ಬ್ರೇಕಿಂಗ್ ನ್ಯೂಸ್
23-06-26 06:02 pm HK News Staffer ಕರಾವಳಿ
ಮಂಗಳೂರು , ಜೂ.23: ಮಂಗಳೂರಿನ ಖಾಝಿಯಾಗಿ ಸೇವೆ ಸಲ್ಲಿಸಿ ಮುಸ್ಲಿಂ ಸಮುದಾಯದ ಧಾರ್ಮಿಕ ಹಾಗೂ ಸಾಮಾಜಿಕ ಬದುಕಿಗೆ ಮಹತ್ವದ ಕೊಡುಗೆ ನೀಡಿದ್ದ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನದ ಸುದ್ದಿ ತಿಳಿದು ಕರ್ನಾಟಕ ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಶೋಕ ಸಂದೇಶ ಬಿಡುಗಡೆ ಮಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ಹಲವು ದಶಕಗಳ ಕಾಲ ಧಾರ್ಮಿಕ ಮಾರ್ಗದರ್ಶನ ನೀಡಿದ ಮುಸ್ಲಿಯಾರ್ ಅವರು ತಮ್ಮ ಸಂಪೂರ್ಣ ಜೀವನವನ್ನು ಧರ್ಮ, ಶಿಕ್ಷಣ ಹಾಗೂ ಸಮಾಜ ಸೇವೆಗೆ ಸಮರ್ಪಿಸಿದ್ದರು ಎಂದು ಸ್ಮರಿಸಿದ್ದಾರೆ. ಅವರ ಮಾರ್ಗದರ್ಶನದಿಂದ ಸಾವಿರಾರು ಜನರು ಸನ್ಮಾರ್ಗದಲ್ಲಿ ಸಾಗಿದ್ದು, ಸಮಾಜದಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸುವಲ್ಲಿ ಅವರು ಮಹತ್ತರ ಪಾತ್ರ ವಹಿಸಿದ್ದರು ಎಂದು ತಿಳಿಸಿದ್ದಾರೆ.
ಮುಸ್ಲಿಯಾರ್ ಅವರ ಸರಳ ವ್ಯಕ್ತಿತ್ವ, ಆಳವಾದ ಧಾರ್ಮಿಕ ಜ್ಞಾನ, ಮಾನವೀಯ ಮೌಲ್ಯಗಳು ಹಾಗೂ ಸಮನ್ವಯದ ಮನೋಭಾವ ಎಲ್ಲರಿಗೂ ಮಾದರಿಯಾಗಿತ್ತು. ಧಾರ್ಮಿಕ ನಾಯಕರಾಗಿದ್ದರೂ ಸಮಾಜದ ಎಲ್ಲ ವರ್ಗದ ಜನರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದ ಅವರು, ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂದೇಶವನ್ನು ನಿರಂತರವಾಗಿ ಸಾರುತ್ತಿದ್ದರು ಎಂದು ಯು.ಟಿ. ಖಾದರ್ ಹೇಳಿದ್ದಾರೆ.
ಅವರ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲದೆ ಇಡೀ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ, ಧಾರ್ಮಿಕ ಮೌಲ್ಯಗಳು ಹಾಗೂ ಸಾಮಾಜಿಕ ಏಕತೆಯನ್ನು ಬಲಪಡಿಸುವಲ್ಲಿ ಅವರು ವಹಿಸಿದ್ದ ಪಾತ್ರ ಸದಾ ಸ್ಮರಣೀಯವಾಗಿರಲಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.
ಅಲ್ಲಾಹ್ ತಆಲಾ ಅವರು ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರಿಗೆ ಜನ್ನತುಲ್ ಫಿರ್ದೌಸ್ನಲ್ಲಿ ಉನ್ನತ ಸ್ಥಾನವನ್ನು ಕರುಣಿಸಲಿ ಹಾಗೂ ಅವರ ಕುಟುಂಬಸ್ಥರು, ಶಿಷ್ಯರು, ಅಭಿಮಾನಿಗಳು ಮತ್ತು ಅಪಾರ ಸಂಖ್ಯೆಯ ಅನುಯಾಯಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಯು.ಟಿ. ಖಾದರ್ ಪ್ರಾರ್ಥಿಸಿದ್ದಾರೆ.
2010ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿಯಾಗಿ ಅವರು ಅಧಿಕಾರ ಸ್ವೀಕರಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೇರಳ ರಾಜ್ಯದ 200ಕ್ಕೂ ಅಧಿಕ ಜಮಾಅತ್ ಗಳ ಖಾಝಿಯಾಗಿದ್ದರು.
ಮಂಗಳೂರಿನ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಮೃತದೇಹದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜುಮಾ ಮಸೀದಿ ಪ್ರಮುಖರು ತಿಳಿಸಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm