ಬ್ರೇಕಿಂಗ್ ನ್ಯೂಸ್
16-05-26 09:16 pm HK News Staffer ಕರಾವಳಿ
ಉಡುಪಿ, ಮೇ 16: ವಿಕಲಚೇತನ ಮಕ್ಕಳ ಬೆಳವಣಿಗೆ, ಮನರಂಜನೆ ಹಾಗೂ ಅವರ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಉಡುಪಿ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ “ವಿಶೇಷ ಮಕ್ಕಳಿಗಾಗಿ ಸಾಮರ್ಥ್ಯ ವನ ಪಾರ್ಕ್” ನಿರ್ಮಾಣ ಮಾಡಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಪಂ ವತಿಯಿಂದ ಪಾರ್ಕ್ ನಿರ್ಮಿಸಲಾಗುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು ಪಾರ್ಕ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು.
ವಿಕಲಚೇತನರಿಗೆ ಸಮಗ್ರ ಪುನರ್ವಸತಿ, ಚಿಕಿತ್ಸಕ ಸೇವೆಗಳು, ಉದ್ಯೋಗವಕಾಶ ಮತ್ತು ಸ್ವತಂತ್ರ ಜೀವನಕ್ಕೆ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ವಿಶಿಷ್ಟ ರೀತಿಯ ಪಾರ್ಕ್ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಇದಕ್ಕಾಗಿ ಜಿಪಂ ಸಿಇಓ ಅಧ್ಯಕ್ಷತೆಯಲ್ಲಿ ಇತರ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಸಾಮರ್ಥ್ಯ ಟ್ರಸ್ಟ್ ರಚಿಸಲಾಗಿದೆ. ಒಂದೂವರೆ ಕೋಟಿ ಸರ್ಕಾರಿ ಅನುದಾನ ಮತ್ತು ಇತರ ಸಂಘ- ಸಂಸ್ಥೆಗಳ ನೆರವಿನಲ್ಲಿ ಒಟ್ಟು 4.90 ಕೋಟಿ ವೆಚ್ಚದಲ್ಲಿ ವಿಶಿಷ್ಟ ರೀತಿಯ ಪಾರ್ಕ್ ನಿರ್ಮಾಣವಾಗಲಿದೆ.
ಉಡುಪಿ ಜಿಲ್ಲೆಯಲ್ಲಿ 15 ವರ್ಷ ಒಳಗಿನ 1228 ವಿಕಲ ಚೇತನ ಮಕ್ಕಳಿದ್ದು ಇವರು ತಮ್ಮ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯಲು ಪಾರ್ಕ್ ಅನುಕೂಲವಾಗಲಿದೆ. ಇದಲ್ಲದೆ, ಇದರಲ್ಲಿ ಥೆರಪಿ ಸ್ವಿಂಗ್ಸ್ ಗಳು, ಬ್ಯಾಲನ್ಸ್ ಬೀಮ್ಸ್ ಗಳು, ಸಂಗೀತ ವಾದ್ಯಗಳು, ಸ್ಪರ್ಶ ಸಂವೇದನಾ ಮಾರ್ಗಗಳು, ಮರಳು ಮತ್ತು ನೀರಿನ ಆಟದ ವಲಯಗಳು ಇರಲಿದೆ. ಹೂಗಳ ಸುವಾಸನೆ ವೈವಿಧ್ಯ ಅರಿಯಲು ಸೆನ್ಸೇಶನ್ ಸೆನ್ಸರಿ ಪಾರ್ಕ್ ಕೂಡ ಬರಲಿದೆ.


ಪಾರ್ಕ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದೊಂದು ಇಡೀ ರಾಜ್ಯ, ದೇಶಕ್ಕೆ ಮಾದರಿ ಆಗಬಲ್ಲ ಪಾರ್ಕ್ ಆಗಲಿದೆ. ಇದನ್ನು ನಾಲ್ಕು ವರ್ಷದಲ್ಲಿ ಪೂರ್ಣಗೊಳಿಸಲು ಯೋಜನೆ ಹಾಕಿದ್ದಾರೆ. ಆದರೆ ಎರಡೇ ವರ್ಷದಲ್ಲಿ ಕಾಮಗಾರಿ ಪೂರ್ತಿಗೊಳಿಸಿ ನಮ್ಮ ಅವಧಿಯಲ್ಲೇ ಉದ್ಘಾಟನೆ ಮಾಡುವಂತಾಗಬೇಕು. ನಮ್ಮ ಇಲಾಖೆಯಿಂದಲೂ ಶೀಘ್ರ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಾಲ್, ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ರುದ್ರಣ್ಣ, ಶ್ರೀಮತಿ ರತ್ನ, ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿ, ಜೈ ವಿಠ್ಠಲ್, ಹರಿಪ್ರಸಾದ ರಾಯ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am