ಬ್ರೇಕಿಂಗ್ ನ್ಯೂಸ್
06-01-21 08:18 pm Mangaluru Correspondent ಕರಾವಳಿ
ಮಂಗಳೂರು, ಜ.6: ಹೊಚ್ಚ ಹೊಸ ಟಿವಿ ಒಂದೇ ವರ್ಷದಲ್ಲಿ ಹಾಳಾಗಿದ್ದರಿಂದ ಬೇಸತ್ತ ಗ್ರಾಹಕರೊಬ್ಬರು ಲೀಗಲ್ ನೋಟಿಸ್ ಜಾರಿಗೊಳಿಸಿ, ಅದೇ ಕಂಪನಿಯ ಹೊಸ ಟಿವಿ ಪಡೆದ ಪ್ರಕರಣ ಬೆಳಕಿಗೆ ಬಂದಿದೆ.
ಮಂಗಳೂರಿನ ಪ್ರತಿಷ್ಠಿತ ಪತ್ರಿಕೆಯೊಂದರ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಹಕರೊಬ್ಬರು ಕಳೆದ ವರ್ಷ ಹೊಚ್ಚ ಹೊಸ ಸ್ಯಾಮ್ಸಂಗ್ ಟಿವಿಯೊಂದನ್ನು ನಗರದ ಸಿಟಿ ಸೆಂಟರ್ ಮಾಲ್ನಲ್ಲಿ ಇರುವ ರಿಲಯನ್ಸ್ ಡಿಜಿಟಲ್ ಮಳಿಗೆಯಲ್ಲಿ ಖರೀದಿಸಿದ್ದರು. 39 ಸಾವಿರ ರೂ. ಬೆಲೆ ನೀಡಿದ್ದ ಸ್ಯಾಮ್ಸಂಗ್ ಟಿವಿ 10 ತಿಂಗಳಲ್ಲಿ ಕೆಟ್ಟು ಹೋಗಿತ್ತು.
ಈ ಬಗ್ಗೆ ಅವರು ರಿಲಯನ್ಸ್ ಡಿಜಿಟಲ್ಗೆ ದೂರು ಸಲ್ಲಿಸಿದ್ದರು. ಬಳಿಕ ಇದನ್ನು ಸಂಬಂಧಪಟ್ಟ ಸೇವಾ ಕೇಂದ್ರಕ್ಕೆ ರಿಲಯನ್ಸ್ ಮಳಿಗೆಯವರು ಕಳುಹಿಸಿದ್ದರು.
ಆದರೆ, ನಾಲ್ಕು ದಿನದಲ್ಲಿ ಟಿವಿಯನ್ನು ರಿಪೇರಿ ಮಾಡಿಕೊಡುವುದಾಗಿ ಹೇಳಿದ್ದ ಸೇವಾ ಕೇಂದ್ರ ವಾರವಾದರೂ ಈ ಬಗ್ಗೆ ಸ್ಪಂದನೆ ಮಾಡಿರಲಿಲ್ಲ.
ಸಾಕಷ್ಟು ಇಮೇಲ್, ದೂರವಾಣಿ ಕರೆ ಬಳಿಕ ಬೇಸತ್ತ ಗ್ರಾಹಕರು ಸ್ಯಾಮ್ಸಂಗ್ ಮತ್ತು ರಿಲಯನ್ಸ್ ಡಿಜಿಟಲ್ಗೆ ಲೀಗಲ್ ನೋಟಿಸ್ ಜಾರಿಗೊಳಿಸಿದರು. ಜೊತೆಗೆ ಗ್ರಾಹಕ ಕೇಂದ್ರಕ್ಕೆ ದೂರನ್ನೂ ಸಲ್ಲಿಸಿದರು. ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಸ್ಯಾಮ್ ಸಂಗ್ ಕಂಪೆನಿ ಹೊಸ ಟಿವಿಯೊಂದನ್ನು ನೀಡಿ ಇಡೀ ಪ್ರಕರಣಕ್ಕೆ ಸುಖಾಂತ್ಯ ಹಾಡಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am