ಬ್ರೇಕಿಂಗ್ ನ್ಯೂಸ್
06-01-21 08:18 pm Mangaluru Correspondent ಕರಾವಳಿ
ಮಂಗಳೂರು, ಜ.6: ಹೊಚ್ಚ ಹೊಸ ಟಿವಿ ಒಂದೇ ವರ್ಷದಲ್ಲಿ ಹಾಳಾಗಿದ್ದರಿಂದ ಬೇಸತ್ತ ಗ್ರಾಹಕರೊಬ್ಬರು ಲೀಗಲ್ ನೋಟಿಸ್ ಜಾರಿಗೊಳಿಸಿ, ಅದೇ ಕಂಪನಿಯ ಹೊಸ ಟಿವಿ ಪಡೆದ ಪ್ರಕರಣ ಬೆಳಕಿಗೆ ಬಂದಿದೆ.
ಮಂಗಳೂರಿನ ಪ್ರತಿಷ್ಠಿತ ಪತ್ರಿಕೆಯೊಂದರ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಹಕರೊಬ್ಬರು ಕಳೆದ ವರ್ಷ ಹೊಚ್ಚ ಹೊಸ ಸ್ಯಾಮ್ಸಂಗ್ ಟಿವಿಯೊಂದನ್ನು ನಗರದ ಸಿಟಿ ಸೆಂಟರ್ ಮಾಲ್ನಲ್ಲಿ ಇರುವ ರಿಲಯನ್ಸ್ ಡಿಜಿಟಲ್ ಮಳಿಗೆಯಲ್ಲಿ ಖರೀದಿಸಿದ್ದರು. 39 ಸಾವಿರ ರೂ. ಬೆಲೆ ನೀಡಿದ್ದ ಸ್ಯಾಮ್ಸಂಗ್ ಟಿವಿ 10 ತಿಂಗಳಲ್ಲಿ ಕೆಟ್ಟು ಹೋಗಿತ್ತು.
ಈ ಬಗ್ಗೆ ಅವರು ರಿಲಯನ್ಸ್ ಡಿಜಿಟಲ್ಗೆ ದೂರು ಸಲ್ಲಿಸಿದ್ದರು. ಬಳಿಕ ಇದನ್ನು ಸಂಬಂಧಪಟ್ಟ ಸೇವಾ ಕೇಂದ್ರಕ್ಕೆ ರಿಲಯನ್ಸ್ ಮಳಿಗೆಯವರು ಕಳುಹಿಸಿದ್ದರು.
ಆದರೆ, ನಾಲ್ಕು ದಿನದಲ್ಲಿ ಟಿವಿಯನ್ನು ರಿಪೇರಿ ಮಾಡಿಕೊಡುವುದಾಗಿ ಹೇಳಿದ್ದ ಸೇವಾ ಕೇಂದ್ರ ವಾರವಾದರೂ ಈ ಬಗ್ಗೆ ಸ್ಪಂದನೆ ಮಾಡಿರಲಿಲ್ಲ.
ಸಾಕಷ್ಟು ಇಮೇಲ್, ದೂರವಾಣಿ ಕರೆ ಬಳಿಕ ಬೇಸತ್ತ ಗ್ರಾಹಕರು ಸ್ಯಾಮ್ಸಂಗ್ ಮತ್ತು ರಿಲಯನ್ಸ್ ಡಿಜಿಟಲ್ಗೆ ಲೀಗಲ್ ನೋಟಿಸ್ ಜಾರಿಗೊಳಿಸಿದರು. ಜೊತೆಗೆ ಗ್ರಾಹಕ ಕೇಂದ್ರಕ್ಕೆ ದೂರನ್ನೂ ಸಲ್ಲಿಸಿದರು. ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಸ್ಯಾಮ್ ಸಂಗ್ ಕಂಪೆನಿ ಹೊಸ ಟಿವಿಯೊಂದನ್ನು ನೀಡಿ ಇಡೀ ಪ್ರಕರಣಕ್ಕೆ ಸುಖಾಂತ್ಯ ಹಾಡಿದೆ.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm