ಬ್ರೇಕಿಂಗ್ ನ್ಯೂಸ್
30-06-26 11:39 am HK News Staffer ಕರಾವಳಿ
ಮಂಗಳೂರು, ಜೂನ್ 30: ಸುರತ್ಕಲ್ ಕಡಲ ತೀರದಿಂದ 33 ನಾಟಿಕಲ್ಸ್ ಮೈಲು ದೂರದ ಆಳ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಉಡುಪಿ ಮೂಲದ 6 ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ಪಡೆ ರಕ್ಷಣೆ ಮಾಡಿ ಮಂಗಳೂರು ಬಂದರಿಗೆ ಕರೆತಂದಿದೆ.
ಜೂನ್ 29ರ ಸಂಜೆ ನಾಲ್ಕು ಗಂಟೆಗೆ ಆಳ ಸಮುದ್ರದಲ್ಲಿ ಮೀನುಗಾರಿಕೆ ಬೋಟ್ ಅಪಾಯಕ್ಕೆ ಸಿಲುಕಿರುವ ಬಗ್ಗೆ ಇಂಡಿಯನ್ ಕೋಸ್ಟ್ ಗಾರ್ಡ್ ಗೆ ಮಾಹಿತಿ ಬಂದಿತ್ತು. ಕೂಡಲೇ ಅಲ್ಲಿಗೆ ತೆರಳಿದ್ದ ಐಸಿಜಿಎಸ್ ಸಚೇತ್ ಹಡಗಿನ ಮೂಲಕ ಕೋಸ್ಟ್ ಗಾರ್ಡ್ ಪಡೆ ಕಾರ್ಯ ನಡೆಸಿದೆ. ಮೀನುಗಾರರನ್ನು ರಕ್ಷಿಸಿದ ಯೋಧರು ಅವರನ್ನು ಅಲ್ಲಿಂದ ಸುರಕ್ಷಿತವಾಗಿ ಕರೆತಂದಿದ್ದಾರೆ.


ಉಡುಪಿಯ ಮಂಜು ಮಾತಾ ಹೆಸರಿನ ಮೀನುಗಾರಿಕಾ ಬೋಟ್ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದ ಅಪಾಯಕ್ಕೆ ಈಡಾಗಿತ್ತು. ಅದರಲ್ಲಿದ್ದವರು ತಮ್ಮನ್ನು ಬಚಾವ್ ಮಾಡುವಂತೆ ಸಂದೇಶ ಕಳಿಸಿದ್ದರು. ಬೋಟ್ ತಳಭಾಗಕ್ಕೆ ಹಾನಿಯಾಗಿ ಬೋಟ್ ನೊಳಗೆ ನೀರು ನುಗ್ಗತೊಡಗಿತ್ತು. ತುರ್ತು ಸಂದೇಶ ಸ್ವೀಕರಿಸಿದ ಕೋಸ್ಟ್ ಗಾರ್ಡ್ ಬೋಟ್ ICG ಸಚೇತ್ ಕಾರ್ಯಾಚರಣೆಗೆ ಮುಂದಾಗಿತ್ತು.
ಮುಳುಗುತ್ತಿದ್ದ ಮೀನುಗಾರಿಕಾ ಬೋಟನ್ನು ಪತ್ತೆ ಹಚ್ಚಿ 90 ನಿಮಿಷಗಳ ಕಾಲ ಸವಾಲಿನ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿತ್ತು. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ನಡುವೆ ರಿಮೋಟ್ ಆಪರೇಟೆಡ್ ಲೈಫ್ ಬಾಯ್ಸ್ ಗಳನ್ನು ಬಳಸಿ ರಕ್ಷಣಾ ಕಾರ್ಯ ನಡೆಸಿ, ಮೀನುಗಾರರನ್ನು ರಕ್ಷಿಸಲಾಗಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm