ಬ್ರೇಕಿಂಗ್ ನ್ಯೂಸ್
16-05-26 01:13 pm HK News Staffer ಕರಾವಳಿ
ಮಂಗಳೂರು, ಮೇ 16: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿನ ಕೈದಿಗಳಿಗೆ ಹಾಗೂ ಅವರ ಕುಟುಂಬಗಳಿಗೆ ಉಚಿತ ಕಾನೂನು ನೆರವು ಒದಗಿಸುವ ಉದ್ದೇಶದಿಂದ ‘ಕಾನೂನು ನೆರವು ಸಹಾಯ ಕೇಂದ್ರ’ ಆರಂಭಿಸಲಾಗಿದೆ.
‘ಲೀಗಲ್ ಏಡ್ ಹೆಲ್ಪ್ ಡೆಸ್ಕ್’ ಕೇಂದ್ರವನ್ನು ಉದ್ಘಾಟಿಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಸವರಾಜ್ ಮಾತನಾಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಈಗಾಗಲೇ ಉಚಿತ ಕಾನೂನು ನೆರವು ನೀಡುತ್ತಿದ್ದರೂ, ಕಾರಾಗೃಹದ ಆವರಣದಲ್ಲೇ ಈ ವ್ಯವಸ್ಥೆ ಆರಂಭಿಸಿರುವುದರಿಂದ ಕೈದಿಗಳಿಗೆ ಹಾಗೂ ಅವರ ಕುಟುಂಬಗಳಿಗೆ ಕಾನೂನು ಮಾರ್ಗದರ್ಶನ ಇನ್ನಷ್ಟು ಸುಲಭವಾಗಲಿದೆ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಝೈಬುನ್ನಿಸಾ ಮಾತನಾಡಿ, ಕಾನೂನು ತಾಂತ್ರಿಕತೆಗಳ ಕಾರಣದಿಂದಾಗಿ ಹಲವಾರು ಬಾರಿ ಕುಟುಂಬ ಸದಸ್ಯರು ಕೈದಿಗಳನ್ನು ಭೇಟಿಯಾಗಲು ಹಾಗೂ ಜಾಮೀನು ಪ್ರಕ್ರಿಯೆಗಳನ್ನು ಮುಂದುವರಿಸಲು ಕಷ್ಟ ಅನುಭವಿಸುತ್ತಾರೆ. ಇಂತಹ ಸಮಸ್ಯೆಗಳನ್ನು ಪರಿಹರಿಸಲು ಈ ಸಹಾಯ ಕೇಂದ್ರ ನೆರವಾಗಲಿದೆ ಎಂದು ತಿಳಿಸಿದರು.
ಈ ಹೊಸ ವ್ಯವಸ್ಥೆಯ ಮೂಲಕ ಕೈದಿಗಳ ಕುಟುಂಬಗಳು ವಾರಕ್ಕೆ ಎರಡು ಬಾರಿ ಕೇಂದ್ರದ ಮೂಲಕ ಕೈದಿಗಳೊಂದಿಗೆ ಸಂವಹನ ನಡೆಸುವ ಅವಕಾಶವೂ ದೊರೆಯಲಿದೆ ಎಂದು ಅವರು ಹೇಳಿದರು.
ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆ ಯವರೆಗೆ ಸಂಜೆ 4ರಿಂದ 5.30ವರೆಗೆ ಈ ನೆರವು ಕೇಂದ್ರ ತೆರೆದಿರುತ್ತದೆ. ಮೂವರು ವಕೀಲರನ್ನು ಈ ಕೇಂದ್ರಕ್ಕೆ ನಿಯೋಜಿಸಲಾಗಿದ್ದು, ಅವರು ಆರೋಪಿಗಳ ಕುಟುಂಬಿಕರಿಗೆ ಕಾನೂನು ಸಲಹೆ, ಮಾರ್ಗದರ್ಶನ ನೀಡಲಿದ್ದಾರೆ. ಇಂತಹ ಕಾನೂನು ನೆರವು ನೀಡುವ ನಿಟ್ಟಿನಲ್ಲಿ ಪ್ರಾಧಿಕಾರದಿಂದ 10 ಮಂದಿ ಕಾನೂನು ಅಭಿರಕ್ಷಕರನ್ನು ನೇಮಿಸಲಾಗಿದೆ. ಕೊಲೆ, ಪೊಕ್ಸೊ, ದೊಡ್ಡ ಪ್ರಮಾಣದ ಎನ್ಡಿಪಿಎಸ್, ಅತ್ಯಾಚಾರ ಪ್ರಕರಣಗಳ ಆರೋಪಿಗಳನ್ನು ಹೊರತುಪಡಿಸಿ ಇತರ ಪ್ರಕರಣಗಳ ಆರೋಪಿಗಳಿಗೆ ಈ ಕೇಂದ್ರದಿಂದ ನೆರವು ಸಿಗುತ್ತದೆ ಎಂದರು.
ಆದರೆ ಕೊಲೆ, ಪೋಕ್ಸೊ, ಪ್ರಮುಖ ಎನ್ಡಿಪಿಎಸ್ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ಈ ಸೇವೆ ಲಭ್ಯವಿರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಕಾರಾಗೃಹ ಅಧೀಕ್ಷಕ ಶರಣ ಬಸಪ್ಪ, ವಕೀಲ ರವಿರಾಜ್, ಕೆಎಸ್ಐಎಸ್ಎಫ್ ಇನ್ಸ್ಪೆಕ್ಟರ್ ಸುಭಾಷ್ ಹಾಗೂ ಕೇಂದ್ರ ಸಲಹೆಗಾರ ಡೆನಿಸ್ ಡಿಸೋಜಾ ಉಪಸ್ಥಿತರಿದ್ದರು.
ಮಂಗಳೂರು ಕಾರಾಗೃಹದ ಅಧೀಕ್ಷಕ ಶರಣಬಸಪ್ಪ, ವಕೀಲರಾದ ರವಿರಾಜ್, ಕೆಎಸ್ಐಎಸ್ಎಫ್ ನಿರೀಕ್ಷಕ ಸುಭಾಷ್, ಕೇಂದ್ರದ ಸಲಹೆಗಾರಡೆನ್ನಿಸ್ ಡಿಸೋಜಾ ಉಪಸ್ಥಿತರಿದ್ದರು. ಪ್ರೇಮಿ ಫರ್ನಾಂಡೀಸ್ ಕಾಯಕ್ರಮ ನಿರೂಪಿಸಿದರು. ಹರ್ಷಿತಾ ವಂದಿಸಿದರು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm