ಬ್ರೇಕಿಂಗ್ ನ್ಯೂಸ್
27-05-26 12:29 pm HK News Desk ಕರಾವಳಿ
ಮಂಗಳೂರು, ಮೇ 27: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದ (ಎನ್ಎಂಡಿಸಿ) ಜೊತೆ ವಿಲೀನಗೊಳಿಸಬೇಕು ಹಾಗೂ ಕುದುರೆಮುಖ ಸಂಸ್ಥೆಯ ಕಾರ್ಮಿಕರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಬಂಡವಾಳ ಹೂಡಿಕೆ ಮತ್ತು ಹೊಸ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು ನೀಡಬೇಕು ಎಂದು ಮನವಿ ಮಾಡಿದರು. ಜಿಲ್ಲೆಗೆ ಭೇಟಿ ನೀಡಿ ಕೇಂದ್ರದ ಅಧೀನದಲ್ಲಿರುವ ಕೈಗಾರಿಕೆಗಳ ಅಭಿವೃದ್ಧಿ ಕಾರ್ಯಗಳನ್ನು ಖುದ್ದು ಪರಿಶೀಲಿಸಿ, ಸ್ಥಳೀಯ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ ನೀಡಿ ಜಿಲ್ಲಾ ಪ್ರವಾಸ ಕೈಗೊಳ್ಳಬೇಕು ಎಂದು ಕೋರಿದರು.
ರಾಜ್ಯ ಸರಕಾರವು ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ ಗಣಿಗಾರಿಕೆಗೆ ಅನುಮತಿ ನೀಡದಿರುವುದರಿಂದ ಕಂಪನಿಯ ಕಾರ್ಯಾಚರಣೆಗೆ ತೀವ್ರ ತೊಡಕಾಗಿದೆ. ಇದರಿಂದ ಕಾರ್ಮಿಕರ ಭವಿಷ್ಯವೂ ಅತಂತ್ರವಾಗಿದೆ. ಕಳೆದ ವಿಧಾನಸಭಾ ಅಧಿವೇಶನದಲ್ಲಿ ಕುದುರೆಮುಖ ಗಣಿಗಾರಿಕೆ ಸಮಸ್ಯೆ ಕುರಿತಾಗಿ ಗಮನಸೆಳೆದಿದ್ದೆ. ಸರ್ಕಾರ ಮಾತ್ರ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಗಣಿಗಾರಿಕೆ ಅನುಮತಿ ನೀಡುವಂತೆ ರಾಜ್ಯ ಸರಕಾರದ ಮೇಲೆ ಕೇಂದ್ರವು ಒತ್ತಡ ಹೇರಬೇಕು ಎಂದು ಶಾಸಕರು ಮನವಿಯಲ್ಲಿ ತಿಳಿಸಿದರು.
ಕುದುರೆಮುಖ ಸಂಸ್ಥೆಯನ್ನು ಎನ್ಎಂಡಿಸಿಯೊಂದಿಗೆ ವಿಲೀನಗೊಳಿಸುವುದರಿಂದ ಕಂಪನಿಯ ಪುನಶ್ಚೇತನ ಸಾಧ್ಯವಾಗಲಿದೆ ಹಾಗೂ ಕರಾವಳಿ ಭಾಗದ ಕೈಗಾರಿಕಾ ಅಭಿವೃದ್ಧಿಗೆ ಹೊಸ ವೇಗ ದೊರೆಯಲಿದೆ ಎಂದು ಡಾ. ಭರತ್ ಶೆಟ್ಟಿ ಪ್ರತಿಪಾದಿಸಿದರು. ಮತ್ತಿತರ ಕೈಗಾರಿಕಾ ಸಮಸ್ಯೆಗಳ ಕುರಿತು ಸಚಿವರೊಂದಿಗೆ ಚರ್ಚಿಸಿ ವಿವರವಾದ ಮನವಿ ಪತ್ರ ಸಲ್ಲಿಸಿದರು.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm