ಬ್ರೇಕಿಂಗ್ ನ್ಯೂಸ್
22-05-26 09:47 pm HK News Staffer ಕರಾವಳಿ
ಮಂಗಳೂರು, ಮೇ 22: ದೇಶವನ್ನೇ ಬೆಚ್ಚಿಬೀಳಿಸಿದ್ದ ಮಂಗಳೂರು ವಿಮಾನ ದುರಂತ ಸಂಭವಿಸಿ ಇಂದಿಗೆ 16 ವರ್ಷಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ತಣ್ಣೀರುಬಾವಿಯ ಹುತಾತ್ಮರ ಸ್ಮಾರಕದಲ್ಲಿ ಜಿಲ್ಲಾಡಳಿತದಿಂದ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಸಾರ್ವಜನಿಕರು ಪುಷ್ಪನಮನ ಸಲ್ಲಿಸಿ ಮೃತರನ್ನು ಸ್ಮರಿಸಿದರು.
2010ರ ಮೇ 22ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ನಿಯಂತ್ರಣ ತಪ್ಪಿ ಭೀಕರ ದುರಂತಕ್ಕೀಡಾಗಿತ್ತು. ಟೇಬಲ್ ಟಾಪ್ ರನ್ವೇಯಲ್ಲಿ ಲ್ಯಾಂಡಿಂಗ್ ಮಾಡುವಾಗ ವಿಮಾನ ಸೂಚನಾ ಗೋಪುರದ ಕಂಬಗಳಿಗೆ ಡಿಕ್ಕಿ ಹೊಡೆದು ಕಣಿವೆಗೆ ಉರುಳಿಬಿದ್ದಿತ್ತು. ಕ್ಷಣಾರ್ಧದಲ್ಲೇ ವಿಮಾನ ಎರಡು ಭಾಗವಾಗಿ ಬೆಂಕಿಗಾಹುತಿಯಾಗಿತ್ತು.
ವಿಮಾನದಲ್ಲಿ ಒಟ್ಟು 166 ಮಂದಿ ಪ್ರಯಾಣಿಸುತ್ತಿದ್ದು, ಅದರಲ್ಲಿ 158 ಮಂದಿ ಸಾವನ್ನಪ್ಪಿದ್ದರು. ಕೇವಲ 8 ಮಂದಿ ಮಾತ್ರ ಪವಾಡ ಸದೃಷ ರೀತಿಯಲ್ಲಿ ಬದುಕುಳಿದಿದ್ದರು. ಮೃತರಲ್ಲಿ 12 ಮಂದಿಯ ಗುರುತು ಪತ್ತೆಯಾಗದ ಹಿನ್ನೆಲೆ ಅವರ ಅಂತ್ಯಸಂಸ್ಕಾರವನ್ನು ತಣ್ಣೀರುಬಾವಿ ನದಿ ತೀರದಲ್ಲಿ ನಡೆಸಲಾಗಿತ್ತು. ಬಳಿಕ ಇದೇ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗಿತ್ತು.
ದುರಂತಕ್ಕೀಡಾದ ವಿಮಾನದಲ್ಲಿ 127 ಮಂದಿ ವಯಸ್ಕರು, 19 ಮಕ್ಕಳು, 4 ಶಿಶುಗಳು ಹಾಗೂ 6 ಮಂದಿ ಸಿಬ್ಬಂದಿ ಸೇರಿ ಒಟ್ಟು 166 ಮಂದಿ ಇದ್ದರು. ದುಬೈನಿಂದ ರಾತ್ರಿ 1.20ಕ್ಕೆ ಹೊರಟಿದ್ದ ವಿಮಾನ ಬೆಳಗ್ಗೆ ಮಂಗಳೂರಿಗೆ ಸುರಕ್ಷಿತವಾಗಿ ತಲುಪಬೇಕಾಗಿತ್ತು. ಆದರೆ ಕೆಂಜಾರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಲೆಕ್ಕಾಚಾರ ತಪ್ಪಿ ಭೀಕರ ಅನಾಹುತ ಸಂಭವಿಸಿತು.
ದುರಂತದಿಂದ ಬದುಕುಳಿದ ಎಂಟು ಮಂದಿಯಲ್ಲಿ ಉಳ್ಳಾಲದ ಉಮ್ಮರ್ ಫಾರೂಕ್, ಪುತ್ತೂರಿನ ಅಬ್ದುಲ್ಲಾ, ಬಾಂಗ್ಲಾದೇಶ ಮೂಲದ ವಿದ್ಯಾರ್ಥಿನಿ ಸಬ್ರೀನಾ, ಕಾಸರಗೋಡಿನ ಕೃಷ್ಣನ್, ಕಣ್ಣೂರಿನ ಮಾಹಿನ್ ಕುಟ್ಟಿ, ವಾಮಂಜೂರಿನ ಜುಯೆಲ್ ಡಿಸೋಜ, ಮಂಗಳೂರಿನ ಮಹಮದ್ ಉಸ್ಮಾನ್ ಹಾಗೂ ತಣ್ಣೀರುಬಾವಿಯ ಪ್ರದೀಪ್ ಸೇರಿದ್ದರು.
ಘಟನೆಯ ದಿನ ಹವಾಮಾನ ವರದಿ ನೀಡುತ್ತಿದ್ದ ಐಎಂಡಿಯ ನಿವೃತ್ತ ಅಧಿಕಾರಿ ಆರ್.ಜೆ. ವಾಸ್, ಆ ದಿನದ ಭೀಕರ ನೆನಪುಗಳನ್ನು ಹಂಚಿಕೊಂಡಿದ್ದಾರೆ. “ಆ ಸಮಯದಲ್ಲಿ ದೃಶ್ಯಮಾನತೆ ಆರು ಕಿಲೋಮೀಟರ್ ಇತ್ತು. ಹವಾಮಾನ ಸಹ ಸಾಮಾನ್ಯವಾಗಿಯೇ ಇತ್ತು. ಬೆಳಗ್ಗೆ 6 ಗಂಟೆ 3 ನಿಮಿಷಕ್ಕೆ ದುರಂತ ಸಂಭವಿಸಿತು. ನನ್ನ 31 ವರ್ಷದ ಸೇವಾ ಅವಧಿಯಲ್ಲಿ ಮರೆಯಲಾಗದ ದೊಡ್ಡ ಘಟನೆ ಅದೇ” ಎಂದು ಹೇಳಿದ್ದಾರೆ.
22-05-26 10:24 pm
HK News Desk
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲದಾಗಿದೆ, ಇದೊಂದು...
22-05-26 02:45 pm
ರಾಜ್ಯಾದ್ಯಂತ ವರುಣಾರ್ಭಟ ; ಒಂದೇ ಮಳೆಗೆ ಬೆಚ್ಚಿಬಿದ...
22-05-26 10:45 am
22-05-26 05:57 pm
HK News Staffer
ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ತರಗತಿ...
22-05-26 11:53 am
ಜಾಲತಾಣದಲ್ಲಿ ಜೆನ್- ಜಿ ಬಿರುಗಾಳಿ ; ಸಿಜೆಐ ವಿರುದ್ಧ...
21-05-26 02:49 pm
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
22-05-26 09:47 pm
HK News Staffer
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
22-05-26 09:25 pm
HK News Staffer
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm
ಮಾನಸಿಕ ಖಿನ್ನತೆ ; ಮನೆಯ ಬಾಲ್ಕನಿಯಲ್ಲೇ ತಲೆಗೆ ಶೂಟ್...
22-05-26 07:18 pm
ಗಿರವಿ ಚಿನ್ನ ಕರಗಿಸಿ ಕೋಟ್ಯಂತರ ರೂ. ಲೂಟಿ, ಎಸ್ಡಿಜ...
21-05-26 08:28 pm
ಕುಂಟಿಕಾನ; ಆವರಣ ಗೋಡೆ ಕುಸಿದು ಮಣ್ಣಿನಡಿಗೆ ಬಿದ್ದ ಸ...
21-05-26 07:33 pm