ಬ್ರೇಕಿಂಗ್ ನ್ಯೂಸ್
16-06-26 11:35 am HK News Staffer ಕರಾವಳಿ
ಮಂಗಳೂರು, ಜೂನ್ 15 : ಬಸ್ಗಾಗಿ ಕಾಯುತ್ತಿರುವ ಪ್ರಯಾಣಿಕರು ದೂರದಿಂದ ನೋಡಿದರೆ ನಿಜವಾಗಿಯೂ ಬಸ್ ನಿಂತಿದೆಯೇನೋ ಎಂದು ಭ್ರಮಿಸುವಂತಹ ವಿಶಿಷ್ಟ ಬಸ್ ತಂಗುದಾಣ ಮಂಗಳೂರು ಹೊರವಲಯದ ಗುರುಪುರ ಸಮೀಪದ ಬಂಡಸಾಲೆಯಲ್ಲಿ ನಿರ್ಮಾಣವಾಗಿದ್ದು, ಇದೀಗ ಸಾರ್ವಜನಿಕರ ಗಮನ ಸೆಳೆಯುತ್ತಿದೆ.
ಗುರುಪುರದ ವಿ2 ಗೈಸ್ ಯುವಕ ಸಂಘದ ಸದಸ್ಯರು ತಮ್ಮ ಸಾಮಾಜಿಕ ಕಾಳಜಿ ಹಾಗೂ ಸೃಜನಶೀಲತೆಯನ್ನು ಒಗ್ಗೂಡಿಸಿ, ನಿಜವಾದ ಬಸ್ ಮಾದರಿಯಲ್ಲೇ ಬಸ್ ತಂಗುದಾಣವನ್ನು ವಿನೂತನವಾಗಿ ನಿರ್ಮಿಸಿದ್ದಾರೆ. ವಿಶೇಷ ವಿನ್ಯಾಸ, ಆಕರ್ಷಕ ಬಣ್ಣಗಳ ಬಳಕೆ ಮತ್ತು ಬಸ್ನ ಪ್ರತಿರೂಪದಂತೆ ರೂಪುಗೊಂಡಿರುವ ಈ ತಂಗುದಾಣ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ.
₹7 ಲಕ್ಷ ವೆಚ್ಚದಲ್ಲಿ ನಿರ್ಮಾಣ
ಬಸ್ ತಂಗುದಾಣವನ್ನು ಸುಮಾರು ₹7 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಹಿಂದೆ ಇದ್ದ ಬಸ್ ನಿಲ್ದಾಣ ಶಿಥಿಲಾವಸ್ಥೆಗೆ ತಲುಪಿದ್ದರಿಂದ, ಸಾರ್ವಜನಿಕರ ಅನುಕೂಲಕ್ಕಾಗಿ ಯುವಕರು ಸ್ವಯಂಪ್ರೇರಿತವಾಗಿ ಮುಂದಾಗಿ ಹೊಸ ತಂಗುದಾಣ ನಿರ್ಮಿಸುವ ಸಂಕಲ್ಪ ಕೈಗೊಂಡಿದ್ದರು. ಅದರ ಫಲವಾಗಿ ಇದೀಗ ಬಂಡಸಾಲೆಗೆ ವಿಶಿಷ್ಟ ಗುರುತನ್ನು ತಂದುಕೊಡುವ ಬಸ್ ಮಾದರಿಯ ತಂಗುದಾಣ ತಲೆ ಎತ್ತಿದೆ.



ಪ್ರಯಾಣಿಕರಿಗೆ ಆಶ್ರಯ, ಪ್ರವಾಸಿಗರಿಗೆ ಆಕರ್ಷಣೆ
ಕೇವಲ ಬಸ್ ಕಾಯುವ ಸ್ಥಳವಾಗಿ ಉಳಿಯದೆ, ಈ ಬಸ್ ತಂಗುದಾಣ ಈಗ ಸೆಲ್ಫಿ ಪ್ರಿಯರು ಹಾಗೂ ಪ್ರವಾಸಿಗರಿಗೂ ಹೊಸ ಆಕರ್ಷಣೆಯ ಕೇಂದ್ರವಾಗಿದೆ. ದೂರದಿಂದ ನೋಡಿದರೆ ರಸ್ತೆಯ ಬದಿಯಲ್ಲಿ ನಿಜವಾದ ಬಸ್ ನಿಂತಿರುವಂತೆ ಕಾಣುವ ಈ ವಿನ್ಯಾಸ ಎಲ್ಲರಲ್ಲೂ ಕುತೂಹಲ ಮೂಡಿಸುತ್ತಿದೆ.
ಯುವಕರ ಸಾಮಾಜಿಕ ಕಾಳಜಿಗೆ ಶ್ಲಾಘನೆ
ಸಾರ್ವಜನಿಕರ ಅಗತ್ಯವನ್ನು ಮನಗಂಡು, ಸ್ವಂತ ಸಂಪನ್ಮೂಲಗಳನ್ನು ಬಳಸಿ ಗ್ರಾಮಕ್ಕೆ ಉಪಯುಕ್ತವಾಗುವ ಶಾಶ್ವತ ಸೌಲಭ್ಯ ನಿರ್ಮಿಸಿರುವ ವಿ2 ಗೈಸ್ ಯುವಕ ಸಂಘದ ಕಾರ್ಯಕ್ಕೆ ಸ್ಥಳೀಯರು ವ್ಯಾಪಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಬಂಡಸಾಲೆಯ ಈ ವಿನೂತನ ಬಸ್ ತಂಗುದಾಣ ಈಗ ಗುರುಪುರ ಭಾಗದ ಹೊಸ ಲ್ಯಾಂಡ್ಮಾರ್ಕ್ ಆಗಿ ಗುರುತಿಸಿಕೊಂಡಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 10:33 am
HK News Staffer
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am