ಬ್ರೇಕಿಂಗ್ ನ್ಯೂಸ್
19-05-26 10:44 am HK News Staffer ಕರಾವಳಿ
ಮಂಗಳೂರು, ಮೇ 19: ಒಂದು ರೂಪಾಯಿಗೆ ಒಂದು ಶರ್ಟ್, 999 ರೂ.ಗೆ ಮೂರು ಬ್ಯಾಗಿ ಪ್ಯಾಂಟ್. ಬಜ್ಪೆ ಪೇಟೆಯಲ್ಲಿ ಬಟ್ಟೆ ಅಂಗಡಿ ಶುಭಾರಂಭಕ್ಕೆ ಹೀಗೊಂದು ಆಫರ್ ನೀಡಲಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಇಂಥದ್ದೊಂದು ಆಫರ್ ವಿಡಿಯೋ ವೈರಲ್ ಆಗುತ್ತಿದ್ದಂತೆ ಮೊನ್ನೆ ಮೇ 17ರ ಭಾನುವಾರ ಜನರು ಸಾಗರೋಪಾದಿಯಲ್ಲಿ ಮುಗಿಬಿದ್ದು ಜಾಮ್ ಟೈಟ್ ಆಗಿತ್ತು.
ಮಂಗಳೂರು ಹೊರವಲಯದ ಬಜ್ಪೆ ಪೇಟೆಯಲ್ಲಿ ಬಟ್ಟೆ ಅಂಗಡಿಯ ಉದ್ಘಾಟನೆಯನ್ನು ಮೇ 17ರ ಭಾನುವಾರ ಏರ್ಪಡಿಸಲಾಗಿತ್ತು. ಜನರನ್ನು ಆಕರ್ಷಿಸಲು ಎಂಬಂತೆ ಒಂದು ರೂ.ಗೆ ಒಂದು ಆಕರ್ಷಕ ಶರ್ಟ್ ಎನ್ನುವ ಆಫರ್ ಇರೋದಾಗಿ ವಿಡಿಯೋ ಹರಿಯಬಿಡಲಾಗಿತ್ತು. ವಿಡಿಯೋ ಇನ್ ಸ್ಟಾ ಗ್ರಾಮ್ ಪೇಜ್ ಗಳಲ್ಲಿ ವೈರಲ್ ಆಗಿದ್ದು ಯುವ ಜನರು ಭಾರೀ ಸಂಖ್ಯೆಯಲ್ಲಿ ಮುಗಿಬಿದ್ದಿದ್ದಾರೆ. ಎಷ್ಟರ ಮಟ್ಟಿಗೆ ಅಂದ್ರೆ, ಬಟ್ಟೆ ಅಂಗಡಿಯಲ್ಲಿ ಕಂಟ್ರೋಲ್ ಮಾಡಲಾಗದೆ ಜನರನ್ನು ಒಳಗೆ ಹೊರಗೆ ಕಳಿಸುವುದೇ ಅಸಾಧ್ಯ ಎನ್ನುವಂತಾಗಿತ್ತು.

ವಿಚಿತ್ರ ಅಂದರೆ, ಬಟ್ಟೆ ಅಂಗಡಿ ಉದ್ಘಾಟನೆಗೆಂದು ಬಂದಿದ್ದ ಶಾಸಕ ಉಮಾನಾಥ ಕೋಟ್ಯಾನ್ ಕೂಡ ಇವರ ಎಡೆಯಲ್ಲಿ ಸಿಕ್ಕಿಬೀಳುವಂತಾಗಿತ್ತು. ಜನರ ನಡುವೆ ಸಿಕ್ಕಿಬಿದ್ದು ಶಾಸಕರೇ ಅಪ್ಪಚ್ಚಿಯಾಗಿದ್ದು, ಅಲ್ಲಿಂದ ಹೊರಬರುವುದಕ್ಕೆ ಉಸ್ಸಪ್ಪಾ ಎನ್ನುವಂತಾಗಿತ್ತು. ಉಚಿತ ಕೊಡುತ್ತೇವೆ ಅಂದ್ರೆ ಎಷ್ಟೊಂದು ಜನ ಮುಗಿಬೀಳುತ್ತಾರೆ ಅನ್ನುವುದಕ್ಕೆ ಇಲ್ಲಿ ಸೇರಿದ್ದ ಜನರೇ ಸಾಕ್ಷಿಯಾಗಿದ್ದರು.
ಹೆಚ್ಚಿನ ಸಂಖ್ಯೆಯಲ್ಲಿ ಯುವಕರೇ ಬಂದು ಸೇರಿದ್ದು, ಬ್ಯಾಗಿ ಪ್ಯಾಂಟ್, ಕಂಪನಿ ಶರ್ಟ್ ಗಳನ್ನು ಕೊಳ್ಳಲು ಮುಂದಾಗಿದ್ದರು. ಒಂದೇ ದಿನ ಅಂಗಡಿ ಮಳಿಗೆ ಖಾಲಿಯಾಗುವಷ್ಟರ ಮಟ್ಟಿಗೆ ಜನ ಸೇರಿದ್ದರು. ಆದರೆ ಮೊದಲು ಬಂದ ನೂರು ಜನರಿಗೆ ಮಾತ್ರ ಒಂದು ರೂ. ಶರ್ಟ್ ಆಫರ್ ಇತ್ತು. ಆದರೆ ಅಲ್ಲಿ ಸಾವಿರಕ್ಕೂ ಹೆಚ್ಚು ಜನರು ಸೇರಿದ್ದು ತೀವ್ರ ನೂಕುನುಗ್ಗಲು ಉಂಟಾಗಿತ್ತು.
₹1 shirt offer creates chaos in #Bajpe, #Mangaluru! Huge crowd gathers at a clothing store after viral social media promo. Even #MLAUmanathKotian got caught in the rush during the inauguration. Only first 100 customers were eligible for the offer. #Mangaluru #Bajpe pic.twitter.com/Mkx29731db
— Headline Karnataka (@hknewsonline) May 19, 2026
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
19-05-26 04:27 pm
HK News Staffer
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
19-05-26 10:47 pm
HK News Desk
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
20-05-26 09:53 am
HK News Staffer
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm
Don Vicky Shetty, Threat: ಡಾನ್ ವಿಕ್ಕಿ ಶೆಟ್ಟಿ...
18-05-26 06:49 pm