ಬ್ರೇಕಿಂಗ್ ನ್ಯೂಸ್
02-06-26 01:18 pm HK News Staffer ಕರಾವಳಿ
ಮಂಗಳೂರು, ಜೂನ್ 2 : ಮುಂದಿನ ವರ್ಷ ನವರಾತ್ರಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬರಬೇಕು, ಬರಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರು ಕಳೆದ ನವರಾತ್ರಿ ಸಂದರ್ಭದಲ್ಲಿ ನೀಡಿದ್ದ ಹೇಳಿಕೆ ಈಗ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿದ್ದು, ಮಿಥುನ್ ರೈ ಮಾತು ನಿಜವಾಯ್ತು ಎನ್ನುವ ಮಾತು ಕರಾವಳಿಯಲ್ಲಿ ಚರ್ಚೆಗೆ ಕಾರಣವಾಗಿದೆ.
2025ರ ಅಕ್ಟೋಬರ್ ನಲ್ಲಿ ನಡೆದ ಮಿಥುನ್ ರೈ ನೇತೃತ್ವದ 10ನೇ ವರ್ಷದ ಪಿಲಿ ನಲಿಕೆ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಬಂದಿದ್ದರು. ಈ ವೇಳೆ, ಮಿಥುನ್ ರೈ ಮಾತನಾಡುತ್ತ ಡಿಸಿಎಂ ಡಿ.ಕೆ. ಶಿವಕುಮಾರ್ ಈ ಬಾರಿ ಡಿಸಿಎಂ ಆಗಿ ಬಂದಿದ್ದಾರೆ. ಮುಂದಿನ ಬಾರಿಯ ಪಿಲಿ ನಲಿಕೆ ಕಾರ್ಯಕ್ರಮಕ್ಕೆ ಖಂಡಿತವಾಗಿಯೂ ಮುಖ್ಯಮಂತ್ರಿ ಆಗಿ ಬರಲಿದ್ದಾರೆ. ಆ ರೀತಿಯ ಆಶೀರ್ವಾದವನ್ನು ದೇವಿ ಅನುಗ್ರಹಿಸಲಿದ್ದಾರೆ ಎಂದು ಹೇಳಿದ್ದರು. ಬಹಿರಂಗ ಸಭೆಯಲ್ಲಿ ನೀಡಿದ್ದ ಹೇಳಿಕೆಗೆ ಭಾರೀ ಕರತಾಡನವೂ ಬಂದಿತ್ತು.





ಇದೇ ಸಂದರ್ಭದಲ್ಲಿ ವೇದಿಕೆಯಲ್ಲಿದ್ದ ಇತರೇ ಕಾಂಗ್ರೆಸ್ ನಾಯಕರು ಕೂಡ ಡಿ.ಕೆ. ಶಿವಕುಮಾರ್ ಅವರ ನಾಯಕತ್ವ ಹಾಗೂ ಪಕ್ಷಕ್ಕೆ ನೀಡಿರುವ ಕೊಡುಗೆಯನ್ನು ಪ್ರಶಂಸಿಸಿ, ಅವರು ಶೀಘ್ರದಲ್ಲೇ ಮುಖ್ಯಮಂತ್ರಿಯಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಮಿಥುನ್ ರೈ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಒತ್ತಾಯ ಮಾಡುತ್ತಾ, “ಬೆಂಗಳೂರಿನಂತೆ ವೇಗದಲ್ಲಿ ಮಂಗಳೂರು ಕೂಡ ಬೆಳೆಯಬೇಕು. ಅದಕ್ಕಾಗಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು” ಎಂದು ಹೇಳಿದ್ದರು. ಸ್ಥಳೀಯ ಹುಲಿ ವೇಷಧಾರಿ ಕಲಾವಿದರ ಅಭಿವೃದ್ಧಿ ಮತ್ತು ಉದ್ಯೋಗಾವಕಾಶಗಳ ಕುರಿತಾಗಿಯೂ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ್ದ ಡಿ.ಕೆ. ಶಿವಕುಮಾರ್, ತಾವು ಯಾವುದೇ ಪೂರ್ವ ನಿಯೋಜಿತ ಕಾರ್ಯಕ್ರಮಕ್ಕೆ ಬಂದಿರಲಿಲ್ಲ ಎಂದೂ, ಜನರ ಪ್ರೀತಿ ಹಾಗೂ ಆತ್ಮೀಯತೆಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ ಎಂದೂ ಹೇಳಿದ್ದರು. ದಕ್ಷಿಣ ಕನ್ನಡ ಜಿಲ್ಲೆ ದೇಶದ ಪ್ರಮುಖ ಸಾಂಸ್ಕೃತಿಕ ಮತ್ತು ಶಕ್ತಿಶಾಲಿ ಪ್ರದೇಶಗಳಲ್ಲಿ ಒಂದಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದರು. ವಿಶೇಷ ಅಂದರೆ, ಪಿಲಿನಲಿಕೆ ಪ್ರತಿಷ್ಠಾನದ ವತಿಯಿಂದ ಮಿಥುನ್ ರೈ ನೇತೃತ್ವದಲ್ಲಿ ಡಿಕೆಶಿಗೆ ನೀಡಲಾಗಿದ್ದ ಗೌರವ ಫಲಕದಲ್ಲೂ “2026ರ ಸಿಎಂ ಡಿಕೆ ಶಿವಕುಮಾರ್” ಎಂದು ಉಲ್ಲೇಖಿಸಲಾಗಿತ್ತು.
#DKShivakumar will return next year as #CM” — #MithunRai statement at the 2025 #Pilinalike event in #Mangaluru is going viral again. With recent political developments, social media users are calling it a prediction that may have come true. #DKShivakumar #KarnatakaPolitics pic.twitter.com/QKCUxoBuuv
— Headline Karnataka (@hknewsonline) June 2, 2026
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm