್ರವಲ್ಲದೆ ಸಮೀಪದ ಮಂಗಳಾದೇವಿ ಪರಿಸರಕ್ಕೂ ವ್ಯಾಪಿಸಿದೆ. ಇದೀಗ ಭಾರೀ ಪ್ರಮಾಣದಲ್ಲಿ ರಸ್ತೆಯಲ್ಲಿ ಫಿಶ್ ಮೀಲ್ ಆಯಿಲ್ ಸೋರಿಕೆಯಾಗಿರುವುದರಿಂದ ಇಡೀ ಉಳ್ಳಾಲವೇ ಗಬ್ಬು ನಾರುವಂತಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am